ಜಿನ್ನಾ, ರಾಹುಲ್ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ : ಶತ್ರುಘ್ನ ಸಿನ್ಹಾ!
ಚಿಂದವಾಡ (ಮಧ್ಯ ಪ್ರದೇಶ), ಏಪ್ರಿಲ್ 27 : ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಾ ಗಾಂಧಿಯಿಂದ ಹಿಡಿದು, ಮುಹಮ್ಮದ್ ಅಲಿ ಜಿನ್ನಾ, ಸರ್ದಾರ್ ಪಟೇಲ್, ಜವಾಹರಲಾಲ್ ನೆಹರೂ ಮುಂತಾದ ಕಾಂಗ್ರೆಸ್ಸಿಗರ ಕೈವಾಡ ಅಪಾರವಿದೆ ಎಂದು ಶತ್ರುಘ್ನ ಸಿನ್ಹಾ ಅವರು ಹಾಡಿ ಹೊಗಳಿದ್ದಾರೆ.
ಚಿಂದವಾಡಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ, ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರ ಮಗ ನಕುಲ್ ನಾಥ್ ಅವರ ಪರ ಪ್ರಚಾರಕ್ಕೆಂದು ಬಂದಿದ್ದ ಮಾಜಿ ನಟ, ಹಾಲಿ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು, ಮಹಾತ್ಮಾ ಗಾಂಧಿಯಿಂದ ರಾಹುಲ್ ಗಾಂಧಿಯವರೆಗೆ ಹಲವರ ಯೋಗದಾನವಿದೆ ಎಂದು ಅಸಂಬದ್ಧವಾಗಿ ನುಡಿದಿದ್ದಾರೆ.

ಈ ಕಾಂಗ್ರೆಸ್ ಪರಿವಾರದಲ್ಲಿ ಮಹತ್ಮಾ ಗಾಂಧಿಯಿಂದ ಹಿಡಿದು, ಸರ್ದಾರ್ ವಲ್ಲಭ್ ಭಾಯಿ, ಮುಹಮ್ಮದ್ ಅಲಿ ಜಿನ್ನಾ (ಭಾರತ ಇಬ್ಭಾಗವಾಗಲು ಕಾರಣವಾದ ಮಹಾನುಭಾವ), ಜವಾಹರಲಾಲ್ ನೆಹರೂ, ಸರ್ಗೀಯ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಮುಂತಾದವರು ದೇಶದ ವಿಕಾಸದಲ್ಲಿ, ಅಭಿವೃದ್ಧಿಯಲ್ಲಿ, ದೇಶದ ಸ್ವಾತಂತ್ರ್ಯದಲ್ಲಿ ಭಾರೀ ಕಾಣಿಕೆ ನೀಡಿದ್ದಾರೆ ಎಂದು ವಾಗ್ಝರಿಯನ್ನು ಶತ್ರುಘ್ನ ಸಿನ್ಹಾ ಅವರು ಹೊರಿಸಿದರು.
Nyuntam Aay Yojana (NYAY).
— Shatrughan Sinha (@ShatruganSinha) 27 April 2019
"Our one-man show and two men army says.....it's not possible-NYAY can never be implemented. Sir ji! The Congress party makes promises which are in the interest of people & nation. Immediately after forming the governments in pic.twitter.com/ZqivWn0EWe
ನಾನೀಗ ಕಾಂಗ್ರೆಸ್ಸನ್ನು ಮೊದಲ ಬಾರಿ ಮತ್ತು ಅಂತಿಮ ಬಾರಿ ಸೇರಿಕೊಂಡಿದ್ದೇನೆ. ಇನ್ನೆಂದೂ ಈ ಪಕ್ಷವನ್ನು ತೊರೆಯುವುದಿಲ್ಲ ಎಂದು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಬಾಲಿವುಡ್ ಮಾಜಿ ನಟ ಡೈಲಾಗ್ ಬಾರಿಸಿ ಚಪ್ಪಾಳೆ ಗಿಟ್ಟಿಸಿಕೊಂಡರು. ಆ ಸಮಯದಲ್ಲಿ ಕಮಲ್ ನಾಥ್ ಮತ್ತು ನಕುಲ್ ನಾಥ್ ಅವರು ಕೂಡ ವೇದಿಕೆಯ ಮೇಲಿದ್ದರು.

ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಘಡದಲ್ಲಿ ರೈತರ ಸಾಲವನ್ನು ಕಾಂಗ್ರೆಸ್ ಸರಕಾರ ಮನ್ನಾ ಮಾಡಿದೆ. ಇದೀಗ, ಭಾರತದ ಜನತೆ ನ್ಯೂನತಮ್ ಆಯ್ ಯೋಜನಾ (ನ್ಯಾಯ್) ಬಗ್ಗೆ ಅತ್ಯಂತ ಕುತೂಹಲದಿಂದಿದ್ದಾರೆ. ಈ ಮಹಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರೆತರೆ ಈ ಯೋಜನೆಯನ್ನು ಖಂಡಿತ ಜಾರಿಗೆ ತರಲಾಗುವುದು ಎಂದು ಅವರು ನುಡಿದರು.
ಉಪ್ರದಲ್ಲಿ ಕಾಂಗ್ರೆಸ್ ವಿರುದ್ಧವೇ ಸಿನ್ಹಾ ಪ್ರಚಾರ : ತಮಾಷೆಯೆಂದರೆ, ಕಾಂಗ್ರೆಸ್ ಸೇರಿರುವ ಶತ್ರುಘ್ನ ಸಿನ್ಹಾ ಅವರು, ತಮ್ಮ ಪತ್ನಿ ಪೂನಂ ಸಿನ್ಹಾ ಅವರನ್ನು ಸಮಾಜವಾದಿ ಪಕ್ಷಕ್ಕೆ ಸೇರಿಸಿದ್ದಾರೆ ಮತ್ತು ಅವರ ಪರವಾಗಿ ಮತ್ತು ಕಾಂಗ್ರೆಸ್ ವಿರುದ್ಧವಾಗಿ ಉತ್ತರ ಪ್ರದೇಶದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಪಕ್ಷದ ವಿರುದ್ಧ ಹೇಗೆ ಪ್ರಚಾರ ಮಾಡಬೇಕೆಂದು ಶತ್ರುಘ್ನ ಸಿನ್ಹಾ ಅವರಿಗೆ ಹೇಳಿಕೊಡುವ ಅಗತ್ಯವೇ ಇಲ್ಲ. ಬಿಜೆಪಿಯಲ್ಲಿದ್ದಾಗಲೂ ಅವರು ಮಾಡಿದ್ದು ಅದನ್ನೇ.
ಅವರನ್ನೇ ಕೇಳಿ ಅಂದ ಚಿದಂಬರಂ : ಶತ್ರುಘ್ನ ಸಿನ್ಹಾ ಅವರ ಈ ಅಸಂಬದ್ಧ ಮಾತುಗಳ ಬಗ್ಗೆ ವಿವರಣೆಯನ್ನು ಅವರನ್ನೇ ಕೇಳಿ ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರು ಹೇಳಿದ್ದಾರೆ. ಕಾಂಗ್ರೆಸ್ ನ ಪ್ರತಿ ಸದಸ್ಯ ಆಡುವ ಮಾತುಗಳಿಗೆ ಅರ್ಥ, ವಿವರಣೆಯನ್ನು ನಾನು ನೀಡಬೇಕಾಗಿಲ್ಲ ಎಂದು ಕೈ ಝಾಡಿಸಿಕೊಂಡಿದ್ದಾರೆ ಚಿದಂಬರಂ.
ಕಾಂಗ್ರೆಸ್ಸಿಗೆ ಮುಜುಗರ : ಶತ್ರುಘ್ನ ಸಿನ್ಹಾ ಅವರ ಈ ಹೇಳಿಕೆ ಭಾರೀ ಮುಜುಗರಕ್ಕೆ ಕಾರಣವಾಗಿದೆ. ಆದರೆ, ಭಾಷಣ ಮಾಡುವಾಗ ಮಾತಿನ ಉದ್ವೇಗದಲ್ಲಿ ಮೌಲಾನಾ ಆಜಾದ್ ಹೆಸರು ಹೇಳುವ ಬದಲು ಮುಹಮ್ಮದ್ ಅಲಿ ಜಿನ್ನಾ ಹೆಸರು ಹೇಳಿದ್ದೇನೆ ಎಂದು ಬಿಹಾರದ ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿ ಸ್ಪರ್ಧಿಸುತ್ತಿರುವ ಸಿನ್ಹಾ ಸಮಜಾಯಿಷಿ ನೀಡಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications