ಕೊರೊನಾದಿಂದ ಗುಣಮುಖನಾಗಲು ಸೀಮೆಎಣ್ಣೆ ಕುಡಿದು ವ್ಯಕ್ತಿ ಸಾವು
ಭೋಪಾಲ್, ಮೇ 17: ಕೊರೊನಾ ಸೋಂಕಿನಿಂದ ಗುಣಮುಖನಾಗಲು ಸೀಮೆ ಎಣ್ಣೆ ಕುಡಿದು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಮೃತ ಮಹೇಂದ್ರ ವೃತ್ತಿಯಲ್ಲಿ ದರ್ಜಿಯಾಗಿದ್ದ. ಅವನು ತನ್ನ ಕುಟುಂಬದೊಂದಿಗೆ ಭೋಪಾಲ್ನ ಶಿವನಗರ ಹಿನೋತಿಯಾ ಪ್ರದೇಶದಲ್ಲಿ ವಾಸಿಸುತ್ತಿದ್ದ. ಮಹೇಂದ್ರ ತನಗೆ ತಾನೇ ಕೊರೋನಾ ರೋಗವಿದೆ ಎಂದು ಭಾವಿಸಿದ್ದ.
ಸೀಮೆಎಣ್ಣೆ ಕುಡಿಯುವುದರಿಂದ ವೈರಸ್ ಅನ್ನು ನಾಶಪಡಿಸಬಹುದು ಎಂದು ಆತನಿಗೆ ನಂಬಿಕೆ ಇತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮಹೇಂದ್ರ ಬುಧವಾರ ರಾತ್ರಿ 9 ಗಂಟೆಗೆ ಸೀಮೆಎಣ್ಣೆ ಸೇವಿಸಿದ್ದ.

ಮೃತನನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು ಈತನಿಗೆ ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಆದರೆ ತನಗೆ ಕೊರೊನಾ ಇದೆ ಎಂದು ಭಾವಿಸಿದ ಆತ ಸೀಮೆಎಣ್ಣೆ ಸೇವಿಸಿದರೆ ಕೊರೊನಾದಿಂದ ಗುಣವಾಗಬಹುದು ಎಂದು ನಂಬಿದ್ದಾನೆ. ಅದಕ್ಕಾಗಿ ಅದನ್ನು ಸೇವಿಸಿದ ಪರಿಣಾಮ ಸಾವನ್ನಪ್ಪಿದ್ದಾನೆ.
ಆದರೆ ಮೃತ ಮಹೇಂದ್ರ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ, ಸುಮಾರು ಎರಡು ದಿನಗಳ ಹಿಂದೆ, ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಿದೆ ಎಂದು ಅವನ ಕುಟುಂಬ ಸದಸ್ಯರಿಗೆ ತಿಳಿಸಿದಾಗ, ಅವರು ಅವನನ್ನು ಅಲ್ಲಿಗೆ ಸ್ಥಳಾಂತರಿಸಿದರು. ವೈದ್ಯರು ಶನಿವಾರ ಮಹೇಂದ್ರ ಸಾವನ್ನಪ್ಪಿದ್ದಾಗಿ ಘೋಷಿಸಿದರು.
ಮಹೇಂದ್ರ ಆರೋಗ್ಯ ಕೆಟ್ಟ ನಂತರ ಅವನ ಕುಟುಂಬ ಅವನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು, ಅಲ್ಲಿ ಹಾಸಿಗೆ ಸಿಕ್ಕದೆ ಆಸ್ಪತ್ರೆ ಆಡಳಿತವು ಅವನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದೆ. ಆ ಬಳಿಕ ಕುಟುಂಬ ಸದಸ್ಯರು ಅವರನ್ನು ಹಮೀದಿಯಾ ಆಸ್ಪತ್ರೆಗೆ ಸಾಗಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications