ಕಾಂಗ್ರೆಸ್ ವಿಸರ್ಜಿಸಿ, ಗಾಂಧೀಜಿ ಬಯಕೆ ಈಡೇರಿಸಿ : ಯೋಗಿ ಆದಿತ್ಯನಾಥ್
ಭೋಪಾಲ್, ನವೆಂಬರ್ 22: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಧ್ಯಪ್ರದೇಶದಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ನಾಯಕರನ್ನು ತರಾಟೆ ತೆಗೆದುಕೊಂಡರು.
ಮಧ್ಯಪ್ರದೇಶ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರಿಗೆ ನಗರ ನಕ್ಸಲ್ಗಳ ಜತೆ ನಂಟಿದೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಷ್ಯವನ್ನು ಇಂದು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡ ಯೋಗಿ ಅವರು, "ಕಾಂಗ್ರೆಸ್ನ ದೊಡ್ಡ ನಾಯಕನ ಹೆಸರು ನಕ್ಸಲರ ಜತೆಗೆ ತಳುಕು ಹಾಕಿಕೊಂಡಿದೆ.
ಭಯೋತ್ಪಾದನೆ ಮತ್ತು ನಕ್ಸಲ್ ಚಟುವಟಿಕೆ ದೇಶಕ್ಕೆ ಬಹುದೊಡ್ಡ ಸಮಸ್ಯೆಯಾಗಿದೆ. ಆದರೆ, ಕಾಂಗ್ರೆಸ್ ಸಹಾನುಭೂತಿ ತೋರುತ್ತಿರುವುದು ಖಂಡನೀಯ. ಕಾಂಗ್ರೆಸ್ ರೈತರ ಪರವಾಗಿ ಕೆಲಸ ಮಾಡುತ್ತಿಲ್ಲ ಹೀಗಾಗಿ, ಮಹಾತ್ಮ ಗಾಂಧೀಜಿಯವರ ಬಯಕೆಯಂತೆ ಅದನ್ನು ವಿಸರ್ಜಿಸಬೇಕು. ಅದು ನಿಮ್ಮ ಜವಾಬ್ದಾರಿ," ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಭೀಮಾ ಕೋರೆಗಾಂವ್ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಬಳಿ ದಿಗ್ವಿಜಯ್ ಸಿಂಗ್ ಅವರ ಫೋನ್ ನಂಬರ್ ಇರುವುದು ಪತ್ತೆಯಾಗಿದೆ ಈ ಕುರಿತು ತನಿಖೆ ನಡೆಸುತ್ತಿರುವ ಪುಣೆ ಪೊಲೀಸರಿಗೆ ಪತ್ರವೊಂದು ಲಭಿಸಿತ್ತು. ಅದರಲ್ಲಿ ದಿಗ್ವಿಜಯ್ ಸಿಂಗ್ ಅವರ ಹೆಸರು ಉಲ್ಲೇಖವಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದಿಗ್ವಿಜಯ್ ಸಿಂಗ್ ಅವರಿಗೆ ನಗರ ನಕ್ಸಲರ ನಂಟಿದೆ ಎಂದು ಆರೋಪಿಸಲಾಗುತ್ತಿದೆ. ಆದರೆ, ಈ ಆರೋಪವನ್ನು ತಳ್ಳಿಹಾಕಿದ್ದ ದಿಗ್ವಿಜಯ್ ಸಿಂಗ್, ತಾಕತ್ ಇದ್ದರೆ ನನ್ನನ್ನು ಬಂಧಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದರು.
ಚುನಾವಣೆ ಎದುರಿಸುತ್ತಿರುವ ಐದು ರಾಜ್ಯಗಳಲ್ಲಿ ಯೋಗಿ ಆದಿತ್ಯನಾಥ್ ಅವರ ಭಾಷಣಕ್ಕೆ ಭಾರಿ ಬೇಡಿಕೆ ಹುಟ್ಟುಕೊಂಡಿದೆ. ವಿಶೇಷವಾಗಿ ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳಲ್ಲಿ ಹೆಚ್ಚೆಚ್ಚು ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ಯೋಗಿ ಅವರು ಪಾಲ್ಗೊಳ್ಳುತ್ತಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications