ಮಧ್ಯಪ್ರದೇಶದಲ್ಲಿ ಐವರು ಹಾಸ್ಯ ಕಲಾವಿದರ ಬಂಧನ
ಭೋಪಾಲ್, ಜನವರಿ 02: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಧ್ಯಪ್ರದೇಶದಲ್ಲಿ ಐವರು ಸ್ಟ್ಯಾಂಡ್ ಅಪ್ ಕಾಮಿಡಿಯನ್ ಗಳನ್ನು ಬಂಧಿಸಲಾಗಿದೆ.
ಹಿಂದೂ ದೇವರು, ದೇವತೆಗಳನ್ನು ಅವಮಾನ ಮಾಡಿ ಹಾಸ್ಯ ಮಾಡಿರುವ ಆರೋಪದಲ್ಲಿ ಇಂದೋರ್ ನಲ್ಲಿ ಶುಕ್ರವಾರ ಐವರು ಹಾಸ್ಯ ಕಲಾವಿದರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹೊಸ ವರ್ಷದ ಪ್ರಯುಕ್ತ ಇಂದೋರ್ ಕೆಫೆಯೊಂದರಲ್ಲಿ ಹಾಸ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರಖರ್ ವ್ಯಾಸ, ಪ್ರಿಯಂ ವ್ಯಾಸ್, ಮುನಾವರ್ ಫಾರುಖ್, ಎಡ್ವಿನ್ ಆಂಥೊನಿ ಹಾಗೂ ನಳಿನ್ ಯಾದವ್ ಎಂಬುವರನ್ನು ಬಂಧಿಸಲಾಗಿದೆ. ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಹಿಂದೂ ರಕ್ಷಕ ಸಂಘಟನೆ ಸದಸ್ಯರು ಬಂದು ಗಲಭೆಯೂ ಉಂಟಾಗಿತ್ತು. ಕೇಂದ್ರ ಸಚಿವ ಅಮಿತ್ ಶಾ ಕುರಿತೂ ಹಾಸ್ಯ ಮಾಡಿದ್ದಾರೆ ಎಂದು ಸಂಘಟನೆ ಸದಸ್ಯರು ಆರೋಪಿಸಿದ್ದಾರೆ.

ಈ ಹಾಸ್ಯ ಕಲಾವಿದರು ಹಿಂದೂ ದೇವರು, ಹಿಂದೂ ಪದ್ಧತಿಗಳು ಹಾಗೂ ಅಮಿತ್ ಶಾ ವಿರುದ್ಧ ಅಸಭ್ಯ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಹಾಸ್ಯ ಕಲಾವಿದರನ್ನು ಥಳಿಸುತ್ತಿರುವ ವಿಡಿಯೋ ತುಣಕು ದೊರೆತಿದ್ದು, ಈ ಹಲ್ಲೆ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸ್ ಠಾಣೆ ನಿರ್ವಾಹಕ ಕಮಲೇಶ್ ಶರ್ಮಾ ತಿಳಿಸಿದ್ದಾರೆ.
ಭಾರತ ದಂಡ ಸಂಹಿತೆ ಸೆಕ್ಷನ್ 295-A (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ನಡೆಸುವ ಕೃತ್ಯಗಳು) 298 (ಧಾರ್ಮಿಕ ಭಾವನೆಗಳನ್ನು ಧಕ್ಕೆಗೊಳಿಸುವ), 269 (ಜೀವಕ್ಕೆ ಅಪಾಯಕಾರಿಯಾಗಿರುವ ಸೋಂಕು ಹರಡುವಲ್ಲಿ ನಿರ್ಲಕ್ಷಿತ ಕೃತ್ಯ) 188 (ಸಾರ್ವಜನಿಕ ಹಿತಾಸಕ್ತಿಯ ಆದೇಶಕ್ಕೆ ಅಸಹಕಾರ) ಮತ್ತು 34ರ ಅಡಿಯಲ್ಲಿ ಐವರ ಮೇಲೆ ಪ್ರಕರಣ ದಾಖಲಾಗಿದೆ.
ಕೆಫೆಯಲ್ಲಿ ಕಾರ್ಯಕ್ರಮ ಆಯೋಜಿಸಲು ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ತಿಳಿದುಬಂದಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications