ಚಿಟ್ ಫಂಡ್ ಹಗರಣ : ಮಾಜಿ ಮುಖ್ಯಮಂತ್ರಿ ಮಗ ವಿರುದ್ಧ ಪ್ರಕರಣ
ಭೋಪಾಲ್, ಜೂನ್ 19: ಛತ್ತೀಸ್ ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ಪುತ್ರ ಅಭಿಷೇಕ್ ಸಿಂಗ್ ಹಾಗೂ 19 ಮಂದಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.
ಸರ್ಗುಜಾ ಜಿಲ್ಲೆಯ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಸಿಂಗ್, ಮಾಜಿ ಸಂಸದರೊಬ್ಬರು, ಕಾಂಗ್ರೆಸ್ ಮುಖಂಡರೊಬ್ಬರು ವಿಚಾರಣೆ ಎದುರಿಸಬೇಕಾಗಿದೆ. ಮಾಜಿ ಬಿಜೆಪಿ ಸಂಸದ ಮಧುಸೂದನ್ ಯಾದವ್, ಕಾಂಗ್ರೆಸ್ ನಾಯಕ ನರೇಶ್ ಡಕಾಲಿಯಾ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಅಭಿಷೇಕ್, ಯಾದವ್ ಹಾಗೂ ಡಕಾಲಿಯಾ ಅವರು ಚಿಟ್ ಫಂಡ್ ಸಂಸ್ಥೆಯ ಸ್ಟಾರ್ ಪ್ರಚಾರಕರಾಗಿದ್ದರು. ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಚಿಟ್ ಫಂಡ್ ಸಂಸ್ಥೆ ಕಾರ್ಯ ನಿರ್ವಹಿಸುತ್ತಿತ್ತು, 2016ರಲ್ಲಿ ಸಂಪೂರ್ಣ ಬಂದ್ ಆಗಿತ್ತು.
ಈ ಪ್ರಕರಣದಲ್ಲಿ ಅಭಿಷೇಕ್, ಯಾದವ್ ಹಾಗೂ ಡಕಾಲಿಯಾ ಸೇರಿದಂತೆ 17 ನಿರ್ದೇಶಕ ಮತ್ತು ಅನ್ಮೋಲ್ ಇಂಡಿಯಾ ಸಮಿತಿ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಂಬಿಕಾಪುರ್ ನಗರದ ಕೋಟ್ವಾಲಿ ಪೊಲೀಸರು, ತನಿಖೆ ಕೈಗೊಂಡಿದ್ದಾರೆ ಎಂದು ಐಜಿಪಿ ಕೆಸಿ ಅಗರವಾಲ್ ಹೇಳಿದ್ದಾರೆ.
ಹೂಡಿಕೆದಾರ ಕಮ್ ಏಜೆಂಟ್ ಆಗಿದ್ದ ಸಾಗರ್ ಗುಪ್ತಾ ಅವರು ದೂರು ನೀಡಿದ್ದಲ್ಲದೆ, ಸ್ಥಳೀಯ ಕೋರ್ಟಿನಲ್ಲಿ ಪಿಟೀಷನ್ ಹಾಕಿದ್ದರು. ಕೋರ್ಟ್ ನಿರ್ದೇಶನದ ಬಳಿಕ ಪೊಲೀಸರು 20 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 420, 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಛತ್ತೀಸ್ ಗಢ ಹೂಡಿಕೆದಾರರ ಹಿತಾಸಕ್ತಿ ಕಾಯ್ದೆ 2015 ಅಡಿಯಲ್ಲೂ ಕೇಸ್ ಜಡಿಯಲಾಗಿದೆ. ಎಲ್ಲಾ ಆರೋಪಿಗಳ ವಿರುದ್ಧ ಎಫ್ಐಆರ್ ಹಾಕಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಬಿಜೆಪಿ ಸೋಲು ಕಂಡಿದ್ದರೂ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದ ಹುದ್ದೆಯನ್ನು ಅಮಿತ್ ಶಾ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಭಿಷೇಕ್, ಇದೊಂದು ರಾಜಕೀಯ ಷಡ್ಯಂತ್ರ, ನಾನು ಯಾವುದೆ ಚಿಟ್ ಫಂಡ್ ಸಂಸ್ಥೆ ಹಗರಣದಲ್ಲಿ ಭಾಗಿಯಾಗಿಲ್ಲ ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications