ಕಾರು ಅಪಘಾತದಲ್ಲಿ ನಾಲ್ವರು ರಾಷ್ಟ್ರ ಮಟ್ಟದ ಹಾಕಿ ಆಟಗಾರರ ದುರ್ಮರಣ
ಹೋಶಂಗಾಬಾದ್, ಅಕ್ಟೋಬರ್ 14: ಕಾರು ಅಪಘಾತದಲ್ಲಿ ನಾಲ್ವರು ರಾಷ್ಟ್ರಮಟ್ಟದ ಆಟಗಾರರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಹೋಶಂಗಾಬಾದ್ನಲ್ಲಿ ನಡೆದಿದೆ.
ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಮೃತಪಟ್ಟ ಆಟಗಾರರ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ.
ಬೆಂಗಳೂರಿನ ಅಪಘಾತ ಸಂತ್ರಸ್ಥನಿಗೆ 1.47 ಕೋಟಿ ರೂ. ದಾಖಲೆಯ ಪರಿಹಾರ!
ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಧ್ಯಾನ್ ಚಂದ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಮಧ್ಯಪ್ರದೇಶದ ಹೋಶಂಗಬಾದ್ ಗೆ ಆಟಗಾರರು ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರ್ ನಜ್ಜುಗುಜ್ಜಾಗಿದೆ. ರಾಷ್ಟ್ರಮಟ್ಟದ ನಾಲ್ವರು ಹಾಕಿ ಆಟಗಾರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಧ್ಯಾನ್ ಚಂದ್ ಟ್ರೋಫಿ ಕೂಟದಲ್ಲಿ ಆಡಲು ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 69ರ ರೈಸಲಾ ಪುರ್ ದಲ್ಲಿ ಈ ಘಟನೆ ನಡೆದಿದೆ.