ಮಧ್ಯಪ್ರದೇಶ: ವಿಶ್ವಾಸಮತಕ್ಕೆ 2ದಿನದ ಮುನ್ನ ಅಮಿತ್ ಶಾಗೆ ಪತ್ರ ಬರೆದ ಕಮಲ್ ನಾಥ್
ಭೋಪಾಲ್, ಮಾರ್ಚ್ 15: ರಾಜ್ಯದ ಪ್ರಭಾವೀ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಬಿಜೆಪಿಗೆ ಸೇರಿದ ನಂತರ, ಪತನದ ಅಂಚಿನಲ್ಲಿರುವ ಕಮಲ್ ನಾಥ್ ಸರಕಾರದ ಭವಿಷ್ಯ ಸೋಮವಾರ (ಮಾ 16) ನಿರ್ಣಯವಾಗಲಿದೆ.
ಮುಖ್ಯಮಂತ್ರಿ ಕಮಲ್ ನಾಥ್ ಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಲಾಲಾಜೀ ಥಂಡನ್ ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ವಿಶ್ವಾಸ ಮತ ಸಾಬೀತು ಮಾಡುವ ಪ್ರಕ್ರಿಯೆಯನ್ನು ಮುಂದೂಡಬಾರದು, ಸ್ಥಗಿತಗೊಳಿಸಬಾರದು. ಸೋಮವಾರ ಪ್ರಕ್ರಿಯೆ ನಡೆಯಬೇಕು ಎನ್ನುವ ಸ್ಪಷ್ಟ ಸೂಚನೆ ರಾಜ್ಯಪಾಲರಿಂದ ಬಂದಿದೆ.
ಈ ನಡುವೆ, ಮುಖ್ಯಮಂತ್ರಿ ಕಮಲ್ ನಾಥ್, ಕೇಂದ್ರ ಗೃಹಸಚಿವ ಅಮಿತ್ ಶಾಗೆ ಪತ್ರವನ್ನು ಬರೆದಿದ್ದಾರೆ. ಕರ್ನಾಟಕದಲ್ಲಿರುವ 22 ಅತೃಪ್ತ ಶಾಸಕರ ರಕ್ಷಣೆಗೆ ಅಲ್ಲಿನ ಮುಖ್ಯಮಂತ್ರಿಗಳಿಗೆ ಸೂಚನೆಯನ್ನು ನೀಡಬೇಕೆಂದು ಕಮಲ್ ನಾಥ್, ಪತ್ರದಲ್ಲಿ ಬರೆದಿದ್ದಾರೆ.

22 ಅತೃಪ್ತರಲ್ಲಿ 19 ಶಾಸಕರು ಬೆಂಗಳೂರಿನಲ್ಲಿದ್ದು, ಈ ಎಲ್ಲಾ ಶಾಸಕರು ಸಿಆರ್ ಪಿಎಫ್ ರಕ್ಷಣೆಯನ್ನು ಕೋರುತ್ತಿದ್ದಾರೆ ಎಂದು ಕಮಲ್ ನಾಥ್ ಪತ್ರದ ಮುಖೇನ ಮನವಿ ಮಾಡಿದ್ದಾರೆ. ಈ ಎಲ್ಲಾ ಶಾಸಕರು ರಕ್ಷಣೆಗಾಗಿ ರಾಜ್ಯಪಾಲರಲ್ಲಿ ನೇರವಾಗಿ ಮನವಿ ಮಾಡಿದ್ದರು.
ಇ-ಮೇಲ್ ಮೂಲಕ ರಾಜ್ಯಪಾಲರಲ್ಲಿ ಮನವಿ ಮಾಡಿರುವ ಈ ಶಾಸಕರು, "ವಿಶ್ವಾಸಮತ ಗೊತ್ತುವಳಿಯ ವೇಳೆ ಭದ್ರತೆಯ ಕಾರಣಕ್ಕಾಗಿ ನಮಗೆ ಭೋಪಾಲ್ ಗೆ ಬರಲು ಸಾಧ್ಯವಾಗುತ್ತಿಲ್ಲ" ಎಂದು ಹೇಳಿದ್ದಾರೆ. "ರಾಜ್ಯದ ಮುಖ್ಯಮಂತ್ರಿಯಾಗಿರುವುದರಿಂದ, ಅವರ ರಕ್ಷಣೆ ನೋಡಿಕೊಳ್ಳುವುದು ನನ್ನ ಜಬಾಬ್ದಾರಿ. ಹಾಗಾಗಿ ಅಮಿತ್ ಶಾಗೆ ಪತ್ರ ಮುಖೇನ ಮನವಿ ಮಾಡಿಕೊಳ್ಳಲಾಗಿದೆ" ಎಂದು ಕಮಲ್ ನಾಥ್ ಹೇಳಿದ್ದಾರೆ.
"ಶಾಸಕರು ರಾಜೀನಾಮೆ ಪತ್ರವನ್ನು ಪ್ರತ್ಯೇಕವಾಗಿ ನನಗೂ ಸಹ ಕಳಿಸಿದ್ದಾರೆ. ಮಾರ್ಚ್ 10ರಂದು ಶಾಸಕರ ರಾಜೀನಾಮೆ ಪತ್ರ ತಲುಪಿದೆ. ಸಂವಿಧಾನದ 174 ಮತ್ತು 175 (2) ನಿಯಮಗಳ ಅನ್ವಯ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲು ಸೂಚಿಸುತ್ತಿದ್ದೇನೆ" ಎಂದು ರಾಜ್ಯಪಾಲರು ಹೇಳಿದ್ದಾರೆ. (ಚಿತ್ರ: ಪಿಟಿಐ)
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications