ಮಧ್ಯಪ್ರದೇಶ: ಬಿಜೆಪಿ ಸೇರುವವರಿಗೆ ಕಾರು ಬಾಡಿಗೆ ಹೇಳಿಕೆ, ಬಿಜೆಪಿ ಹೇಳಿದ್ದೇನು?
ಭೋಪಾಲ್, ಸೆ.20: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವವರಿಗೆ ನಾನೇ ನನ್ನ ಕಾರು ಬಾಡಿಗೆ ನೀಡುತ್ತೇನೆ ಅಥವಾ ಬಿಟ್ಟು ಬರುತ್ತೇನೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಕಮಲ್ನಾಥ್ ಅವರ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದೆ.
ಪಕ್ಷದಿಂದ ನಿರ್ಗಮಿಸುವ ಬಗ್ಗೆ ಅಸಡ್ಡೆ ಪ್ರತಿಕ್ರಿಯೆ ನೀಡಿರುವುದಕ್ಕೆ, ಕಮಲ್ನಾಥ್ ಸಾಕಷ್ಟು ಕಾರುಗಳನ್ನು ಖರೀದಿಬೇಕಾಗಬಹುದು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಹಿಂದಿನ ಮುಖ್ಯಮಂತ್ರಿ ಕಮಲ್ನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜ್ಯೋತಿರಾಧಿತ್ಯ ಸಿಂಧಿಯಾ ಅವರು ತಮ್ಮ ನಿಷ್ಠಾವಂತರೊಂದಿಗೆ ಬಿಜೆಪಿಗೆ ಸೇರ್ಪಡೆ ಆಗುವುದರೊಂದಿಗೆ 2020 ರಲ್ಲಿ ರಾಜ್ಯದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪತನಗೊಂಡಿತ್ತು.

ಆಂತರಿಕ ಕಲಹ ಮತ್ತು ರಾಜಕೀಯ ಹಿನ್ನಡೆಯ ನಡುವೆಯೂ ಕಾಂಗ್ರೆಸ್ ಮತ್ತೆ ಪುಟಿದೇಳಲು ಪ್ರಯತ್ನ ನಡೆಸುತ್ತಿದೆ. 2014 ರಿಂದ ಅಧಿಕಾರದಿಂದ ಹೊರಗುಳಿದ ಕಾಂಗ್ರೆಸ್ ನಂತರದ ಹಲವು ಚುನಾವಣೆಗಳಲ್ಲಿ ಸೋಲುಗಳನ್ನು ಎದುರಿಸಿದೆ.
ಇತ್ತೀಚೆಗೆ ಗೋವಾದಲ್ಲಿ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾದ ನಂತರ, ಕಮಲ್ನಾಥ್ "ಯಾರು ಬಿಜೆಪಿಗೆ ಹೋಗಬೇಕು ಎನ್ನುತ್ತಾರೋ ಅವರು ಹೋಗಬಹುದು. ಪಕ್ಷ ಯಾರನ್ನು ತಡೆಯುವುದಿಲ್ಲ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗುವವರಿಗೆ ನಾನೇ ಕಾರು ಬಾಡಿಗೆ ನೀಡುತ್ತೇನೆ" ಎಂದು ಹೇಳಿದ್ದರು.

ಮಧ್ಯಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಈ ವೇಳೆ ಕಮಲ್ನಾಥ್ ಅವರ ಕಾಮೆಂಟ್ಗಳು ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತಿವೆ.
"ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥರು ಯಾರು ಬೇಕಾದರೂ ಹೋಗಬಹುದು, ಅವರಗೆ ನನ್ನ ಕಾರಿನಲ್ಲಿ ಡ್ರಾಪ್ ಮಾಡುತ್ತೇನೆ, ಬಾಡಿಗೆ ನೀಡುತ್ತೇನೆ ಎಂದು ಹೇಳುತ್ತಿದ್ದಾರೆ. ಸದಸ್ಯರು ಮತ್ತು ಕಾರ್ಯಕರ್ತರನ್ನು ಗೌರವಿಸುವುದಿಲ್ಲದ ಒಂದು ಪಕ್ಷವು ಸಾರ್ವಜನಿಕರಿಗೆ ಒಳ್ಳೆಯದನ್ನು ಮಾಡಬಹುದೇ?" ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಮುಖ್ಯಮಂತ್ರಿ ಮಾತ್ರವಲ್ಲದೇ ಮತ್ತೊಬ್ಬ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯಾ ಕೂಡ ಕಮಲ್ನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಹಾಗಾದರೆ ಅವರು ಬಹಳಷ್ಟು ಕಾರುಗಳನ್ನು ಖರೀದಿಸಬೇಕು. ಅವರ ನಾಯಕತ್ವದಿಂದ ಬಹಳಷ್ಟು ಜನರು ಅಸಮಾಧಾನ ಹೊಂದಿದ್ದಾರೆ ಎಂದಿದ್ದಾರೆ.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications