ದೆಹಲಿ ಬೆಂಗಳೂರು ವಿಮಾನದಲ್ಲಿ ಮಗು ಸಾವು, ತುರ್ತು ಭೂಸ್ಪರ್ಶ
ಇಂದೋರ್, ಡಿಸೆಂಬರ್ 31: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ.
ಇಂದೋರ್ನಲ್ಲಿ ಈ ಘಟನೆ ಸಂಭವಿಸಿದೆ, ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ವಿಮಾನದಲ್ಲಿ ಅನಾರೋಗ್ಯಕ್ಕೀಡಾಗಿದ್ದ 7 ತಿಂಗಳ ಶಿಶು ಮಾರ್ಗ ಮಧ್ಯೆಯೇ ಮೃತಪಟ್ಟಿದೆ.
ಇಂದೋರ್ ನ ದೇವಿ ಅಹಿಲಿಬಾಯಿ ಹೊಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದರೂ ಮಗು ಮಾರ್ಗ ಮಧ್ಯೆಯೇ ಸಾವನ್ನಪ್ಪಿದೆ.
ಮಗುವನ್ನು ಇಂದೋರ್ ನ SAIMS ಆಸ್ಪತ್ರೆಗೆ ದಾಖಲಿಸಲಾಯಿತು. ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಸಾವನ್ನಪ್ಪಿದೆ ಎಂದು ಘೋಷಣೆ ಮಾಡಿದರು. ಮೃತ ಮಗುವನ್ನು ಉತ್ತರ ಪ್ರದೇಶ ಗೋರಕ್ ಪುರ ದಂಪತಿ ಮಗು ದೇವ್ ಜೈಸ್ವಾಲ್ ಎಂದು ಗುರುತಿಸಲಾಗಿದೆ. ಮೃತ ಮಗು ಜಲಮಸ್ತಿಷ್ಕ ರೋಗ (Hydrocephalus)ದಿಂದ ಬಳಲುತ್ತಿತ್ತು.
ಮೂಲಗಳ ಪ್ರಕಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ವಿಮಾನದಲ್ಲಿ ದಂಪತಿಗಳೊಂದಿಗೆ ಮಗು ಕೂಡ ಪ್ರಯಾಣಿಸುತ್ತಿತ್ತು. ಮಾರ್ಗ ಮಧ್ಯೆಯೇ ಮಗು ಅನಾರೋಗ್ಯಕ್ಕೀಡಾಗಿದ್ದು, ಮಗು ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿತ್ತು.

ಇದನ್ನು ಗಮನಿಸಿದ ಪೋಷಕರು ಕೂಡಲೇ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಪೈಲಟ್ ವಿಮಾನದ ಮಾರ್ಗ ಬದಲಿಸಿ ಇಂದೋರ್ ನತ್ತ ತಿರುಗಿಸಿದ್ದಾರೆ. ಇಂದೋರ್ ನ ದೇವಿ ಅಹಿಲಿಬಾಯಿ ಹೊಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತಾದರೂ ಅಷ್ಟು ಹೊತ್ತಿಗೆ ಮಗು ಆರೋಗ್ಯ ಪರಿಸ್ಥಿತಿ ತೀವ್ರ ಬಿಗಡಾಯಿಸಿತ್ತು.
Recommended Video
ಅಪರೂಪದ ಖಾಯಿಲೆಯಾಗಿದ್ದು, ಮಗುವಿನ ಚಿಕಿತ್ಸೆಗಾಗಿ ಮಗುವಿನ ಪೋಷಕರು ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications