ಕರಡಿ ದಾಳಿಗೆ ದಂಪತಿ ಸಾವು; ಮನುಷ್ಯರ ಮಾಂಸ ತಿಂದ ಕರಡಿ ಸೆರೆ
ಭೋಪಾಲ್, ಜೂನ್ 6: ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಭಾನುವಾರ ಕರಡಿಯೊಂದು ದಂಪತಿ ಮೇಲೆ ದಾಳಿ ಮಾಡಿ ಕೊಂದಿದೆ. ಇಷ್ಟಕ್ಕೇ ಸುಮ್ಮನಾಗದ ಕರಡಿ ಐದು ಗಂಟೆಗಳಿಗೂ ಹೆಚ್ಚು ಕಾಲ ಶವಗಳನ್ನು ಬಿಡದೆ, ಕೆಲವು ಭಾಗಗಳನ್ನು ತಿಂದು ಹಾಕಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪನ್ನಾ ಜಿಲ್ಲಾ ಕೇಂದ್ರದಿಂದ ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ಖೇರ್ಮೈ ಪ್ರದೇಶದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಕರಡಿ ದಾಳಿ ಮಾಡಿದೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳುತ್ತಿದ್ದ ರಾಣಿಗಂಜ್ ಪ್ರದೇಶದ ಮುಖೇಶ್ ಠಾಕೂರ್ (50) ಮತ್ತು ಇಂದಿರಾ ಠಾಕೂರ್ (45) ದಂಪತಿಗಳ ಮೇಲೆ ಕರಡಿ ಏಕಾಏಕಿ ದಾಳಿ ಮಾಡಿದೆ.
ಕರಡಿ ದಾಳಿಯಲ್ಲಿ ಇಬ್ಬರೂ ದಂಪತಿಗಳು ಸಾವನ್ನಪ್ಪಿದ್ದಾರೆ. ಆದರೂ ಕರಡಿ ಆಕ್ರೋಶ ಕಡಿಮೆಯಾಗಿಲ್ಲ, ಸುಮಾರು 5 ಗಂಟೆಗಳ ಕಾಲ ಶವಗಳ ಕೆಲವು ಭಾಗಗಳನ್ನು ತಿಂದುಹಾಕಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್ಒ) ಗೌರವ್ ಶರ್ಮಾ ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಕರಡಿಯನ್ನು ಓಡಿಸುವ ಯತ್ನ ಮಾಡಿದ್ದು ವ್ಯರ್ಥವಾಗಿದೆ. ನಂತರ ಕರಡಿಗೆ ಅರವಳಿಕೆ ನೀಡಿ ಹಿಡಿಯಲಾಗಿದೆ.
"ನಾವು ಪನ್ನಾ ಟೈಗರ್ ರಿಸರ್ವ್ ತಂಡಗಳಿಗೂ ಮಾಹಿತಿ ನೀಡಿದ್ದೇವೆ. ಕರಡಿಗೆ ಅರವಳಿಕೆ ನೀಡಿದ ನಂತರ ಸೆರೆ ಹಿಡಿಯಲಾಗಿದೆ ಮತ್ತು ದಂಪತಿಗಳ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ಮಾಡಿದ ಕರಡಿಯನ್ನು ಮತ್ತೆ ಕಾಡಿನಲ್ಲಿ ಬಿಡುವುದಿಲ್ಲ, ಅದನ್ನು ಬೇರೆ ನಗರದ ಯಾವುದಾದರೂ ಮೃಗಾಲಯಕ್ಕೆ ಕಳುಹಿಸಲು ಯೋಜನೆ ಮಾಡಲಾಗಿದೆ" ಎಂದು ಗೌರವ್ ಶರ್ಮಾ ಹೇಳಿದ್ದಾರೆ.
ಅರಣ್ಯ ಇಲಾಖೆ ವತಿಯಿಂದ ಮೃತ ದಂಪತಿಯ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಲಾಗಿದೆ. ಘಟನೆ ನಡೆದ ಎರಡರಿಂದ ಮೂರು ಗಂಟೆಗಳ ನಂತರ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದರು ಎಂದು ದಂಪತಿಯ ಸಂಬಂಧಿಕರು ಆರೋಪಿಸಿದ್ದಾರೆ. ಮಾಹಿತಿ ತಿಳಿದ ತಕ್ಷಣ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಲು ವಿಫಲಾಗದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Recommended Video
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications