ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ಸೇ ಗೆಲ್ಲೋದು ಎಂದ ಬಿಜೆಪಿ ಮುಖಂಡ!
Recommended Video

ಭೋಪಾಲ್, ಡಿಸೆಂಬರ್ 01: "ಮಧ್ಯಪ್ರದೇಶದಲ್ಲಿ ನಿಮ್ಮ ಪಕ್ಷವೇ ಗೆಲ್ಲೋದು, ಅಭಿನಂದನೆಗಳು" ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡರಾಗಿರುವ ಒಬ್ಬರು ಕಾಂಗ್ರೆಸ್ ನಾಯಕರೊಬ್ಬರ ಬಳಿ ಖುದ್ದು ಹೇಳಿಕೊಂಡಿದ್ದಾರೆ ಎಂಬ ವದಂತಿಯೊಂದು ಹರಿದಾಡುತ್ತಿದೆ.
ಮಧ್ಯಪ್ರದೇಶದ ಕೆಲವು ಗಲ್ಲಿಗಳ ಗೋಡೆಯ ಮೇಲೆ, 'ಕಾಂಗ್ರೆಸ್ಸೇ ಸರ್ಕಾರ ರಚಿಸೋದು' ಎಂದು ಬರೆದಿರುವ ಸಾಲುಗಳೂ ಕಾಣಸಿಗುತ್ತಿವೆ. ಬಿಜೆಪಿ ಮುಖಂಡರೇ ಹಾಗೆ ಹೇಳಿದ್ದಾರೆ ಎಂದೂ ಆ ಸಾಲಿನ ಕೆಳಗೆ ನಮೂದಿಸಲಾಗಿದೆ!
ಆದರೆ ಯಾವ ಬಿಜೆಪಿ ನಾಯಕರು ಈ ರೀತಿ ಹೇಳಿಕೆ ನೀಡಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮಧ್ಯಪ್ರದೇಶದಲ್ಲಿ ನ.28 ಚುನಾವಣೆ ನಡೆದಿದ್ದು, ಶೇ.74 ರಷ್ಟು ಮತದಾನವಾಗಿದೆ. ಮತದಾನದ ಪ್ರಮಾಣವೂ ಆಡಳಿತಾರೂಢ ಬಿಜೆಪಿಗೆ ತಲೆನೋವಾಗಿರುವುದು ಖಂಡಿತ.
ಹೀಗಿರುವಾಗ ಬಿಜೆಪಿ ನಾಯಕರೇ ಇಂಥ ಹೇಳಿಕೆ ನೀಡಿರುವುದು ಬಿಜೆಪಿ ನಾಯಕರಿಗೆ ಇರಿಸುಮುರಿಸುಂಟು ಮಾಡಿದೆ.

ಬಿಜೆಪಿ ನಾಯಕ ಹೇಳಿದ್ದೇನು?
"ಸದ್ಯದಲ್ಲೇ ನೀವು ಮಂತ್ರಿಯಾಗುತ್ತೀರಿ. ಏಕೆಂದರೆ ಮಧ್ಯಪ್ರದೇಶದಲ್ಲಿಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ" ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರಿಗೆ ಮಧ್ಯಪ್ರದೇಶದ ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಈ ವಿಷಯವನ್ನು ಕಾಂಗ್ರೆಸ್ ನಾಯಕ ತಮ್ಮ ಕಾರ್ಯಕರ್ತರಿಗೆ ತಿಳಿಸಿದ್ದು, ಕೆಲವರು ಬಿಜೆಪಿ ನಾಯಕನ ಹೇಳಿಕೆಯನ್ನು ಗೋಡೆಗಳ ಮೇಲೆ ಬರೆದು, ಫಲಿತಾಂಶ ಬರುವ ಮೊದಲೇ ಬಿಜೆಪಿ ಸೋಲೊಪ್ಪಿಕೊಂಡಿದೆ ಎಂದು ಅಣಕಿಸುತ್ತಿದ್ದಾರೆ!

ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡ ಬಿಜೆಪಿ!
ಈ ಮೂಲಕ ಬಿಜೆಪಿ ಫಲಿತಾಂಶಕ್ಕೂ ಮುನ್ನವೇ ಸೋಲೊಪ್ಪಿಕೊಂಡಿದೆಯೇ? ಚುನಾವಣೆಗೂ ಮುನ್ನ ಇದ್ದ ವಿಶ್ವಾಸ ಬಿಜೆಪಿಗೆ ಚುನಾವಣೆಯ ನಂತರ ಉಡುಗಿಹೋಗಿದೆಯೇ? ಮಧ್ಯಪ್ರದೇಶದ ಚುನಾವಣೆಯ ನಂತರ ದಾಖಲಾದ ಮತದಾನದ ಪ್ರಮಾಣವೂ ಬಿಜೆಪಿಗೆ ಆತಂಕವನ್ನುಂಟು ಮಾಡಿದೆ. ಸಮಾನ್ಯವಾಗಿ ಮತದಾನದ ಪ್ರಮಾಣ ಹೆಚ್ಚಾದಷ್ಟೂ ಆಡಳಿತಾರೂಢ ಸರ್ಕಾರಕ್ಕೆ ನಷ್ಟ ಜಾಸ್ತಿ. ಆಡಳಿತ ವಿರೋಧಿ ಅಲೆ ಇದ್ದಾಗ ಜನರು ರೊಚ್ಚಿಗೆದ್ದು ಮತಚಲಾಯಿಸಬಹುದಾದ ಕಾರಣ ಮತದಾನದ ಪ್ರಮಾಣ ಹೆಚ್ಚಾಗುತ್ತದೆ. ಆ ಕಾರಣದಿಂದ ಸೋಲುವ ಭೀತಿ ಬಿಜೆಪಿಗೆ ಎದುರಾದಂತಿದೆ.

ಮೋದಿ-ಯೋಗಿ ಅಲೆ!
ಮಧ್ಯಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನಿರಂತರವಾಗಿ ನಡೆಸಿದ ಪ್ರಚಾರ ಫಲನೀಡಿದೆಯಾ? ಅಕಸ್ಮಾತ್ ಫಲ ನೀಡಿದ್ದರೆ ಬಿಜೆಪಿ ಮುಖಂಡರೇ ಹೀಗೆ, 'ಕಾಂಗ್ರೆಸ್ಸೇ ಗೆಲ್ಲೋದು' ಎಂಬ ಹೇಳಿಕೆಯನ್ನು ಏಕೆ ನೀಡುತ್ತಿದ್ದರು?

ಡಿ.11 ರಂದು ಉತ್ತರ !
230 ವಿಧಾನಸಭಾ ಕ್ಷೇತ್ರಗಳ ಮಧ್ಯಪ್ರದೇಶ ವಿಧಾನಸಭೆಗೆ ನ.28 ರಂದು ಚುನಾವಣೆ ನಡೆದಿದ್ದು, ಡಿ.11 ಫಲಿತಾಂಶ ಹೊರಬೀಳಲಿದೆ. ಪ್ರಸ್ತುತ ಶಿವರಾಜ್ ಸಿಂಗ್ ಚೌಹಾಣ್ ಅವರ ಬಿಜೆಪಿ ಸರ್ಕಾರ ಸತತ ಮೂರು ಬಾರಿ ಅಧಿಕಾರದಲ್ಲಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆಯೇ ಎಂಬ ಪ್ರಶ್ನೆಗೆ ಉತ್ತರ ಬೇಕಾದವರು ಡಿ.11 ರವರೆಗೆ ಕಾಯಲೇಬೇಕು!
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications