6ನೇ ರಾಜ್ಯ: ಮಧ್ಯಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕಥೆ ಅಷ್ಟೇ
ಭೂಪಾಲ್, ಫೆಬ್ರವರಿ.05: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೊಂದಣಿ ವಿರುದ್ಧ ಮತ್ತೊಂದು ರಾಜ್ಯ ಸಮರ ಸಾರಿದೆ. ದೇಶದ 6ನೇ ರಾಜ್ಯವು ಬುಧವಾರ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ.
ಸಿಎಎ ಮತ್ತು ಎನ್ ಆರ್ ಸಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರಗಳು ಸಿಡಿದೇಳುತ್ತಿವೆ. ಸಾಲು ಸಾಲು ರಾಜ್ಯಗಳು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸುತ್ತಿದ್ದು, ಅದೇ ಸಾಲಿಗೆ ಮಧ್ಯಪ್ರದೇಶ ಸೇರ್ಪಡೆಯಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಪಾಸ್ ಮಾಡಲಾಗಿದೆ. ಸಿಎಎ ರದ್ದುಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಜಾತಿ ಆಧಾರದಲ್ಲಿ ವಲಸಿಗರ ವಿಂಗಡಣೆಗೆ ವಿರೋಧ
ನೆರೆ ರಾಷ್ಟ್ರಗಳಿಂದ ಭಾರತಕ್ಕೆ ವಲಸೆ ಬಂದಿರುವ ಪ್ರಜೆಗಳಿಗೆ ಭಾರತದ ಪೌರತ್ವ ನೀಡುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ, ಕೇಂದ್ರ ಸರ್ಕಾರವು ರೂಪಿಸಿದ ಕಾಯ್ದೆಯು ಧರ್ಮದ ಆಧಾರದಲ್ಲಿ ವಲಸಿಗರನ್ನು ವಿಂಗಡಿಸಲಾಗುತ್ತಿದೆ. ಇದನ್ನು ಮಧ್ಯಪ್ರದೇಶ ಸರ್ಕಾರ ಒಪ್ಪುವುದಿಲ್ಲ ಎಂದು ಸಿಎಂ ಕಮಲ್ ನಾಥ್ ವಿರೋಧ ವ್ಯಕ್ತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ
ಭಾರತವು ಸಂವಿಧಾನವನ್ನು ಅಳವಡಿಸಿಕೊಂಡ ನಂತರದಲ್ಲಿ ಮೊದಲ ಬಾರಿಗೆ ಧರ್ಮದ ಆಧಾರದಲ್ಲಿ ಒಂದು ಕಾಯ್ದೆಯನ್ನು ರಚಿಸಿದ್ದರೆ ಅದೇ ಪೌರತ್ವ ತಿದ್ದುಪಡಿ ಕಾಯ್ದೆ. ಜಾತ್ಯಾತೀತ ರಾಷ್ಟ್ರದಲ್ಲಿ ಇಂಥ ಕಾಯ್ದೆಗಳನ್ನು ರೂಪಿಸುವುದು ಸಂವಿಧಾನಕ್ಕೆ ವಿರುದ್ಧವಾಗುತ್ತದೆ.

ಪೌರತ್ವ ಕಾಯ್ದೆ ವಿರುದ್ಧ ರಾಜ್ಯದಲ್ಲಿ ಶಾಂತಿಯುತ ಹೋರಾಟ
ಪೌರತ್ವ ತಿದ್ದುಪಡಿ ಕಾಯ್ದೆಯ ಅಂಶಗಳು ಏನು ಹೇಳುತ್ತವೆ ಎಂಬುದರ ಬಗ್ಗೆ ಜನರಲ್ಲಿ ಸ್ಪಷ್ಟತೆ ಇಲ್ಲ. ಸಾಕಷ್ಟು ಗೊಂದಲಗಳ ನಡುವೆ ರಾಷ್ಟ್ರಾದ್ಯಂತ ಉಗ್ರ ಸ್ವರೂಪದ ಪ್ರತಿಭಟನೆಗಳು ನಡೆದವು. ಮಧ್ಯಪ್ರದೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆಗಳಾದವು ಎಂದು ಉಲ್ಲೇಖಿಸಲಾಗಿದೆ.

ಈ ರಾಜ್ಯಗಳಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕಾರ
ಇನ್ನು, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈಗಾಗಲೇ ಐದು ರಾಜ್ಯಗಳಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಕೇರಳ, ಪಂಜಾಬ್, ರಾಜಸ್ಥಾನ್, ಪಶ್ಚಿಮ ಬಂಗಾಳ, ಛತ್ತೀಸ್ ಗಢ್ ರಾಜ್ಯಗಳು ಕೇಂದ್ರ ಸರ್ಕಾರ ಜಾರಿಗೊಳಿಸಿದ ಸಿಎಎ ವಿರುದ್ಧ ನಿರ್ಣಯ ಪಾಸ್ ಮಾಡಿವೆ. ಇದೀಗ ಮಧ್ಯಪ್ರದೇಶ ಸರ್ಕಾರ ಕೂಡಾ ಅದೇ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದು, ಸಿಎಎ ವಾಪಸ್ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications