ಧಾರ್ಮಿಕ ಮತಾಂತರ ಆರೋಪ: ಮಧ್ಯಪ್ರದೇಶ ಕ್ರಿಶ್ಚಿಯನ್ ಶಾಲೆಯ ಮೇಲೆ ದಾಳಿ
ವಿದಿಶಾ, ಡಿಸೆಂಬರ್ 6: ಕ್ರಿಶ್ಚಿಯನ್ ಮಿಷನರಿ ಸಂಸ್ಥೆಯು ವಿದ್ಯಾರ್ಥಿಗಳನ್ನು ಧಾರ್ಮಿಕ ಮತಾಂತರ ಮಾಡುತ್ತಿದೆ ಎಂದು ಆರೋಪಿಸಿ ಬಜರಂಗ ದಳದ ನೂರಾರು ಕಾರ್ಯಕರ್ತರು ಸ್ಥಳೀಯರೊಂದಿಗೆ ಶಾಲೆಗೆ ನುಗ್ಗಿ ಕಟ್ಟಡದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಸೋಮವಾರ 12ನೇ ತರಗತಿಯ ವಿದ್ಯಾರ್ಥಿಗಳು ಗಣಿತ ಪರೀಕ್ಷೆಗೆ ಕುಳಿತಿದ್ದಾಗ ಈ ಹಿಂಸಾಚಾರ ನಡೆದಿದೆ.
ವಿದಿಶಾ ಜಿಲ್ಲೆಯ ಗಂಜ್ ಬಸೋದಾ ಪಟ್ಟಣದಲ್ಲಿರುವ ಸೇಂಟ್ ಜೋಸೆಫ್ ಶಾಲೆಯ ಆಡಳಿತದಿಂದ ಎಂಟು ವಿದ್ಯಾರ್ಥಿಗಳನ್ನು ಮತಾಂತರಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಸಿದ ನಂತರ ಈ ಗಲಾಟೆ ಶುರುವಾಗಿದೆ. ಘಟನೆ ದೃಶ್ಯಗಳು ವೈರಲ್ ಆಗಿದ್ದು ಶಾಲೆಯ ಮುಂದೆ ನೆರೆದ ಜನ ಕಲ್ಲು ತೂರಾಟ ಮಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾಲೆ ಹೊರಗೆ ಜಮಾಯಿಸಿದ ಜನಸಮೂಹ ಶಾಲೆಯ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದೆ. ದೃಶ್ಯಗಳಲ್ಲಿ ಪೊಲೀಸರು ಗುಂಪನ್ನು ಚದುರಿಸಲು ಯತ್ನಿಸುತ್ತಿರುವುದು ಕಂಡುಬಂದಿದೆ. ಅಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಉದ್ರಿಕ್ತ ಗುಂಪು ಪರೀಕ್ಷೆ ವೇಳೆ ಶಾಲಾ ಕಟ್ಟಡದ ಮೇಲೆ ಮನಬಂದಂತೆ ಕಲ್ಲು ತೂರಾಟ ನಡೆಸಿದೆ. ಶಾಲಾ ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ದಾಂದಲೆ ನಡೆಸಿದ್ದಾರೆ. ಹೀಗಾಗಿ ಶಾಲಾ ಮಕ್ಕಳು ಉಪನ್ಯಾಸಕರು ದಾಳಿಯಿಂದ ತಪ್ಪಿಸಿಕೊಳ್ಳಲು ಹರಸಾಹಸಪಟ್ಟಿದ್ದಾರೆ. ವಿದ್ಯಾರ್ಥಿಗಳು ಭಯಭೀತರಾಗಿ ಪರೀಕ್ಷೆಯ ಬಗ್ಗೆ ಗಮನಗರಿಸಲಾಗಿಲ್ಲ ಎನ್ನುವ ಆರೋಪ ಮಾಡಿದ್ದಾರೆ. ಹೀಗಾಗಿ ಪರೀಕ್ಷೆಗಳನ್ನು ಮತ್ತೊಮ್ಮೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಜನಸಮೂಹವು ಗಾಜಿನ ಕಿಟಕಿಗಳ ಮೇಲೆ ಕಲ್ಲುಗಳನ್ನು ಎಸೆದಿದ್ದರಿಂದ ಭಯಭೀತರಾದುದ್ದನ್ನು ವಿವರಿಸಿದ ವಿದ್ಯಾರ್ಥಿಯೊಬ್ಬರು, "ನಮ್ಮ ಏಕಾಗ್ರತೆಗೆ ತೊಂದರೆಯಾಗಿದೆ. ನಾವು ಪರೀಕ್ಷೆಯನ್ನು ಮತ್ತೆ ನಡೆಸಬೇಕೆಂದು ಬಯಸುತ್ತೇವೆ" ಎಂದು ಹೇಳಿದರು.

ಶಾಲೆಯ ಮ್ಯಾನೇಜರ್ ಬ್ರದರ್ ಆಂಟನಿ ಅವರು ಸ್ಥಳೀಯ ಮಾಧ್ಯಮಗಳ ಮೂಲಕ ದಾಳಿಯ ಮಾಹಿತಿಯನ್ನು ಒಂದು ದಿನ ಮುಂಚಿತವಾಗಿ ಸ್ವೀಕರಿಸಿದರು. ನಂತರ ಅವರು ಪೊಲೀಸ್ ಮತ್ತು ರಾಜ್ಯ ಆಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೂ ಪೊಲೀಸರು ಸೂಕ್ತ ಭದ್ರತಾ ವ್ಯವಸ್ಥೆ ಮಾಡುತ್ತಿಲ್ಲ ಎಂದು ಆರೋಪಿಸಿದರು. ಜೊತೆಗೆ ಅವರು ಧಾರ್ಮಿಕ ಮತಾಂತರದ ಹಕ್ಕುಗಳನ್ನು ನಿರಾಕರಿಸಿದರು. ದೂರಿನಲ್ಲಿ ಉಲ್ಲೇಖಿಸಲಾದ ಯಾವುದೇ ಹೆಸರುಗಳು ಯಾವುದೇ ವಿದ್ಯಾರ್ಥಿಗಳೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದ್ದಾರೆ.
ಮಕ್ಕಳನ್ನು ಧಾರ್ಮಿಕ ಮತಾಂತರ ಮಾಡಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಸ್ಥಳೀಯ ಬಜರಂಗದಳ ಘಟಕದ ಮುಖಂಡ ನಿಲೇಶ್ ಅಗರವಾಲ್, 'ಆಪಾದಿತ ಧಾರ್ಮಿಕ ಮತಾಂತರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಶಾಲೆಯ ಶಾಮೀಲು ಕಂಡು ಬಂದರೆ ಕ್ರಮ ತೆಗೆದುಕೊಳ್ಳಬೇಕು' ಎಂದರು.
ಘಟನೆಯ ನಂತರ ಪ್ರದೇಶದ ಇತರ ಮಿಷನರಿ ಶಾಲೆಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು. ವಿಧ್ವಂಸಕ ಕೃತ್ಯಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆಪಾದಿತ ಧಾರ್ಮಿಕ ಮತಾಂತರದ ಬಗ್ಗೆ ತನಿಖೆ ಆರಂಭವಾಗಿದ್ದು, ಶಾಲಾ ಆಡಳಿತ ಮಂಡಳಿಯನ್ನು ಪ್ರಶ್ನಿಸಲಾಗುವುದು ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ರೋಶನ್ ರೈ ಹೇಳಿದ್ದಾರೆ.
ಇನ್ನು ದಾಳಿಯ ವೇಳೆ ಶಾಲೆಯ ಗಾಜಿನ ಕಿಟಕಿಗಳು ಒಡೆದುಹೋಗಿವೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ. ದಾಳಿಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಸದ್ಯ ಭಾರೀ ವೈರಲ್ ಆಗಿವೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಹಿಂದೆ ವಿದಿಶಾ ಜಿಲ್ಲಾಧಿಕಾರಿಗೆ ಪತ್ರ ಬರೆದು ಶಾಲೆಯ ಮೇಲಿನ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications