ಕ್ವಾರಂಟೈನ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ, ಇಬ್ಬರು ಸಾವು
ಬೋಪಾಲ್, ಮೇ 17: ಕ್ವಾರಂಟೈನ್ ವಿಚಾರಕ್ಕೆ ನಡೆದ ಗಲಾಟೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಎರಡು ಕುಟುಂಬಗಳ ನಡುವೆ ಜರುಗಿದ ಜಗಳದಲ್ಲಿ ಅಕ್ಕ-ತಮ್ಮ ಸಾವನ್ನಪ್ಪಿದ್ದಾರೆ ಎಂದು ಭಿಂದ್ ಪೊಲೀಸರು ತಿಳಿಸಿದ್ದಾರೆ.
ಭಿಂದ್ ಪ್ರದೇಶದ ಪ್ರೇಮ್ ನಗರದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ಕಪುರೆ ಖಾನ್ ಅವರ ಅಳಿಯ ಎರಡು ವಾರಗಳ ಹಿಂದೆ ಮನೆಗೆ ಭೇಟಿ ನೀಡಿದ್ದರು. ಆದ್ದರಿಂದ ಇಡೀ ಕುಟುಂಬವನ್ನು ಜಿಲ್ಲಾಡಳಿತ ಕ್ವಾರಂಟೈನ್ಗೆ ಒಳಗಾಗಿ ಎಂದು ಕೇಳಿಕೊಂಡಿತ್ತು. ಆದರೆ, ಅದೇ ಕುಟುಂಬದ ಮತ್ತೊಬ್ಬ ಸದಸ್ಯರ ಇನ್ನೊಂದು ಪ್ರದೇಶದಲ್ಲಿರುವ ಕುಟುಂಬದವರ ಮನೆಗೆ ಭೇಟಿ ನೀಡಿದ್ದರು.

ಈ ವಿಚಾರವಾಗಿ ನೆರೆಯ ಮನೆಯವರಾದ ಕಲಾ ಜಾತವ್ ಅವರು ಪ್ರಶ್ನಿಸಿದ್ದಾರೆ. ಕ್ವಾರಂಟೈನ್ನಲ್ಲಿರುವುದನ್ನು ಬಿಟ್ಟು ಬೇರೆ ಕಡೆ ಸುತ್ತಾಡುತ್ತಿದ್ದರೆ ಕೊರೊನಾ ವೈರಸ್ ಹರಡುವುದು ಮತ್ತು ಇತರರಿಗೆ ಅಪಾಯ ತರಬಹುದು ಎಂದು ಟೀಕಿಸಿದ್ದಾರೆ. ನಂತರ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದಿದೆ ಎಂದು ಬಿಂಧ್ ಪೊಲೀಸ್ ಅಧೀಕ್ಷಕ ನಾಗೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
ಈ ಗಲಾಟೆಯಲ್ಲಿ ಕಲ್ಲಿನಿಂದ ಹಲ್ಲೆಗೊಳಗಾದ 47 ವರ್ಷದ ಕಲಾ ಜತವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಾ ಜಾತವ್ ಅವರ ಸಹೋದರ 45 ವರ್ಷದ ವಿಷ್ಣು ಜಾತವ್ ಕೂಡ ಗಲಾಟೆಯಲ್ಲಿ ಗಾಯಗೊಂಡು, ಆಸ್ಪತ್ರೆಗೆ ಸೇರಿಲಾಗಿತ್ತು. ಆದರೆ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘರ್ಷಣೆಯಲ್ಲಿ ಗಾಯಗೊಂಡ ಆಕಾಶ್ ಜಾತವ್ ಮತ್ತು ರಮೇಶ್ ಜಾತವ್ ಗ್ವಾಲಿಯರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಐಪಿಸಿಯ ಸೆಕ್ಷನ್ 302 (ಕೊಲೆ), 307 (ಕೊಲೆ ಯತ್ನ) ಅಡಿಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಕಪುರೆ ಖಾನ್ ಮತ್ತು ಮೂವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ'' ಎಂದು ಎಸ್ಪಿ ತಿಳಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications