'ಐಟಂ' ಪದಕ್ಕೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಕಮಲನಾಥ್
ಭೋಪಾಲ್, ಅಕ್ಟೋಬರ್.19: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡ ಅಮಾರ್ತಿ ದೇವಿ ಅವರನ್ನು 'ಐಟಂ' ಎಂದು ಸಂಬೋಧಿಸಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ತಮ್ಮ ಹೇಳಿಕೆಗೆ ಸೋಮವಾರ ಸ್ಪಷ್ಟನೆ ನೀಡಲು ಪ್ರಯತ್ನಿಸಿದರು.
"ನಾನು ಏನನ್ನೋ ಹೇಳುವುದಕ್ಕೆ ಬಯಸಿದೆ, ಆದರೆ ಅದರ ಹಿಂದೆ ಯಾರನ್ನೂ ಅವಮಾನಿಸಬೇಕು ಎಂಬ ಉದ್ದೇಶ ಇರಲಿಲ್ಲ. ತಕ್ಷಣಕ್ಕೆ ನನಗೆ ಆ ಪಕ್ಷದ ಅಭ್ಯರ್ಥಿಯ ಹೆಸರು ಜ್ಞಾಪಕಕ್ಕೆ ಬರಲಿಲ್ಲ. ಹೀಗಾಗಿ ಪಟ್ಟಿಯಲ್ಲಿದ್ದ ಐಟಂ ನಂಬರ್,1 ಮತ್ತು ಐಟಂ ನಂಬರ್.2 ಎಂದು ಹೇಳಿದೆ" ಅಂತಾ ಮಾಜಿ ಸಿಎಂ ಕಮಲನಾಥ್ ಸ್ಪಷ್ಟನೆ ನೀಡಿದ್ದಾರೆ.
ದರ್ಮಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಕಮಲನಾಥ್ ಅವರು, ಐಟಂ ಎಂಬ ಪದ ಪ್ರಯೋಗಿಸಿದ್ದರು. ನಮ್ಮ ಪಕ್ಷದ ಅಭ್ಯರ್ಥಿಯು ಬಹಳ 'ಸರಳ ವ್ಯಕ್ತಿ'ಯೇ ಹೊರತು ಎದುರಾಳಿ ಪಕ್ಷದ 'ಐಟಂ' ರೀತಿ ಅಲ್ಲ ಎಂದು ಹೇಳಿದ್ದರು.

ದಬ್ರಾದಲ್ಲಿ ಪ್ರಚಾರದ ವೇಳೆ ಆಗಿದ್ದೇನು?:
ಕಾಂಗ್ರೆಸ್ ಅಭ್ಯರ್ಥಿ ಪರ ಮಾಜಿ ಮುಖ್ಯಮಂತ್ರಿ ಕಮಲನಾಥ್ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ವಿರೋಧ ಪಕ್ಷದ ಅಭ್ಯರ್ಥಿ ಅಮಾರ್ತಿ ದೇವಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಅಭ್ಯರ್ಥಿ ಹೆಸರನ್ನೂ ಉಲ್ಲೇಖಿಸಿದೇ ಐಟಂ ಎಂದು ಕರೆದಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಸಲಿಗೆ ಭಾಷಣದ ಸಂದರ್ಭದಲ್ಲಿ ಕಮನಾಥ್, "ನಾನೇಕೆ ಅವರ ಹೆಸರು ಹೇಳಲಿ (ಎದುರಾಳಿ ಪಕ್ಷದ ಅಭ್ಯರ್ಥಿ)? ನನಗಿಂತ ನಿಮಗೇ ಚೆನ್ನಾಗಿ ಆ ವ್ಯಕ್ತಿ ಬಗ್ಗೆ ತಿಳಿದಿದೆ. ಎಂತಹ 'ಐಟಂ' ಎಂದು ಕಮಲ್ ನಾಥ್ ಹೇಳಿದ್ದರು". ಈ ಸಂದರ್ಭದಲ್ಲಿ ನೆರೆದಿದ್ದ ಜನರು ಜೋರಾಗಿ ಇಮಾರ್ತಿ ದೇವಿ ಎಂದು ಬಿಜೆಪಿ ಅಭ್ಯರ್ಥಿ ಹೆಸರನ್ನು ಕೂಗಿದರು.
ಕಮಲನಾಥ್ ಹೇಳಿಕೆ ಖಂಡಿಸಿ ಮೌನ ಪ್ರತಿಭಟನೆ:
ಬಿಜೆಪಿ ಅಭ್ಯರ್ಥಿ ಅಮಾರ್ತಿ ದೇವಿ ಅವರನ್ನು ಐಟಂ ಎಂದು ಸಂಬೋಧಿಸಿದಕ್ಕೆ ಮಾಜಿ ಮುಖ್ಯಮಂತ್ರಿ ಕಮಲನಾಥ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಧ್ಯಮಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು, ಕಮಲನಾಥ್ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications