ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ದೇಣಿಗೆ
ಭೋಪಾಲ್, ಜನವರಿ 18: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ 1,11,111 ರೂಪಾಯಿಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಗೆ ಸೋಮವಾರ ದೇಣಿಗೆ ನೀಡಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರವನ್ನೂ ಬರೆದಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಸಂದರ್ಭ ಶಾಂತಿ ಕಾಪಾಡಿಕೊಳ್ಳುವಂತೆ ಕೋರಿಕೊಂಡಿದ್ದಾರೆ. ಜನವರಿ 15ರಿಂದ ವಿಶ್ವ ಹಿಂದೂ ಪರಿಷದ್ ರಾಮ ಮಂದಿರ ನಿರ್ಮಾಣಕ್ಕೆ 44 ದಿನಗಳ ದೇಣಿಗೆ ಸಂಗ್ರಹಣಾ ಅಭಿಯಾನ ಆರಂಭಿಸಿದ್ದು, ಅಭಿಯಾನದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಕಾಪಾಡಬೇಕಾಗಿ ಪತ್ರದ ಮೂಲಕ ಕೇಳಿಕೊಂಡಿದ್ದಾರೆ.
"ಧರ್ಮ ರಾಜಕೀಯದ ಸಾಧನವಲ್ಲ. ಮಾನವ ಹಾಗೂ ದೇವರ ನಡುವಿನ ಕೊಂಡಿ. ಆದ್ದರಿಂದ ಮಂದಿರಕ್ಕೆ ದೇಣಿಗೆ ನೀಡುವುದು ಕೂಡ ವೈಯಕ್ತಿಕ ಆಯ್ಕೆ. ಹೀಗಾಗಿ ದೇಣಿಗೆಯನ್ನು ಶಾಂತಿಯುತವಾಗಿ ನಡೆಸಬೇಕಿದೆ" ಎಂದು ಮಹಾತ್ಮಾ ಗಾಂಧಿಯವರ ಹೇಳಿಕೆಯೊಂದನ್ನು ಉಲ್ಲೇಖಿಸಿ ಮನವಿ ಮಾಡಿದ್ದಾರೆ.

"ಕೋಲು, ಕತ್ತಿಗಳನ್ನು ಹಿಡಿದುಕೊಂಡು ಕೆಲವು ಸಂಘಟನೆಗಳು ದೇಣಿಗೆ ಸಂಗ್ರಹ ಕೆಲಸವನ್ನು ನಡೆಸುತ್ತಿವೆ. ಕೆಲವು ಧರ್ಮ, ಸಮುದಾಯಗಳ ವಿರುದ್ಧ ಘೋಷಣೆ ಕೂಗಲಾಗುತ್ತಿದೆ. ಇದರ ಬಗ್ಗೆ ನಿಮ್ಮ ಗಮನ ಸೆಳೆಯುತ್ತಿದ್ದೇನೆ. ಮಧ್ಯಪ್ರದೇಶದಲ್ಲಿ ಅಂಥ ಮೂರು ಘಟನೆಗಳು ನಡೆದಿವೆ. ಇತರ ಸ್ಥಳಗಳಲ್ಲಿಯೂ ಅಹಿತಕರ ಘಟನೆಗಳು ನಡೆದ ವರದಿಯಾಗಿವೆ. ಇದು ಸಾಮಾಜಿಕ ಶಾಂತಿಗೆ ಧಕ್ಕೆ ತಂದಂತೆ" ಎಂದು ಹೇಳಿದ್ದಾರೆ.
"ನೀವು ಈ ದೇಶದ ಪ್ರಧಾನಿ. ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಧರ್ಮದಿಂದ ವಿರೋಧವಿಲ್ಲ ಎಂಬುದು ನಿಮಗೆ ತಿಳಿದಿದೆ. ಆದ್ದರಿಂದ ರಾಮನ ಹೆಸರಿನಲ್ಲಿ ದೇಣಿಗೆ ಸಂಗ್ರಹವು ಶಾಂತಿಯುತ ವಾತಾವರಣದಲ್ಲಿಯೇ ನಡೆಯಬೇಕಿದೆ. ಹಿಂಸಾಚಾರದಿಂದ ದೇಣಿಗೆ ಸಂಗ್ರಹಿಸುವ ಸಂಘಗಳನ್ನು ದೂರವಿಡಬೇಕಿದೆ" ಎಂದು ಸಲಹೆ ನೀಡಿದ್ದಾರೆ.
ವಿಶ್ವ ಹಿಂದೂ ಪರಿಷದ್, ಸಂಗ್ರಹಿಸಿದ ದೇಣಿಗೆಯ ಲೆಕ್ಕವನ್ನು ಪಾರದರ್ಶಕವಾಗಿ ಸಾರ್ವಜನಿಕರಿಗೆ ಮುಕ್ತವಾಗಿರಿಸಬೇಕು ಎಂದಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications