ವಾಜಪೇಯಿ ಕೋಪದಿಂದ ಮೋದಿಯನ್ನು ಉಳಿಸಿದ್ದು ಅಡ್ವಾಣಿ: ಸಿನ್ಹಾ
ಭೋಪಾಲ್, ಮೇ 11: "2002 ರ ಗೋಧ್ರೋತ್ತರ ಹತ್ಯಾಕಾಂಡದ ನಂತರ ಆಗಿನ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿರ್ಧರಿಸಿದ್ದರು. ಆದರೆ ಅಡ್ವಾಣಿ ಅದನ್ನು ತಡೆದರು" ಎಂದು ಬಿಜೆಪಿ ಮಾಜಿ ನಾಯಕ ಯಶವಂತ್ ಸಿನ್ಹಾ ಹೇಳಿದರು.
ಮಧ್ಯಪ್ರದೇಶದ ಭೋಪಾಲ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಸಿನ್ಹಾ, 2002 ರ ಗೋಧ್ರೋತ್ತರ ಘಟನೆಯ ನಂತರ ಕೇಂದ್ರದಲ್ಲಿದ್ದ ಎನ್ ಡಿಎ ಸರ್ಕಾರಕ್ಕೆ ಸಾಕಷ್ಟು ಇರಿಸು ಮುರಿಸುಂಟಾಗಿತ್ತು. ಆಗ ಪ್ರಧಾನಿಯಾಗಿದ್ದ ವಾಜಪೇಯಿ ಅವರು ನರೇಂದ್ರ ಮೊದಿ ಅವರ ಬಳಿ ರಾಜೀನಾಮೆ ಕೊಡಿಸಲು ನಿರ್ಧರಿಸಿದ್ದರು ಎಂದು ಸುಮಾರು ಒಂದೂ ಮುಕ್ಕಾಲು ದಶಕದ ಹಿಂದಿನ ಘಟನೆಗಳನ್ನು ನೆನಪಿಸಿಕೊಂಡರು.
ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದ ಕಾರಣಕ್ಕೆ ಬಿಜೆಪಿ ತೊರೆದಿರುವ ಯಶವಂತ್ ಸಿನ್ಹಾ, ಆಗಾಗ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಕೆಲಸ ಮಾಡುತ್ತಲೇ ಇದ್ದು, ಇದೂ ಅದರಲ್ಲಿ ಒಂದೆನ್ನಿಸಿದೆ.

ರಾಜೀನಾಮೆ ನೀಡಿದಿದ್ದರೆ ಅಮಾನತು!
"2002 ರಲ್ಲಿ ಮೋದಿ ಸರ್ಕಾರದ ಬಗ್ಗೆ ವಾಜಪೇಯಿ ಅವರಿಗೆ ಸಾಕಷ್ಟು ಬೇಸರವಾಗಿತ್ತು. ಮುಜುಗರವುಂಟಾಗಿತ್ತು. ಆದ್ದರಿಂದ ಅವರು ಮೋದಿ ಅವರ ಬಳಿ ರಾಜೀನಾಮೆ ನೀಡುವಂತೆ ಕೇಳುವುದಕ್ಕೆ ಮುಂದಾಗಿದ್ದರು. ಅಕಸ್ಮಾತ್ ಮೋದಿ ರಾಜೀನಾಮೆಗೆ ಒಲ್ಲೆ ಎಂದರೆ ಅವರನ್ನು ಅಮಾನತು ಮಾಡಬೇಕೆಂದು ನಿರ್ಧರಿಸಿದ್ದರು"- ಯಶವಂತ್ ಸಿನ್ಹಾ

ಮೋದಿಯವರನ್ನು ಉಳಿಸಿದ್ದು ಅಡ್ವಾಣಿ!
"ಅಂದು ಮೋದಿಯವರನ್ನು ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸುವುದು ಬೇಡ ಎಂದು ಆವರ ಬೆಂಬಲಕ್ಕೆ ನಿಂತಿದ್ದು ಆಗ ಕೇಂದ್ರದಲ್ಲಿ ಗೃಹಸಚಿವರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಅವರು. ಮೋದಿ ಅವರನ್ನು ಅಮಾನತು ಮಾಡಿದರೆ ನಾನು(ಅಡ್ವಾಣಿ) ರಾಜೀನಾಮೆ ಕೊಡುತ್ತೇನೆ ಎಂದು ಅಡ್ವಾಣಿ ಅವರು ವಾಜಪೇಯಿ ಅವರಿಗೆ ಹೆದರಿಸಿದ್ದರು"- ಯಶವಂತ್ ಸಿನ್ಹಾ

ಪ್ರಧಾನಿ ಘನತೆಯಿಂದ ಮಾತನಾಡಬೇಕು
"ಐಎನ್ ಎಸ್ ವಿರಾಟ್ ಅನ್ನು ರಾಜೀವ್ ಗಾಂಧಿ ಪರ್ಸನಲ್ ಟ್ಯಾಕ್ಸಿಯ ಹಾಗೆ ಬಳಸಿಕೊಂಡರು ಎಂಬ ಮಾತುಗಳು ಪ್ರಧಾನಿ ಹುದ್ದೆಗೆ ತಕ್ಕುದಲ್ಲ. ಆ ಹುದ್ದೆಯ ಘನತೆಯನ್ನು ಕಳೆಯುವ ಹಾಗೆ ಮಾತನಾಡಬಾರದು. ಅಷ್ಟಕ್ಕೂ ಲೋಕಸಭೆ ಚುನಾವಣೆಯಲ್ಲಿ ಮೊದಿ ಸರ್ಕಾರ ತನ್ನ ಸಾಧನೆಯನ್ನು ಮತಪಡೆಯುವ ಮಾನದಂಡವನ್ನಾಗಿ ಬಳಸಬೇಕೇ ಹೊರತು, ಇತಿಹಾಸವನ್ನಲ್ಲ"- ಯಶವಂತ್ ಸಿನ್ಹಾ

ಭೋಪಾಲ್ ಫಲಿತಾಂಶದಲ್ಲಿ ದೇಶದ ಭವಿಷ್ಯ!
ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಫಲಿತಾಂಶದ ಮೇಲೆ ಇಡೀ ದೇಶದ ಭವಿಷ್ಯ ನಿರ್ಧಾರವಾಗಲಿದೆ. ನಮ್ಮ ದೇಶದಕ್ಕೆ ಸಾಮಾಜಿಕ ಸೌಹಾರ್ದತೆ ಬೇಕೋ, ಸಾಮಾಜಿಕ ವಿಭಜನೆ ಬೇಕಾ ಎಂಬುದು ನಿರ್ಧಾರವಾಗಲಿದೆ ಎಂದು ಸಿನ್ಹಾ ಹೇಳಿದರು. ಭೋಪಾಲ್ ನಲ್ಲಿ ಕಾಂಗ್ರೆಸ್ ನ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಬಿಜೆಪಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಕಣಕ್ಕಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications