Get Updates
Get notified of breaking news, exclusive insights, and must-see stories!

ಮಧ್ಯಪ್ರದೇಶ: ವಿಶ್ವಾಸಮತಕ್ಕೆ 2ದಿನದ ಮುನ್ನ ಅಮಿತ್ ಶಾಗೆ ಪತ್ರ ಬರೆದ ಕಮಲ್ ನಾಥ್

ಭೋಪಾಲ್, ಮಾರ್ಚ್ 15: ರಾಜ್ಯದ ಪ್ರಭಾವೀ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಬಿಜೆಪಿಗೆ ಸೇರಿದ ನಂತರ, ಪತನದ ಅಂಚಿನಲ್ಲಿರುವ ಕಮಲ್ ನಾಥ್ ಸರಕಾರದ ಭವಿಷ್ಯ ಸೋಮವಾರ (ಮಾ 16) ನಿರ್ಣಯವಾಗಲಿದೆ.

ಮುಖ್ಯಮಂತ್ರಿ ಕಮಲ್ ನಾಥ್ ಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಲಾಲಾಜೀ ಥಂಡನ್ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ವಿಶ್ವಾಸ ಮತ ಸಾಬೀತು ಮಾಡುವ ಪ್ರಕ್ರಿಯೆಯನ್ನು ಮುಂದೂಡಬಾರದು, ಸ್ಥಗಿತಗೊಳಿಸಬಾರದು. ಸೋಮವಾರ ಪ್ರಕ್ರಿಯೆ ನಡೆಯಬೇಕು ಎನ್ನುವ ಸ್ಪಷ್ಟ ಸೂಚನೆ ರಾಜ್ಯಪಾಲರಿಂದ ಬಂದಿದೆ.

ಈ ನಡುವೆ, ಮುಖ್ಯಮಂತ್ರಿ ಕಮಲ್ ನಾಥ್, ಕೇಂದ್ರ ಗೃಹಸಚಿವ ಅಮಿತ್ ಶಾಗೆ ಪತ್ರವನ್ನು ಬರೆದಿದ್ದಾರೆ. ಕರ್ನಾಟಕದಲ್ಲಿರುವ 22 ಅತೃಪ್ತ ಶಾಸಕರ ರಕ್ಷಣೆಗೆ ಅಲ್ಲಿನ ಮುಖ್ಯಮಂತ್ರಿಗಳಿಗೆ ಸೂಚನೆಯನ್ನು ನೀಡಬೇಕೆಂದು ಕಮಲ್ ನಾಥ್, ಪತ್ರದಲ್ಲಿ ಬರೆದಿದ್ದಾರೆ.

Congress MLAs out of Bengaluru, will guarantee their security: Kamal Nath writes to Amit Shah

22 ಅತೃಪ್ತರಲ್ಲಿ 19 ಶಾಸಕರು ಬೆಂಗಳೂರಿನಲ್ಲಿದ್ದು, ಈ ಎಲ್ಲಾ ಶಾಸಕರು ಸಿಆರ್ ಪಿಎಫ್ ರಕ್ಷಣೆಯನ್ನು ಕೋರುತ್ತಿದ್ದಾರೆ ಎಂದು ಕಮಲ್ ನಾಥ್ ಪತ್ರದ ಮುಖೇನ ಮನವಿ ಮಾಡಿದ್ದಾರೆ. ಈ ಎಲ್ಲಾ ಶಾಸಕರು ರಕ್ಷಣೆಗಾಗಿ ರಾಜ್ಯಪಾಲರಲ್ಲಿ ನೇರವಾಗಿ ಮನವಿ ಮಾಡಿದ್ದರು.

ಇ-ಮೇಲ್ ಮೂಲಕ ರಾಜ್ಯಪಾಲರಲ್ಲಿ ಮನವಿ ಮಾಡಿರುವ ಈ ಶಾಸಕರು, "ವಿಶ್ವಾಸಮತ ಗೊತ್ತುವಳಿಯ ವೇಳೆ ಭದ್ರತೆಯ ಕಾರಣಕ್ಕಾಗಿ ನಮಗೆ ಭೋಪಾಲ್ ಗೆ ಬರಲು ಸಾಧ್ಯವಾಗುತ್ತಿಲ್ಲ" ಎಂದು ಹೇಳಿದ್ದಾರೆ. "ರಾಜ್ಯದ ಮುಖ್ಯಮಂತ್ರಿಯಾಗಿರುವುದರಿಂದ, ಅವರ ರಕ್ಷಣೆ ನೋಡಿಕೊಳ್ಳುವುದು ನನ್ನ ಜಬಾಬ್ದಾರಿ. ಹಾಗಾಗಿ ಅಮಿತ್ ಶಾಗೆ ಪತ್ರ ಮುಖೇನ ಮನವಿ ಮಾಡಿಕೊಳ್ಳಲಾಗಿದೆ" ಎಂದು ಕಮಲ್ ನಾಥ್ ಹೇಳಿದ್ದಾರೆ.

"ಶಾಸಕರು ರಾಜೀನಾಮೆ ಪತ್ರವನ್ನು ಪ್ರತ್ಯೇಕವಾಗಿ ನನಗೂ ಸಹ ಕಳಿಸಿದ್ದಾರೆ. ಮಾರ್ಚ್ 10ರಂದು ಶಾಸಕರ ರಾಜೀನಾಮೆ ಪತ್ರ ತಲುಪಿದೆ. ಸಂವಿಧಾನದ 174 ಮತ್ತು 175 (2) ನಿಯಮಗಳ ಅನ್ವಯ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲು ಸೂಚಿಸುತ್ತಿದ್ದೇನೆ" ಎಂದು ರಾಜ್ಯಪಾಲರು ಹೇಳಿದ್ದಾರೆ. (ಚಿತ್ರ: ಪಿಟಿಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+