ನಾಥೂರಾಮ್ ಗೋಡ್ಸೆ ಗ್ರಂಥಾಲಯ ತೆರೆದ ಹಿಂದೂ ಮಹಾಸಭಾ
ಭೋಪಾಲ್, ಜನವರಿ 11: ವಿಶ್ವ ಹಿಂದೂ ದಿವಸ ಸಂದರ್ಭದಲ್ಲಿ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಅಖಿಲ ಭಾರತೀಯ ಹಿಂದೂ ಮಹಾಸಭಾ ಭಾನುವಾರ ಗ್ರಂಥಾಲಯವೊಂದನ್ನು ಆರಂಭಿಸಿದೆ. ಈ ಗ್ರಂಥಾಲಯವು ಮಹಾತ್ಮ ಗಾಂಧಿ ಅವರ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯ ಜೀವನ ಮತ್ತು ಸಿದ್ಧಾಂತಗಳ ಕುರಿತಾದ ಪುಸ್ತಕಗಳಿಗೆ ಮೀಸಲಾಗಿರಲಿದೆ.
ದೌಲತ್ ಗಂಜ್ನ ಮಹಾಸಭಾದ ಕಚೇರಿಯಲ್ಲಿ 'ಗೋಡ್ಸೆ ಜ್ಞಾನ ಶಾಲಾ' ಉದ್ಘಾಟನೆಯಾಗಿದೆ. ಮಹಾತ್ಮ ಗಾಂಧಿ ಹತ್ಯೆಗೆ ಹೇಗೆ ಸಂಚು ರೂಪಿಸಿದ್ದರು, ಗೋಡ್ಸೆಯ ಲೇಖನಗಳು ಮತ್ತು ಭಾಷಣಗಳನ್ನು ಒಳಗೊಂಡ ಸಾಹಿತ್ಯ ಕೃತಿಗಳು ಇಲ್ಲಿವೆ.
'ಗೋಡ್ಸೆ ಎಂತಹ ನೈಜ ರಾಷ್ಟ್ರೀಯವಾದಿ ಎಂಬುದನ್ನು ಜಗತ್ತಿನ ಮುಂದೆ ಇರಿಸಲು ಗ್ರಂಥಾಲಯವನ್ನು ತೆರೆಯಲಾಗಿದೆ. ಅವರು ಅವಿಭಜಿತ ಭಾರತಕ್ಕಾಗಿ ಹೋರಾಡಿದರು ಮತ್ತು ಬಲಿಯಾದರು. ಇಂದಿನ ನಿರ್ಲಕ್ಷಿತ ಯುವಜನರಲ್ಲಿ ಗೋಡ್ಸೆ ತಾಳಿದ್ದ ನೈಜ ರಾಷ್ಟ್ರೀಯವಾದವನ್ನು ಅಳವಡಿಸುವಂತೆ ಮಾಡುವುದು ಈ ಗ್ರಂಥಾಲಯದ ಉದ್ದೇಶ' ಎಂದು ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಹೇಳಿದ್ದಾರೆ.

ದೇಶವನ್ನ ಆಳಬೇಕು ಎಂಬ ಬಯಕೆ ಹೊಂದಿದ್ದ ಜವಾಹರಲಾಲ್ ನೆಹರೂ ಮತ್ತು ಮಹಮ್ಮದ್ ಅಲಿ ಜಿನ್ನಾರ ಬಯಕೆಗಳಿಗೆ ಅನುಗುಣವಾಗಿ ದೇಶವನ್ನು ವಿಭಜಿಸಲಾಯಿತು. ಇದಕ್ಕೆ ಗೋಡ್ಸೆ ವಿರೋಧಿಸಿದ್ದರು ಎಂದು ಅವರು ತಿಳಿಸಿದ್ದಾರೆ.
ಮಹಾತ್ಮ ಗಾಂಧಿಯ ಹತ್ಯೆಗೆ ಗೋಡ್ಸೆ ಸಂಚು ರೂಪಿಸಿದ್ದು ಗ್ವಾಲಿಯರ್ ನಗರದಲ್ಲಿ. ಇಲ್ಲಿಯೇ ಅವರು ಪಿಸ್ತೂಲು ಖರೀದಿಸಿದ್ದರು. ಹೀಗಾಗಿ ಗ್ರಂಥಾಲಯ ನಿರ್ಮಾಣಕ್ಕಾಗಿ ಗ್ವಾಲಿಯನ್ ಅನ್ನು ಆಯ್ದುಕೊಳ್ಳಲಾಗಿದೆ. ಮಹಾಸಭಾವು ತನ್ನ ಗ್ವಾಲಿಯರ್ ಕಚೇರಿಯಲ್ಲಿ ಈ ಹಿಂದೆ ಗೋಡ್ಸೆ ದೇವಾಲಯವೊಂದನ್ನು ಅರ್ಪಿಸಿತ್ತು. ಕಾಂಗ್ರೆಸ್ನ ತೀವ್ರ ವಿರೋಧದ ಬಳಿಕ ಅದನ್ನು ತೆರವುಗೊಳಿಸಲಾಗಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications