ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೇಮಂತ್ ಕರ್ಕರೆ ಸಾವಿನ ಕುರಿತ ವಿವಾದಿತ ಹೇಳಿಕೆ: ಪ್ರಜ್ಞಾ ಸಿಂಗ್‌ಗೆ ನೋಟಿಸ್

|
Google Oneindia Kannada News

ಭೋಪಾಲ್, ಏ.20: ಎಸ್‌ಟಿಎಸ್ ಅಧಿಕಾರಿ ಹೇಮಂತ್ ಕರ್ಕರೆ ಸಾವಿನ ಕುರಿತ ಹೇಳಿಕೆಗೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಜ್ಞಾ ಸಿಂಗ್‌ಗೆ ಚುನಾವಣಾ ಆಯೋಗ ನೋಟಿಸ್ ಜಾರಿಮಾಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

2008ರ ನವೆಂಬರ್ 26ರಂದು ನಡೆದ ಮುಂಬೈ ಮೇಲಿನ ಉಗ್ರರ ದಾಳಿಯಲ್ಲಿ ಹೋರಾಟ ನಡೆಸುವ ಮೂಲಕ ಭಾರತೀಯರ ಪಾಲಿಗೆ ಹೀರೋ ಎನಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್)ದ ಅಧಿಕಾರಿ ಹೇಮಂತ್ ಕರ್ಕರೆ ತಮ್ಮ ಶಾಪದಿಂದಲೇ ಸತ್ತಿದ್ದು ಎನ್ನುವ ಮೂಲಕ ಸಾಧ್ವಿ ಭಾರಿ ವಿವಾದ ಹುಟ್ಟಿಸಿದ್ದರು.

ವಿವಾದಿತ ಹೇಳಿಕೆ ಹಿಂಪಡೆದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿವಾದಿತ ಹೇಳಿಕೆ ಹಿಂಪಡೆದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಪಡೆ (ಎಡಿಎಸ್) ಅಧಿಕಾರಿಯಾಗಿದ್ದ ಹೇಮಂತ್ ಕರ್ಕರೆ ಅವರು 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಅವರೊಂದಿಗೆ ಇನ್ನಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಮೃತಪಟ್ಟಿದ್ದರು. ಹೇಮಂತ್ ಕರ್ಕರೆ ಅವರ ತನಿಖೆಯ ಕಾರಣದಿಂದಲೇ ಸಾಧ್ವಿ ಪ್ರಜ್ಞಾ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಸೇರುವಂತಾಗಿತ್ತು.

EC to issue notice to Pragya Thakur on her remarks against Hemant Karkare

ಪ್ರಜ್ಞಾ ಸಿಂಗ್ ಅವರ ಹೇಳಿಕೆಗೆ ಭಾರಿ ವಿವಾದ ವ್ಯಕ್ತವಾಗಿತ್ತು. ಇದೀಗ ವಿವಾದಿತ ಹೇಳಿಕೆಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. 2008ರ ಸೆಪ್ಟೆಂಬರ್‌ 29ರಂದು ನಡೆದ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಸತ್ತು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ನಿಮ್ಮ ರಾಜಕೀಯ ಜ್ಞಾನವನ್ನು ಒರೆಗೆ ಹಚ್ಚುವ ರಸಪ್ರಶ್ನೆ

ಹಿಂದೂ ಭಯೋತ್ಪಾದನಾ ಸಂಘಟನೆ ಈ ದಾಳಿ ನಡೆಸಿದೆ ಎಂದು ಆರೋಪಿಸಿದ್ದ ಮಹಾರಾಷ್ಟ್ರ ಎಟಿಎಸ್, ಸಾಧ್ವಿ ಮತ್ತು ಇತರರನ್ನು ಬಂಧಿಸಿತ್ತು. 2016ರ ಮೇ ತಿಂಗಳಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸಾಧ್ವಿಗೆ ಕ್ಲೀನ್ ಚಿಟ್ ನೀಡಿತ್ತು.

English summary
The Election Commission (EC) is going to issue a notice to Malegaon blast accused and BJP candidate from Bhopal Pragya Singh Thakur over her remarks against police officer Hemant Karkare, who was killed in the 26/11 terror attack, an officer said Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X