ಮದುವೆಯಾಗಿ 18 ದಿನಕ್ಕೆ ಪತಿಗೆ ಕೈಕೊಟ್ಟ ಪತ್ನಿ; ಪ್ರೇಮಿ ಜೊತೆ ಜೂಟ್!
ಭೋಪಾಲ್, ಜನವರಿ.13: ಮದುವೆಯಾಗಿ 18ನೇ ದಿನಕ್ಕೆ ಪತಿಗೆ ಕೈಕೊಟ್ಟ ಪತ್ನಿ ಪ್ರಿಯಕರನ ಜೊತೆಗೆ ಪರಾರಿ ಆಗಿರುವ ಘಟನೆ ಮಧ್ಯಪ್ರದೇಶದ ಛತ್ತರಪುರ್ ಜಿಲ್ಲೆಯಲ್ಲಿ ನಡೆದಿದೆ. ಈ ವೇಳೆ ವಧು ಒಂದು ಲಕ್ಷಾಂತರ ರೂಪಾಯಿ ಬೆಲೆ ಬಾಳು ಒಡವೆ ಮತ್ತು ಹಣವನ್ನು ತೆಗೆದುಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ.
ಕಳೆದ ಡಿಸೆಂಬರ್.06ರಂದು ಉತ್ತರ ಪ್ರದೇಶದ ಜಲೌನ್ ಪ್ರದೇಶದ ರಾಹುಲ್ ಎಂಬುವವರ ಜೊತೆಗೆ 20 ವರ್ಷದ ಮೂರ್ತಿ ರೈಕ್ವಾರ್ ಮದುವೆ ಆಗಿದ್ದರು. ಮದುವೆ ನಂತರದ ಸಂಪ್ರದಾಯದ ಪ್ರಕಾರ ವಧುವನ್ನು ತವರು ಮನೆಗೆ ಕಳುಹಿಸಿ ಕೊಡಲಾಗಿತ್ತು. ಅಲ್ಲಿಂದ ವಾಪಸ್ ಗಂಡನ ಮನೆಗೆ ವಾಪಸ್ ತೆರಳುವುದಾಗಿ ಹೇಳಿ ಹೊರಟ ಮೂರ್ತಿ ರೈಕ್ವಾರ್ ತನ್ನ ಪ್ರಿಯಕರನ ಜೊತೆಗೆ ಪರಾರಿ ಆಗಿದ್ದಾರೆ. 2020ರ ಡಿಸೆಂಬರ್.24ರಂದು ಭಜ್ಜು ಯಾದವ್ ಎಂಬ ಪ್ರಿಯಕರನ ಜೊತೆಗೆ ಮೂರ್ತಿ ರೈಕ್ವಾರ್ ಓಡಿ ಹೋಗಿರುವುದಾಗಿ ತಿಳಿದು ಬಂದಿದೆ.
ಮಧ್ಯಪ್ರದೇಶದ ಛತ್ತರಪುರ್ ಜಿಲ್ಲೆ ಅಲಿಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಛಿರವಾರಿ ಗ್ರಾಮದಲ್ಲಿ ಇಡೀ ಘಟನೆ ನಡೆದಿದೆ. ಮಗಳು ಕಾಣೆಯಾಗಿರುವ ಬಗ್ಗೆ ಸಂಬಂಧಿಕರು ಪೊಲೀಸ್ ಠಾಣೆ ಮೆಟ್ಟಿಲು ಏರುತ್ತಿದ್ದಂತೆ ಇಡೀ ಘಟನೆ ಬೆಳಕಿಗೆ ಬಂದಿದೆ.

5 ಲಕ್ಷ ಬೆಲೆ ಬಾಳುವ ಒಡವೆಗಳೊಂದಿಗೆ ಪರಾರಿ:
ತವರು ಮನೆಗೆ ತೆರಳಿದ್ದ ಪತ್ನಿ ವಾಪಸ್ ಆಗದಿರುವುದನ್ನು ಕಂಡ ಪತಿ ರಾಹುಲ್, ಛಿರವಾರಿ ಗ್ರಾಮಕ್ಕೆ ತೆರಳುತ್ತಾರೆ. ಈ ವೇಳೆ ಮಗಳು ಸುಳ್ಳು ಹೇಳಿ ಅದೇ ಗ್ರಾಮದಲ್ಲಿದ್ದ ಪ್ರೇಮಿಯ ಜೊತೆಗೆ ಓಡಿ ಹೋಗಿರುವುದು ಗೊತ್ತಾಗುತ್ತದೆ. ಮೂರ್ತಿ ರೈಕ್ವಾರ್ ಪ್ರಿಯಕರ ಜೊತೆಗೆ ಹೋಗುವಾಗ 5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 20 ಸಾವಿರ ರೂ. ನಗದು ತೆಗೆದುಕೊಂಡು ಹೋಗಿರುವ ಬಗ್ಗೆಯೂ ಪೊಲೀಸರಿಗೆ ದೂರು ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications