ತಮ್ಮನ ಶವದ ಜೊತೆ ರಸ್ತೆ ಬದಿಯಲ್ಲಿ ಕುಳಿತು ಅಪ್ಪನ ಆಗಮನಕ್ಕೆ ಕಾಯುತ್ತಿರುವ 8 ವರ್ಷದ ಬಾಲಕ
ಭೋಪಾಲ್, ಜುಲೈ 11: ಅವನಿನ್ನೂ ಜಗತ್ತು ಏನೆಂದು ಅರಿಯಾದ 8 ವರ್ಷದ ಪುಟ್ಟ ಬಾಲಕ, ಆತ ರಸ್ತೆ ಬದಿಯಲ್ಲಿ ಕುಳಿತಿದ್ದಾನೆ, ಅವನ ಮಡಿಲಲ್ಲಿ ಅವನ 2 ವರ್ಷದ ಸಹೋದರ ಮಲಗಿದ್ದಾನೆ, ಅದು ಶವವಾಗಿ. ಹೊದಿಸಿದ ಬಟ್ಟೆಯಿಂದ ಆತನ ಪುಟ್ಟ ಕೈ ಹೊರಚಾಚಿದೆ. ಏನಾಗುತ್ತಿದೆ ಎಂದೇ ಅರಿಯದ ಹುಡುಗನ ಕಣ್ಣುಗಳಲ್ಲಿ ಸಾವಿರ ಪ್ರಶ್ನೆಗಳಿವೆ, ಬಡತನ ತಂದಿಟ್ಟ ಅಸಹಾಯಕತೆ ಇದೆ. ಆತ ಯಾರಿಗೋ ಕಾಯುತ್ತಿದ್ದಾನೆ.
ಹೌದು, ಆತ ತಂದೆಗಾಗಿ ಕಾಯುತ್ತಿದ್ದಾನೆ. ಆತನ ತಂದೆ ಸತ್ತಿರುವ ತನ್ನ ಎರಡು ವರ್ಷದ ಮಗುವಿನ ಮೃತದೇಹ ಊರಿಗೆ ಕೊಂಡೊಯ್ಯಲು ವಾಹನಕ್ಕಾಗಿ ಹುಡುಕಾಡುತ್ತಿದ್ದಾರೆ. ಆದರೆ ವಾಹನ ವ್ಯವಸ್ಥೆ ಇನ್ನು ಆಗಿಲ್ಲ. ಇಂತಹದ್ದೊಂದು ಮನಕಲಕುವ ದೃಶ್ಯ ಕಂಡುಬಂದದ್ದು ಮಧ್ಯಪ್ರದೇಶದ ಮೊರೆನಾ ಎನ್ನುವ ಪಟ್ಟಣದಲ್ಲಿ.
ಸ್ಥಳೀಯ ಪತ್ರಕರ್ತರೊಬ್ಬರು ಚಿತ್ರೀಕರಿಸಿದ ದೃಶ್ಯಗಳಲ್ಲಿ, 8 ವರ್ಷದ ಗುಲ್ಶನ್ ತನ್ನ 2 ವರ್ಷದ ಸಹೋದರ ರಾಜನ ಶವದೊಂದಿಗೆ ಕುಳಿತಿದ್ದಾನೆ. ಅವರ ತಂದೆ ಪೂಜಾರಾಮ್ ಜಾತವ್ ಅವರನ್ನು ಮನೆಗೆ ಕರೆದೊಯ್ಯಲು ವಾಹನಕ್ಕಾಗಿ ತೀವ್ರವಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಅಂಬಾಹ್ನ ಬದ್ಫ್ರಾ ಗ್ರಾಮದ ನಿವಾಸಿ ಪೂಜಾರಾಮ್ ಅವರು ತಮ್ಮ 2 ವರ್ಷದ ಮಗನನ್ನು ಆಂಬುಲೆನ್ಸ್ನಲ್ಲಿ ಸ್ಥಳೀಯ ಆಸ್ಪತ್ರೆಯಿಂದ ಮೊರೆನಾ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು.
The video narrating the plight of #MadhyaPradesh has left the mind stunned, shameful and condemnable.
— Mohammed Feroz Khan (@ferozkhaninc) July 10, 2022
Under @ChouhanShivraj, along with health services, human consciousness has also died. pic.twitter.com/AXbkYOUzrA
ಗ್ರಾಮದಿಂದ ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು
ರಕ್ತಹೀನತೆ ಮತ್ತು ಅಸ್ಸೈಟ್ಸ್ನಿಂದ (ದ್ರವದ ಶೇಖರಣೆಯಿಂದ ಉಂಟಾದ ಹೊಟ್ಟೆಯ ಊತ, ಹೆಚ್ಚಾಗಿ ಯಕೃತ್ತಿನ ಕಾಯಿಲೆ) ಬಳಲುತ್ತಿರುವ ರಾಜಾ ಚಿಕಿತ್ಸೆ ಫಲಕಾರಿಯಾಗದೆ ಮೊರೆನಾ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಅಷ್ಟರಲ್ಲಾಗಲೇ ಅವರನ್ನು ಕರೆತಂದಿದ್ದ ಆಂಬ್ಯುಲೆನ್ಸ್ ಹಿಂತಿರುಗಿತ್ತು.
30 ಕಿಲೋ ಮೀಟರ್ ದೂರದಲ್ಲಿರುವ ತನ್ನ ಗ್ರಾಮಕ್ಕೆ ಮೃತದೇಹವನ್ನು ಕೊಂಡೊಯ್ಯಲು ವಾಹನ ಬೇಕೆಂದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಬಳಿ ಪೂಜಾರಾಮ್ ಮನವಿ ಮಾಡಿದ್ದಾರೆ. ಆದರೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಹನವಿಲ್ಲ ಎಂದು ಹೇಳಿದ್ದಾರೆ. ಖಾಸಗಿ ಆಂಬ್ಯುಲೆನ್ಸ್ನಲ್ಲಿ ಕರೆದೊಯ್ಯುವಂತೆ ಸಲಹೆ ನೀಡಿದ್ದಾರೆ, ಆದರೆ ಅದಕ್ಕೆ ಹಣ ಪಾವತಿಸಬೇಕಾಗುತ್ತದೆ ಎಂದು ಅವರು ಹೇಳಿದರು.
ಆಂಬ್ಯುಲೆನ್ಸ್ಗೆ ಪಾವತಿಸಲು ಹಣದ ಕೊರತೆ
ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್ ನಿರ್ವಾಹಕರೊಬ್ಬರು ಮಗುವಿನ ಶವವನ್ನು ಅವರ ಗ್ರಾಮಕ್ಕೆ ಸಾಗಿಸಲು 1,500 ರುಪಾಯಿ ಕೇಳಿದ್ದಾರೆ. ಆದರೆ ಪೂಜಾರಾಮ್ ಬಳಿ ಅಷ್ಟೊಂದು ಹಣವಿರಲಿಲ್ಲ.
ಅಸಹಾಯಕರಾದ ಪೂಜಾರಾಮ್ ತನ್ನ ಮಗ ರಾಜಾ ದೇಹವನ್ನು ಎತ್ತಿಕೊಂಡು ಇನ್ನೊಬ್ಬ ಮಗ ಗುಲ್ಶನ್ ಜೊತೆ ಆಸ್ಪತ್ರೆಯಿಂದ ವಾಪಸ್ ಬಂದಿದ್ದಾರೆ. ಅಲ್ಲಿ ಆತನಿಗೆ ಯಾವುದೇ ವಾಹನ ಸಿಗಲಿಲ್ಲ.
ಯಾವುದೇ ದಾರಿ ಕಾಣದೆ ಪೂಜಾರಾಮ್ ಗ್ರಾಮಕ್ಕೆ ತೆರಳಿ ಹಣದ ವ್ಯವಸ್ಥೆ ಮಾಡಿಕೊಂಡು ಬರಲು ನಿರ್ಧರಿಸಿದ್ದಾರೆ. ಮಗ ಗುಲ್ಶನ್ನನ್ನು ಮೊರೆನಾದ ನೆಹರೂ ಪಾರ್ಕ್ನ ಮುಂದೆ ಕೂರಿಸಿ, ಮನೆಗೆ ಹೋಗಿ ಬರುವುದಾಗಿ ಹೇಳಿದ್ದಾರೆ.
ಏನಾಗುತ್ತಿದೆ ಎನ್ನುವುದನ್ನೂ ಅರಿಯದ ಗುಲ್ಶನ್ ಅರ್ಧ ಗಂಟೆಯವರೆಗೆ ರಸ್ತೆ ಬದಿಯಲ್ಲೇ ತಮ್ಮನ ಮೃತದೇಹದ ಜೊತೆ ಕಾಲಕಳೆದಿದ್ದಾನೆ. ಆತನ ಕಣ್ಣುಗಳಲ್ಲಿ ತಂದೆ ಯಾವಾಗ ಹಿಂದಿರುಗುತ್ತಾರೆ ಎನ್ನುವ ನಿರೀಕ್ಷೆ, ಆತಂಕ, ಭಯ ಕಾಡುತ್ತಿತ್ತು.
ತಮ್ಮನ ದೇಹವನ್ನು ಮುದ್ದಿಸುತ್ತಾ, ನೊಣಗಳನ್ನು ಓಡಿಸುತ್ತಾ, ಕಣ್ಣೀರು ಹಾಕುತ್ತಾ ಕೂತಿದ್ದಾನೆ. ಅಷ್ಟರಲ್ಲೇ ಈ ದೃಶ್ಯವನ್ನು ಕಂಡ ಜನ ಗುಂಪುಗೂಡಲು ಆರಂಭಿಸಿದ್ದಾರೆ. ಆಗ ಯಾರೋ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
Recommended Video
ಸ್ಥಳಕ್ಕಾಗಮಿಸಿದ ಪೊಲೀಸ್ ಅಧಿಕಾರಿ ಯೋಗೇಂದ್ರ ಸಿಂಗ್ ಮಗುವಿನ ಮೃತದೇಹವನ್ನು ಎತ್ತಿಕೊಂಡು ಗುಲ್ಶನ್ ಜೊತೆ ಮತ್ತೆ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಪೂಜಾರಾಮ್ಗೆ ಮನೆಗೆ ಮಗುವಿನ ಮೃತದೇಹ ಸಾಗಿಸಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಯಿತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications