ಮಧ್ಯಪ್ರದೇಶ ವಿಧಾನಸಭೆಯಲ್ಲಿ ಮತಾಂತರ ವಿರೋಧಿ ಮಸೂದೆ ಅಂಗೀಕಾರ
ಭೋಪಾಲ್, ಮಾರ್ಚ್.08: ಮಧ್ಯಪ್ರದೇಶ ವಿಧಾನಸಭಾ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆಗೆ ಅಂಗೀಕಾರ ನೀಡಲಾಗಿದೆ. ರಾಜ್ಯ ವಿಧಾನಸಭಾ ಸದಸ್ಯರು ಧ್ವನಿ ಮತದ ಮೂಲಕ ಮಸೂದೆಯ ಪರ ಮತ್ತು ವಿರೋಧ ಮತ ಚಲಾಯಿಸಿದರು. ಮತಾಂತರ ವಿರೋಧಿ ಮಸೂದೆಗೆ ಸಂಬಂಧಿಸಿದಂತೆ ಪರವಾಗಿ ಹೆಚ್ಚು ಮತಗಳು ಬಿದ್ದ ಹಿನ್ನೆಲೆ ಮಸೂದೆ ಅಂಗೀಕಾರಗೊಂಡಿದೆ.
ಈ ಹಿಂದೆ ಕೆಲವು ಪ್ರಕರಣಗಳಲ್ಲಿ 10 ವರ್ಷ ಜೈಲುಶಿಕ್ಷೆ ಮತ್ತು ಭಾರಿ ದಂಡವನ್ನು ವಿಧಿಸಿದ ಹಿನ್ನೆಲೆ ಮತಾಂತರ ವಿರೋಧಿ ಮಸೂದೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಕಳೆದ ಡಿಸೆಂಬರ್ ನಲ್ಲಿ ಸುಗ್ರೀವಾಜ್ಞೆಯನ್ನು ತೆರವುಗೊಳಿಸಿದ ಸಂಪುಟವು ಈ ಬಗ್ಗೆ ಜನವರಿಯಲ್ಲಿ ಅಧಿಕೃತವಾಗಿ ಘೋಷಿಸಿತ್ತು.
ಕಳೆದ ವಾರವಷ್ಟೇ ಅಂದರೆ ಮಾರ್ಚ್ 1ರಂದು ವಿಧಾನಸಭಾ ಸದನದಲ್ಲಿ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಮಸೂದೆ 2021ಅನ್ನು ಮಂಡಿಸಿದ್ದರು. ಈ ಸಂಬಂಧ ಸುದೀರ್ಘ ಚರ್ಚೆಯ ಬಳಿಕ ಧ್ವನಿ ಮತದ ಮೂಲಕ ಮಸೂದೆ ಅಂಗೀಕರಿಸಲಾಗಿದೆ.

ಧಾರ್ಮಿಕ ಮತಾಂತರಕ್ಕೆ ಜೈಲುಶಿಕ್ಷೆ:
ಕಳೆದ ಜನವರಿ 9ರಂದು ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯದ ಸುಗ್ರೀವಾಜ್ಞೆ, 2020ಕ್ಕೆ ರಾಜ್ಯಪಾಲೆ ಆನಂದಿ ಬೆಲ್ ಪಟೇಲ್ ಅವರು ಅಂಕಿತ ಹಾಕಿದ್ದರು. ವಿವಾಹ ಮತ್ತು ಯಾವುದೇ ಮಾರ್ಗದ ಮೂಲಕ ಒತ್ತಾಯಪೂರ್ವಕವಾಗಿ ಮತಾಂತರ ಮಾಡುವುದು ಕಂಡು ಬಂದಲ್ಲಿ ಅಂಥವರಿಗೆ ದಂಡದ ಜೊತೆಗೆ ಜೈಲುಶಿಕ್ಷೆಯನ್ನು ವಿಧಿಸುವುದಕ್ಕೆ ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಬೆದರಿಕೆ, ಅನಗತ್ಯ ಪ್ರಭಾವ, ಬಲಾತ್ಕಾರ, ಮದುವೆ ಅಥವಾ ಇನ್ನಿತರ ಮೋಸದ ವಿಧಾನಗಳಿಂದ ಮತಾಂತರಕ್ಕೆ ಪ್ರಯತ್ನಿಸುವುದು ಕಂಡು ಬಂದರೆ ಅಂಥವರಿಗೆ ಈ ಸುಗ್ರೀವಾಜ್ಞೆಯು ಧಾರ್ಮಿಕ ಸ್ವಾತಂತ್ರ್ಯ ಮಸೂದೆ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಹೇಳಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications