Get Updates
Get notified of breaking news, exclusive insights, and must-see stories!

ಕೊರೊನಾದಿಂದ ಗುಣಮುಖನಾಗಲು ಸೀಮೆಎಣ್ಣೆ ಕುಡಿದು ವ್ಯಕ್ತಿ ಸಾವು

ಭೋಪಾಲ್, ಮೇ 17: ಕೊರೊನಾ ಸೋಂಕಿನಿಂದ ಗುಣಮುಖನಾಗಲು ಸೀಮೆ ಎಣ್ಣೆ ಕುಡಿದು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಮೃತ ಮಹೇಂದ್ರ ವೃತ್ತಿಯಲ್ಲಿ ದರ್ಜಿಯಾಗಿದ್ದ. ಅವನು ತನ್ನ ಕುಟುಂಬದೊಂದಿಗೆ ಭೋಪಾಲ್‌ನ ಶಿವನಗರ ಹಿನೋತಿಯಾ ಪ್ರದೇಶದಲ್ಲಿ ವಾಸಿಸುತ್ತಿದ್ದ. ಮಹೇಂದ್ರ ತನಗೆ ತಾನೇ ಕೊರೋನಾ ರೋಗವಿದೆ ಎಂದು ಭಾವಿಸಿದ್ದ.

ಸೀಮೆಎಣ್ಣೆ ಕುಡಿಯುವುದರಿಂದ ವೈರಸ್ ಅನ್ನು ನಾಶಪಡಿಸಬಹುದು ಎಂದು ಆತನಿಗೆ ನಂಬಿಕೆ ಇತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮಹೇಂದ್ರ ಬುಧವಾರ ರಾತ್ರಿ 9 ಗಂಟೆಗೆ ಸೀಮೆಎಣ್ಣೆ ಸೇವಿಸಿದ್ದ.

Death

ಮೃತನನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು ಈತನಿಗೆ ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡಿತ್ತು. ಆದರೆ ತನಗೆ ಕೊರೊನಾ ಇದೆ ಎಂದು ಭಾವಿಸಿದ ಆತ ಸೀಮೆಎಣ್ಣೆ ಸೇವಿಸಿದರೆ ಕೊರೊನಾದಿಂದ ಗುಣವಾಗಬಹುದು ಎಂದು ನಂಬಿದ್ದಾನೆ. ಅದಕ್ಕಾಗಿ ಅದನ್ನು ಸೇವಿಸಿದ ಪರಿಣಾಮ ಸಾವನ್ನಪ್ಪಿದ್ದಾನೆ.

ಆದರೆ ಮೃತ ಮಹೇಂದ್ರ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ, ಸುಮಾರು ಎರಡು ದಿನಗಳ ಹಿಂದೆ, ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಿದೆ ಎಂದು ಅವನ ಕುಟುಂಬ ಸದಸ್ಯರಿಗೆ ತಿಳಿಸಿದಾಗ, ಅವರು ಅವನನ್ನು ಅಲ್ಲಿಗೆ ಸ್ಥಳಾಂತರಿಸಿದರು. ವೈದ್ಯರು ಶನಿವಾರ ಮಹೇಂದ್ರ ಸಾವನ್ನಪ್ಪಿದ್ದಾಗಿ ಘೋಷಿಸಿದರು.

ಮಹೇಂದ್ರ ಆರೋಗ್ಯ ಕೆಟ್ಟ ನಂತರ ಅವನ ಕುಟುಂಬ ಅವನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು, ಅಲ್ಲಿ ಹಾಸಿಗೆ ಸಿಕ್ಕದೆ ಆಸ್ಪತ್ರೆ ಆಡಳಿತವು ಅವನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದೆ. ಆ ಬಳಿಕ ಕುಟುಂಬ ಸದಸ್ಯರು ಅವರನ್ನು ಹಮೀದಿಯಾ ಆಸ್ಪತ್ರೆಗೆ ಸಾಗಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+