ಲಂಚ ಕೇಳಿದ ತಹಶೀಲ್ದಾರ್ ಕಾರಿಗೆ ಎಮ್ಮೆ ತಂದು ಕಟ್ಟಿದ ರೈತ
ಭೋಪಾಲ್ (ಮಧ್ಯಪ್ರದೇಶ), ಸೆಪ್ಟೆಂಬರ್ 13: ಕೆಲಸವೊಂದನ್ನು ಮಾಡಿಕೊಡುವುದಕ್ಕೆ ಲಂಚ ಕೇಳಿದ ತಹಶೀಲ್ದಾರ್ ವರ್ತನೆಗೆ ಬೇಸತ್ತ ವ್ಯಕ್ತಿಯೊಬ್ಬರು ಎಂಥ ನಿರ್ಧಾರ ಮಾಡಿದ್ದಾರೆ ಗೊತ್ತಾ? ಈಗ ಆ ಮೂಲಕ ಭೂಪೇಂದ್ರ ಸಿಂಗ್ ಕೂಡ ಸುದ್ದಿ ಆಗಿದ್ದಾರೆ. ವಿದಿಶಾದ ಸಿರೋಂಜ್ ಜಿಲ್ಲೆಯ ಭೂಪೇಂದ್ರ ಸಿಂಗ್ ಹತ್ತಿರ ತಹಶೀಲ್ದಾರ್ ಕೇಳಿದ ಇಪ್ಪತ್ತೈದು ಸಾವಿರ ರುಪಾಯಿ ಲಂಚ ನೀಡಲು ಆಗುತ್ತಿರಲಿಲ್ಲ.
ಕೊನೆಗೆ ತನ್ನ ಎಮ್ಮೆಯನ್ನು ತಂದು, ತಹಶೀಲ್ದಾರ್ ರ ಅಧಿಕೃತ ಕಾರಿಗೆ ಕಟ್ಟಿಹಾಕಿ ಬಿಟ್ಟಿದ್ದಾರೆ ಸಿಂಗ್. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ಅವರು, ನನ್ನ ಕುಟುಂಬದ ಭೂ ದಾಖಲೆಗಳನ್ನು ಸರಿಪಡಿಸಲು ಆರು ತಿಂಗಳಿಂದ ತಹಶೀಲ್ದಾರ್ ಹಿಂದೆ ಸುತ್ತಾಡುತ್ತಲೇ ಇದ್ದೀನಿ. ಆದರೆ ಹಣ ಕೊಡುವ ತನಕ ನನ್ನ ಕೆಲಸ ಮಾಡುವುದಿಲ್ಲ ಎಂದುಬಿಟ್ಟರು. ನನ್ನ ಹತ್ತಿರ ಹಣ ಇಲ್ಲ ಮತ್ತು ನನ್ನ ಬಳಿ ಇರೋ ಬೆಲೆ ಬಾಳುವ ಎಮ್ಮೆಯನ್ನು ತಂದು ಅವರ ಕಾರಿಗೆ ಕಟ್ಟಿದೆ ಎಂದಿದ್ದಾರೆ.

ಆದರೆ, ಸಿಂಗ್ ಮಾಡಿದ ಆರೋಪವನ್ನು ತಹಶೀಲ್ದಾರ್ ಸಿದ್ಧಾರ್ಥ್ ಸಿಂಘಾಲ್ ನಿರಾಕರಿಸಿದ್ದಾರೆ. ಪ್ರಚಾರಕ್ಕಾಗಿ ಹೀಗೆ ಮಾಡಲಾಗುತ್ತಿದೆ ಎಂದಿದ್ದಾರೆ. ಇನ್ನು ಭೂಪೇಂದ್ರ ಸಿಂಗ್ ಈ ಬಗ್ಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರಿಗೂ ಮನವಿ ಸಲ್ಲಿಸಿದ್ದಾರೆ.
ಈ ಹಿಂದೆ ಲಂಚ ಕೇಳಿದ್ದ ಅಧಿಕಾರಿಯ ಕಾರಿಗೆ ಮಧ್ಯಪ್ರದೇಶದ ಮತ್ತೊಬ್ಬ ರೈತರು ಸಹ ಇದೇ ರೀತಿ ಎಮ್ಮೆ ಕಟ್ಟಿ ಹಾಕಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications