ಸಂಸದೆ ಪ್ರಜ್ಞಾ ಠಾಕೂರ್ಗೆ ವಿಡಿಯೋ ಕರೆ: ಆರೋಪಿಗಳು ಅಂದರ್
ಭರತ್ಪುರ ಫೆಬ್ರವರಿ 15: ರಾಜಸ್ಥಾನದಲ್ಲಿ ಆಘಾತಕಾರಿ ಸಂಗತಿಯೊಂದು ಬೆಳಕಿಗೆ ಬಂದಿದೆ. ವಿಡಿಯೊ ಕರೆಗಳಲ್ಲಿ ಅಶ್ಲೀಲ ಕೃತ್ಯಗಳನ್ನು ಮಾಡುವ ಮೂಲಕ ಜನರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಸಹೋದರರು ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ಗೆ ವಿಡಿಯೋ ಕರೆ ಮಾಡಿ ಬ್ಲಾಕ್ ಮೇಲ್ ಮಾಡಿ ಸಿಕ್ಕಿಬಿದ್ದಿದ್ದಾರೆ.
ಇವರು ಸಂಸದೆ ಪ್ರಜ್ಞಾ ಠಾಕೂರ್ ಅವರಿಗೆ ವಿಡಿಯೋ ಕಾಲ್ ಮಾಡಿ ಅಶ್ಲೀಲ ಕೃತ್ಯದ ಮೂಲಕ ಬ್ಲಾಕ್ ಮೇಲ್ ಮಾಡಲು ಯತ್ನಿಸಿದ್ದರು. ಭೋಪಾಲ್ ಸೈಬರ್ ಸೆಲ್ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ಚಂದಾ ಗ್ರಾಮದ ನಿವಾಸಿ ರವೀನ್ ಮತ್ತು ಆತನ ಸಹೋದರ ಇಬ್ಬರನ್ನೂ ಹೆಡೆಮುರಿ ಕಟ್ಟಿದ್ದಾರೆ. ಬಳಿಕ ಈ ಪ್ರಕರಣ ಮುನ್ನೆಲೆಗೆ ಬಂದಿದೆ. ಭೋಪಾಲ್ ಸಂಸದರು ಆರೋಪಿಗಳ ವಿರುದ್ಧ ಟಿಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಭರತ್ಪುರ ಐಜಿ ಪ್ರಸನ್ನ ಕುಮಾರ್ ಖಮೇಸ್ರಾ ಹೇಳಿದ್ದಾರೆ. ಸೋಮವಾರ ಭೋಪಾಲ್ ಪೊಲೀಸರು ರಾಜಸ್ಥಾನದ ಸಿಕ್ರಿ ಪೊಲೀಸ್ ಠಾಣೆಯ ಸಹಾಯದಿಂದ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

ವೀಡಿಯೊ ಕರೆಯಲ್ಲಿ ಅಶ್ಲೀಲ ಕೃತ್ಯ
ಭೋಪಾಲ್ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಫೆಬ್ರವರಿ 6 ರಂದು ಸಂಜೆ 7 ಗಂಟೆ ಸುಮಾರಿಗೆ ತನ್ನ ಮೊಬೈಲ್ಗೆ ವಾಟ್ಸಾಪ್ನಿಂದ ಪ್ರಜ್ಞಾ ಅವರಿಗೆ ವಿಡಿಯೋ ಕರೆ ಬಂದಿದೆ. ಅವರು ಇದರಲ್ಲಿದ್ದಾರೆಂದು ಬಿಂಬಿಸಲಾಗಿದೆ. ಹುಡುಗಿಯೊಬ್ಬಳು ವಿಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಲು ಶುರು ಮಾಡಿದ್ದಾಳೆ. ಈ ವೇಳೆ ಸಂಸದರು ವಿಡಿಯೋ ಕಾಲ್ ಕಟ್ ಮಾಡುವ ಮೂಲಕ ಅದನ್ನು ತಡೆದರು. ಸ್ವಲ್ಪ ಸಮಯದ ನಂತರ ಇನ್ನೊಂದು ನಂಬರ್ನಿಂದ ಫೋಟೋ ಬಂದಿದೆ. ಫೋಟೋದಲ್ಲಿ ಮೊದಲ ಸಂಖ್ಯೆಯಿಂದ ವೀಡಿಯೊ ಕರೆಯ ಸ್ಕ್ರೀನ್ ಶಾಟ್ ಇತ್ತು. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಆರೋಪಿಗಳು ಸಂಸದೆ ಪ್ರಜ್ಞಾ ಠಾಕೂರ್ ಅವರಿಗೆ ಬೆದರಿಕೆ ಹಾಕಿದ್ದಾರೆ.

ದೂರು ದಾಖಲು
ಇದಾದ ಬಳಿಕ ಆರೋಪಿಗಳು ಮಧ್ಯಾಹ್ನ 2.30ರವರೆಗೂ ಸಂಸದರಿಗೆ ಕರೆ ಮಾಡಿದರೂ ಸಂಸದರು ಫೋನ್ ತೆಗೆಯಲಿಲ್ಲ. ಇದರ ನಂತರ, ಸಂಸದರು ಫೆಬ್ರವರಿ 7 ರಂದು ಭೋಪಾಲ್ನ ಟಿಟಿ ನಗರದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭೋಪಾಲ್ ಪೊಲೀಸರು ಕರೆ ಮಾಡಿದವರ ಸಂಖ್ಯೆಗಳನ್ನು ಪತ್ತೆಹಚ್ಚಿದರು ಮತ್ತು ಭರತ್ಪುರ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸಿ ಮಧ್ಯಪ್ರದೇಶಕ್ಕೆ ಕರೆತಂದಿದ್ದಾರೆ.

ಮದ್ಯಪಾನ ನಿಷೇಧಕ್ಕೆ ಆಗ್ರಹ
ಇತ್ತೀಚೆಗೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮದ್ಯ ಸೇವನೆಯ ಬಗ್ಗೆ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದರು. ಆಲ್ಕೋಹಾಲ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅದು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಹೆಚ್ಚು ಸೇವಿಸಿದರೆ ಅದು ವಿಷವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದ್ದಾರೆ. ಜೊತೆಗೆ ತಮ್ಮ ಹೇಳಿಕೆಯಲ್ಲಿ ಮದ್ಯಪಾನ ನಿಷೇಧಕ್ಕೆ ಆಗ್ರಹಿಸಿದ್ದಾರೆ.

ಕ್ಯಾನ್ಸರ್ ವಾಸಿ ಮಾಡಿದ ಗಂಜಲ
ಈ ಹಿಂದೆ ಕೊರೊನಾ ಸೋಂಕಿನ ನಿವಾರಣೆ ಕುರಿತು ಹೇಳಿಕೆ ನೀಡಿದ್ದ ಪ್ರಜ್ಞಾ ಸಿಂಗ್, ಹಸುವಿನ ಗಂಜಲ ಸೇವನೆ ಶ್ವಾಸಕೋಶದ ಸೋಂಕನ್ನು ನಿವಾರಿಸಬಲ್ಲದು ಎಂದಿದ್ದರು. "ನಾನು ಪ್ರತಿ ದಿನ ಗಂಜಲ ಕುಡಿಯುತ್ತೇನೆ. ಅದು ನನಗೆ ಕೊರೊನಾ ಸೋಂಕಿನಿಂದ ರಕ್ಷಣೆ ನೀಡಿದೆ" ಎಂದು ಹೇಳಿದ್ದರು. ಇಷ್ಟೇ ಅಲ್ಲದೆ, ಗಂಜಲ ಸೇವನೆಯಿಂದ ತಮಗಿದ್ದ ಕ್ಯಾನ್ಸರ್ ವಾಸಿಯಾಯಿತೆಂದು ಹೇಳಿ ಅಚ್ಚರಿ ಮೂಡಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications