ಬಾಸ್ಕೆಟ್ ಬಾಲ್ ಆಡಿದ ಪ್ರಗ್ಯಾ ಸಿಂಗ್ ವಿಡಿಯೋ ವೈರಲ್: ಅನೇಕ ಮಂದಿಗೆ ಆಶ್ಚರ್ಯ
ಭೋಪಾಲ್, ಜು. 03: ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಭೋಪಾಲ್ನಲ್ಲಿ ಬಾಸ್ಕೆಟ್ ಬಾಲ್ ಆಡುತ್ತಿರುವ ವೀಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.
ಇತ್ತೀಚೆಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದ ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ಠಾಕೂರ್, ಭಾರೀ ಸರಳ, ಸುಲಭವಾಗಿ ಬಾಸ್ಕೆಟ್ ಬಾಲ್ ಅನ್ನು ಆಡುವುದನ್ನು ಈ ವೀಡಿಯೋದಲ್ಲಿ ನೋಡಬಹುದಾಗಿದೆ. ಕೆಲವು ಸ್ಥಳೀಯ ನಾಯಕರು ಮತ್ತು ಛಾಯಾಗ್ರಾಹಕರು ಜೊತೆಯಲ್ಲೇ ಇದ್ದ ಸಂದರ್ಭದಲ್ಲಿ ಪ್ರಗ್ಯಾ ಚೆಂಡನ್ನು ಸರಿಯಾಗಿ ಬಾಸ್ಕೆಟ್ಗೆ ಹಾಕುವಲ್ಲಿ ಸಫಲರಾಗಿ ಚಪ್ಪಾಳೆಗಿಟ್ಟಿಸಿಕೊಂಡಿದ್ದಾರೆ.
ಗುರುವಾರ, ಸಂಸದೆ ತೋಟಗಾರಿಕೆಗಾಗಿ ಶಕ್ತಿ ನಗರ ಪ್ರದೇಶದ ಬಾಸ್ಕೆಟ್ ಬಾಲ್ ಅಂಕಣಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅಂಕಣದಲ್ಲಿದ್ದ ಆಟಗಾರರನ್ನು ನೋಡಿ ಸಂಸದೆ ಕೂಡಾ ಒಂದು ಶಾಟ್ ಚೆಂಡು ಹೊಡೆಯುವ ನಿರ್ಧಾರ ಮಾಡಿದ್ದಾರೆ.

ಮಾರ್ಚ್ನಲ್ಲಿ ಪ್ರಗ್ಯಾ ಠಾಕೂರ್, ಉಸಿರಾಟದ ತೊಂದರೆಯ ಕಾರಣ ನವದೆಹಲಿಯಿಂದ ಮುಂಬೈಗೆ ತೆರಳಿದ್ದರು. ಒಂದು ತಿಂಗಳೊಳಗೆ ಎರಡನೇ ಬಾರಿಗೆ ಪ್ರಗ್ಯಾರನ್ನು ಆಸ್ಪತ್ರೆಗೆ ದಾಖಲಿಸಬೇಕಾದ ಪರಿಸ್ಥಿತಿ ಬಂದಿತ್ತು. ಫೆಬ್ರವರಿ 19 ರಂದು, ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ಪ್ರಗ್ಯಾ ದಾಖಲಾಗಿದ್ದರು.
भोपाल की भाजपा सांसद साध्वी ठाकुर को अभी तक व्हील चेयर पर ही देखा था लेकिन आज उन्हें भोपाल में स्टेडीयम में बास्केट बॉल पर हाथ आज़माते देखा तो बड़ी ख़ुशी हुई…
— Narendra Saluja (@NarendraSaluja) July 1, 2021
अभी तक यही पता था कि किसी चोट के कारण वो ठीक से खड़ी और चल फिर भी नही सकती है…?
ईश्वर उन्हें हमेशा स्वस्थ रखे.. pic.twitter.com/UQrmsXkime
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ನ ನರೇಂದ್ರ ಸಲೂಜಾ, ''ಭೋಪಾಲ್ನ ಬಿಜೆಪಿ ಸಂಸದೆ ಸಾಧ್ವಿ ಠಾಕೂರ್ ಗಾಲಿ ಕುರ್ಚಿಯಲ್ಲೇ ಕೂತಿದ್ದನ್ನು ಇತ್ತೀಚೆಗೆ ನೋಡಿದ್ದೆ. ಆದರೆ ಇಂದು ಅವರು ಭೋಪಾಲ್ನ ಕ್ರೀಡಾಂಗಣದಲ್ಲಿ ಬಾಸ್ಕೆಟ್ ಬಾಲ್ ಆಡುತ್ತಿದ್ದಾರೆ. ಇದನ್ನು ನೋಡಿ ಬಹಳ ಸಂತೋಷವಾಯಿತು,'' ಎಂದು ಹೇಳಿದ್ದಾರೆ.
''ಹಾಗೆಯೇ ಈವರೆಗೆ ನನಗೆ ಲಭಿಸಿದ ಮಾಹಿತಿ ಪ್ರಕಾರ ಯಾವುದೋ ಒಂದು ಗಾಯದ ಕಾರಣದಿಂದಾಗಿ ಪ್ರಗ್ಯಾ ಸರಿಯಾಗಿ ನಿಂತು ನಡೆಯಲು ಸಾಧ್ಯವಿಲ್ಲ ಎಂಬುದನ್ನು ತಿಳಿದಿತ್ತು. ದೇವರು ಅವರನ್ನು ಯಾವಾಗಲೂ ಆರೋಗ್ಯವಾಗಿರಿಸಲಿ,'' ಎಂದು ಹಾರೈಸಿದ್ದಾರೆ.
10 ಮಂದಿ ಸಾವನ್ನಪ್ಪಿ, ಅನೇಕರು ಗಾಯಗೊಂಡ 2008 ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಗ್ಯಾ ಸಿಂಗ್ ಆರೋಪಿಯಾಗಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 2017 ರಲ್ಲಿ ಆರೋಗ್ಯದ ಆಧಾರದ ಮೇಲೆ ಪ್ರಗ್ಯಾ ಸಿಂಗ್ ಜಾಮೀನು ಪಡೆದಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ನಿಂದ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ನನ್ನು 3.6 ಲಕ್ಷ ಮತಗಳಿಂದ ಪ್ರಗ್ಯಾ ಸೋಲಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications