ವಿಡಿಯೋ: ಉಮಾ ಭಾರತಿ ನೋಡಿ ಕಣ್ಣೀರಿಟ್ಟ ಸಾಧ್ವಿ ಪ್ರಜ್ಞಾ
ಭೋಪಾಲ್, ಏಪ್ರಿಲ್ 29: ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ಸಾಧ್ವಿ ಪ್ರಜ್ಞಾ ಸಿಂಗ್ ಅವರು ಬಿಜೆಪಿ ನಾಯಕಿ ಉಮಾ ಭಾರತಿಯವರನ್ನು ಕಂಡು ಕಣ್ಣೀರಿಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವೆ ಉಮಾ ಭಾರತಿ ಅವರು ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಭೋಪಾಲ್ ನಲ್ಲಿ ಭೇಟಿಯಾದರು. ಕಾರಿನಲ್ಲಿ ಕುಳಿತಿದ್ದ ಪ್ರಜ್ಞಾ ಅವರ ಮುಖವನ್ನು ತಮ್ಮ ಬೊಗಸೆಯಲ್ಲಿ ಉಮಾ ಭಾರತಿ ಅವರು ಹಿಡಿಯುತ್ತಿದ್ದಂತೆಯೇ ಸಾಧ್ವಿ ಭಾವುಕರಾಗಿ ಬಿಕ್ಕಿದರು. ನಂತರ ಉಮಾಭಾರತಿ ಅವರು ಸಾಧ್ವಿ ಅವರನ್ನು ಸಂತೈಸಿದರು.
#WATCH Madhya Pradesh: Pragya Singh Thakur, BJP's LS candidate from Bhopal breaks down while meeting Union Minister and senior BJP leader Uma Bharti in Bhopal. pic.twitter.com/SqcvJPCfnZ
— ANI (@ANI) April 29, 2019
ಭೋಪಾಲ್ ನಲ್ಲಿ ಸಾಧ್ವಿ ಅವರನ್ನು ಅಭ್ಯರ್ಥಿ ಎಂದು ಘೋಷಿಸುತ್ತಿದ್ದಂತೆಯೇ ವಿಪಕ್ಷಗಳು ಬಿಜೆಪಿ ಮೇಲೆ ಸಾಕಷ್ಟು ವಾಗ್ದಾಳಿ ನಡೆಸಿತ್ತು. ಅಂತೆಯೇ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಧ್ವಿ ಅವರೂ ಸಾಕಷ್ಟು ವಿವಾದಾತ್ಮಕ ಹೇಳಿಕೆಯನ್ನೂ ನೀಡಿದ್ದರು. 'ನನ್ನ ಶಾಪದಿಂದಲೇ ಹೇಮಂತ್ ಕರ್ಕರೆ ಮೃತರಾಗಿದ್ದು' 'ದಿಗ್ವಿಜಯ್ ಸಿಂಗ್ ಭಯೋತ್ಪಾದಕ' ಎಂಬಿತ್ಯಾದಿ ವಿವಾದಾತ್ಮಕ ಹೇಳಿಕೆಯಿಂದಾಗಿ ಸಾಧ್ವಿ ಚುನಾವಣಾ ಆಯೋಗದಿಂದ ನೋಟಿಸ್ ಸಹ ಪಡೆದಿದ್ದರು.

2008 ರ ಮಾಲೇಗಾಂವ್ ಸ್ಫೋಟದ ಆರೋಪಿಯಾಗಿ ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿದ್ದ ಸಾಧ್ವಿ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಬಾರಿಯ ಲೋಕಸಭೆ ಚುನಾವಣೆಗೆ ಬಿಜೆಪಿ, ಸಾಂಧ್ವಿ ಅವರಿಗೆ ಮಧ್ಯಪ್ರದೇಶದ ಭೋಪಾಲ್ ನಿಂದ ಟಿಕೆಟ್ ನೀಡಿದೆ. ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರನ್ನು ಸಾಧ್ವಿ ಎದುರಿಸಲಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications