ಕ್ವಾಟರ್ ಏರಿಸಿದರೂ ಟೈಟ್ ಆಗುತ್ತಿಲ್ಲ: ಗೃಹ ಸಚಿವರಿಗೆ ಕುಡಕನ ಪತ್ರ
ಭೋಪಾಲ್, ಮೇ 8: ಒಳಗಿರುವ ಪರಮಾತ್ಮ ಆಡಿಸುವ ಆಟ, ಸಾರಾಯಿ ಅಂಗಡಿಯೇ ನನಗೆ ಈ ದೇಶದ ರಾಜಧಾನಿ ಎನ್ನುವಂತೆ ಕುಡಿದ ಮತ್ತಿನಲ್ಲಿ ಮದ್ಯವ್ಯಸನಿ ನಿರ್ಭೀತಿಯಿಂದ ಏನನ್ನೂ ಬೇಕಾದರೂ ಮಾಡುತ್ತಾನೆ ಎನ್ನುವುದಕ್ಕೆ ಉದಾಹರಣೆಯೊಂದು ಮಧ್ಯ ಪ್ರದೇಶದ ಉಜ್ಜೈನಿಯಿಂದ ವರದಿಯಾಗಿದೆ.
ಒಂದು ಕ್ವಾಟರ್ ಏರಿಸಿದರೂ ಮತ್ತೇರುತ್ತಿಲ್ಲ ಎಂದು ಕುಡುಕನೊಬ್ಬ ನೇರವಾಗಿ ರಾಜ್ಯದ ಗೃಹ ಸಚಿವರಿಗೆ ಪತ್ರ ಬರೆದಿದ್ದಾನೆ. ಆದರೆ, ಪತ್ರದ ಒಟ್ಟಾರೆ ಸಾರಾಂಶವೇನಂದರೆ, ಗುತ್ತಿಗೆದಾರರು ಎಣ್ಣೆಗೆ ನೀರು ಬೆರೆಸಿ ಮಾರಾಟ ಮಾಡುತ್ತಿದ್ದಾರೆ ಎನ್ನುವುದು.
ಓದಲು ವಿಚಿತ್ರವೆನಿಸಿದರೂ, ಮದ್ಯದಲ್ಲಿ ಕಲಬೆರಕೆ ಹೆಚ್ಚಾಗುತ್ತಿದೆ, ರಾಜ್ಯದ ಆದಾಯಕ್ಕೆ ತೊಂದರೆಯಾಗುತ್ತಿದೆ ಎನ್ನುವ ಸತ್ಯವನ್ನು ಕುಡುಕ ಪತ್ರದ ಮೂಲಕ ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ಬರೆದಿದ್ದಾನೆ.

ಕಳೆದ ಇಪ್ಪತ್ತು ವರ್ಷಗಳಿಂದ ಮದ್ಯ ಸೇವಿಸುತ್ತಿದ್ದೇನೆ, ಇತ್ತೀಚಿನ ದಿನಗಳಲ್ಲಿ ಕಲಬೆರಕೆ ಮಾಡುವುದು ಹೆಚ್ಚಾಗುತ್ತಿದೆ. ಮದ್ಯದ ಗುತ್ತಿಗೆದಾರರ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಲೋಕೇಂದ್ರ ಸೋಥಿಯಾ ಎನ್ನುವ ವ್ಯಕ್ತಿ ಸಚಿವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾನೆ.
ನನ್ನ ಪತ್ರವನ್ನು ಅರ್ಜಿ ಎಂದು ಸ್ವೀಕರಿಸಿ, ಇದರ ಆಧಾರದ ಮೇಲೆ ಸೂಕ್ತ ಕ್ರಮ ಜರುಗಿಸದಿದ್ದರೆ, ಗ್ರಾಹಕರ ನ್ಯಾಯಾಲಯದ ಮೊರೆ ಹೋಗುವುದಾಗಿ ಸೋಥಿಯಾ ಎಚ್ಚರಿಕೆಯನ್ನು ನೀಡಿದ್ದಾನೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು, ನಿಮ್ಮ ಅರ್ಜಿಯನ್ನು ಲಘುವಾಗಿ ಪರಿಗಣಿಸಿಲ್ಲ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎನ್ನುವ ಭರವಸೆಯನ್ನು ನೀಡಿದ್ದಾರೆ.

ಕುಡುಕನೊಬ್ಬನನ್ನು ಕಲಬೆರೆಕೆಯ ಬಗ್ಗೆ ಗೃಹ ಸಚಿವರಿಗೆ ಪತ್ರ ಬರೆದಿದ್ದರೆ, ಇನ್ನೊಂದು ಕಡೆ, ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಭೋಪಾಲ್ ನಗರದ ಮದ್ಯದಂಗಡಿಯೊಂದಕ್ಕೆ ಕಲ್ಲುತೂರಿ ಆಕ್ರೋಶ ಹೊರಹಾಕಿದ್ದರು. "ಇಂತಹ ಅಂಗಡಿಗಳಿಂದ ಕೂಲಿ ಕಾರ್ಮಿಕರ ಹಣ ಪೋಲಾಗುತ್ತದೆ, ಮಹಿಳೆಯರ ಜೀವನ ಹಾಳಾಗುತ್ತದೆ. ಸರಕಾರದ ನೀತಿಗೆ ವಿರುದ್ಧವಾಗಿ ಮದ್ಯದಂಗಡಿ ಇರುವುದರಿಂದ ಇಲ್ಲಿನ ನಿವಾಸಿಗಳು, ಮಹಿಳೆಯರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕಾಗಿ ನಾನು ಪ್ರತಿಭಟನೆ ನಡೆಸುತ್ತಿದ್ದೇನೆ"ಎಂದು ಉಮಾ ಭಾರತಿ ಹೇಳಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications