ಸಂಸದೆ ಪ್ರಗ್ಯಾ ಸಿಂಗ್ಗೆ ಜೀವ ಬೆದರಿಕೆ ಕರೆ
ಭೋಪಾಲ್, ಜೂನ್ 18: ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹೋದರ ಇಕ್ಬಾಲ್ ಕಸ್ಕರ್ ಆಪ್ತನೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಶನಿವಾರ ಆರೋಪಿಸಿದ್ದಾರೆ.
ಕರೆ ಮಾಡಿರುವ ಅಪರಿಚಿತ ವ್ಯಕ್ತಿ ಭೋಪಾಲ್ನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಮುಸ್ಲಿಮರ ವಿರುದ್ಧ ಹೇಳಿಕೆ ನೀಡುತ್ತಿರುವುದಕ್ಕೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಬೆದರಿಕೆ ದೂರು ಪ್ರಕರಣ ಸಂಬಂಧ ಪ್ರಜ್ಞಾ ಠಾಕೂರ್ ಭೋಪಾಲ್ನ ಟಿಟಿ ನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.
"ಬೆದರಿಕೆ ಕರೆ ಬಂದಿರುವ ಬಗ್ಗೆ ಪ್ರಗ್ಯಾ ಠಾಕೂರ್ ದೂರಿನ ನಂತರ, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 506 (ಅಪರಾಧ ಬೆದರಿಕೆ) ಮತ್ತು 507 (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ," ಎಂದು ಟಿಟಿ ನಗರ ಪೊಲೀಸ್ ಠಾಣೆಯ ಪ್ರಭಾರಿ ಚೆನ್ ಸಿಂಗ್ ರಘುವಂಶಿ ಹೇಳಿದ್ದಾರೆ. ಬೆದರಿಕೆ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗುರುತು ಬಿಟ್ಟುಕೊಡದ ಅನಾಮಿಕ
ದೂರಿನ ಪ್ರಕಾರ, ಶುಕ್ರವಾರ ರಾತ್ರಿ ಪ್ರಗ್ಯಾ ಸಿಂಗ್ಗೆ ಕರೆ ಬಂದಿದೆ. ದಾವೂದ್ ಸೋದರ ಇಕ್ಬಾಲ್ ಕಸ್ಕರ್ ನಿಕಟವರ್ತಿ ಎಂದು ಹೇಳಿಕೊಂಡು ಕರೆ ಮಾಡಿರುವ ಅಪರಿಚಿತ, ಮುಸ್ಲಿಮರ ವಿರುದ್ಧ ಕಾಮೆಂಟ್ ಮಾಡಿದ್ದಕ್ಕಾಗಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.
ಪ್ರಗ್ಯಾ ತನಗೆ ಕರೆ ಮಾಡಿದ ವ್ಯಕ್ತಿ ಬಳಿ ಇಕ್ಬಾಲ್ ಕಸ್ಕರ್ ಯಾರು ಎಂದು ಪ್ರಶ್ನಿಸಿದಾಗ, ಕರೆ ಮಾಡಿದವನು ಕೊಲೆಯಾದ ಮೇಲೆ ಅವನ ಬಗ್ಗೆ ತಿಳಿದುಕೊಳ್ಳುತ್ತೀಯಾ ಎಂದು ಬೆದರಿಕೆ ಹಾಕಿದ್ದಾನೆ.
ಕರೆ ಮಾಡಿದವನ ಬಳಿ ಗುರುತು ಹೇಳುವಂತೆ ಪ್ರಗ್ಯಾ ಸಿಂಗ್ ಎಷ್ಟು ಬಾರಿ ಕೇಳಿಕೊಂಡರು ಆತ ತಾನು ಯಾರು ಎನ್ನುವುದನ್ನು ಬಹಿರಂಗಪಡಿಸಿಲ್ಲ.
|
ಬೆದರಿಕೆ ಕರೆ ವೀಡಿಯೋ ವೈರಲ್
ಬೆದರಿಕೆ ಕರೆ ಮಾಡಿದಾಗ ಆ ವ್ಯಕ್ತಿಯೊಂದಿಗೆ ಪ್ರಗ್ಯಾ ಸಿಂಗ್ ಠಾಕೂರ್ 2 ನಿಮಿಷ ಮಾತನಾಡಿರುವ ವಿಡಿಯೋವನ್ನು ರೆಕಾರ್ಡ್ ಮಾಡಲಾಗಿದ್ದು, ಈ ವಿಡಿಯೋ ವೈರಲ್ ಆಗತೊಡಗಿದೆ.
ಪ್ರಗ್ಯಾ ಸಿಂಗ್ ಠಾಕೂರ್ ತನಗೆ ಕರೆ ಮಾಡಿದವನ ಬಳಿ ಯಾವ ಹೇಳಿಕೆಗಳಿಗಾಗಿ ಕೊಲೆ ಮಾಡುತ್ತೀರಿ ಎಂದು ಕೇಳಿದ್ದಕ್ಕೆ, ಕರೆ ಮಾಡಿದವನು "ನೀನು ಮುಸ್ಲಿಮರ ವಿರುದ್ಧ ದ್ವೇಷವನ್ನು ಹರಡುತ್ತಿದ್ದೀರಿ ಮತ್ತು ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡುತ್ತಿರುವೆ" ಎಂದು ಹೇಳಿದ್ದಾನೆ.

ನೂಪುರ್ ಶರ್ಮಾ ಹೇಳಿಕೆ ಸಮರ್ಥಿಸಿಕೊಂಡಿದ್ದ ಪ್ರಗ್ಯಾ
ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರವಾದಿ ಮುಹಮ್ಮದ್ ಕುರಿತಾದ ಆಕ್ಷೇಪಾರ್ಹ ಹೇಳಿಕೆಗೆ ಪ್ರಗ್ಯಾ ಠಾಕೂರ್ ಬೆಂಬಲ ವ್ಯಕ್ತಪಡಿಸಿದ್ದರು.
ನೂಪುರ್ ಶರ್ಮಾ ಹೇಳಿಕೆ ದೇಶದಲ್ಲಿ ಭಾರೀ ಹಿಂಸಾಚಾರ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು. ಅಂತರರಾಷ್ಟ್ರೀಯ ಮಟ್ಟದಲ್ಲಿ ನೂಪುರ್ ಶರ್ಮಾ ಹೇಳಿಕೆಗೆ ವಿರೋಧ ವ್ಯಕ್ತವಾಗಿತ್ತು.

ಈ ಮೊದಲು ಬೆದರಿಕೆ ಹಾಕಿದ್ದರು
ಇಕ್ಬಾಲ್ ಕಸ್ಕರ್ ಆಪ್ತ ಎಂದು ಹೇಳಿಕೊಳ್ಳುವ ವ್ಯಕ್ತಿ ಫೋನ್ ಕರೆಯಲ್ಲಿ ಬೆದರಿಕೆ ಹಾಕುತ್ತಿರುವುದು ಇದೇ ಮೊದಲಲ್ಲ. ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದ ವಸೀಮ್ ರಿಜ್ವಿ ಅಲಿಯಾಸ್ ಜಿತೇಂದ್ರ ನಾರಾಯಣ್ ತ್ಯಾಗಿ ತನಗೆ ವಿದೇಶಗಳಿಂದ ಫೋನ್ನಲ್ಲಿ ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಪತ್ರ ಬರೆದಿದ್ದರು.
ಜೂನ್ 10 ರಂದು ರಾತ್ರಿ 11.30 ರ ಸುಮಾರಿಗೆ ದುಬೈನಿಂದ ವಾಟ್ಸಾಪ್ ಕರೆ ಮೂಲಕ ತನಗೆ ಕೊಲೆ ಮತ್ತು ಶಿರಚ್ಛೇದದ ಬೆದರಿಕೆಗಳು ಬಂದವು ಎಂದು ತ್ಯಾಗಿ ಆರೋಪಿಸಿದ್ದ.
ಭಯೋತ್ಪಾದಕ ಇಕ್ಬಾಲ್ ಕಸ್ಕರ್ನ ಸಹೋದರ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬರು ಮುಂದಿನ ಮೂರು ದಿನಗಳಲ್ಲಿ ತ್ಯಾಗಿಯ ಶಿರಚ್ಛೇದ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾನೆ ಎಂದು ಆರೋಪಿಸಿದ್ದರು. ಇಸ್ಲಾಂ ತೊರೆದು ಹಿಂದೂ ಧರ್ಮ ಸೇರಿದಾಗಿನಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications