ಬಡತನ, ಹಸಿವು ತಾಳಲಾರದೆ ಕೀಟನಾಶಕ ಸೇವಿಸಿದ ಬಾಲಕ
ಭೋಪಾಲ್, ಜನವರಿ 9: ಹಸಿವು ಎನ್ನುವುದು ಮನುಷ್ಯನನ್ನು ಯಾವ ಹಂತಕ್ಕೆ ಬೇಕಾದರೂ ಇಳಿಸುತ್ತದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ, ಹಸಿವು ತಾಳಲಾರದೆ ಬಾಲಕನೊಬ್ಬ ಕೀಟನಾಶಕ ಸೇವಿಸಿರುವ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ.
ವಿಷ ಪ್ರಸಾದ ಪ್ರಕರಣ: ಊರಿಗೆ ಕಿಚ್ಚುಗುತ್ತಿ ಎಂಬ ಹೆಸರು ಬಂದಿದ್ದು ಹೇಗೆ?
ಬಾಲಕ ಇದೀಗ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಿಳಿಸಿದೆ.
ವಿಷಪ್ರಸಾದಕ್ಕೆ ಮತ್ತೆರೆಡು ಬಲಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ
ಕೋಟಾದಿಂದ ಮರಳಿ ಬಂದ ಬಾಲಕನ ತಂದೆ ನಮ್ಮ ಮನೆಯಲ್ಲಿ ಯಾವುದೇ ಪಡಿತರ ಇಲ್ಲ. ಈ ವಿಚಾರವನ್ನು ಹತ್ತಿಕ್ಕಲು ಅಧಿಕಾರಿಗಳು ಮನೆಯಲ್ಲಿ ಪಡಿತರ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಆಯೋಗದ ಮುಖ್ಯಸ್ಥ ರಾಘವೇಂದ್ರ ಶರ್ಮಾ ಮಾತನಾಡಿ, ತುಂಬಾ ಹಸಿವಾಗಿತ್ತು. ಮನೆಯಲ್ಲಿ ಊಟ ಇಲ್ಲದಿದ್ದರಿಂದ ಕೈಗೆ ಸಿಕ್ಕಿದ್ದನ್ನು ಕುಡಿದುಬಿಟ್ಟೆ ಎಂದು ಬಾಲಕ ತಿಳಿಸಿರುವುದಾಗಿ ಮಾಹಿತಿ ನೀಡಿದರು.
ಪ್ರಸಾದಕ್ಕೆ ಬಳಸುವ ನೀರಿಗೆ ಕೀಟನಾಶಕ ಬೆರೆಸಲಾಗಿತ್ತು: ಐಜಿಪಿ ಮಾಹಿತಿ
ಬಾಲಕನ ಕುಟುಂಬಸ್ಥರು ಜಂಟಿಯಾಗಿ ಸ್ವಲ್ಪ ಕೃಷಿ ಭೂಮಿಯನ್ನು ಹೊಂದಿದ್ದು, ಕಳೆದ ನವೆಂಬರ್ನಲ್ಲಿ ಕೊನೆಯ ಪಡಿತರವನ್ನು ಪಡೆದುಕೊಂಡಿದ್ದಾರೆ. ಬಾಲಕನ ಕುಟುಂಬಸ್ಥರು ರಾಜಸ್ಥಾನದ ಕೋಟಾ ಪ್ರದೇಶಕ್ಕೆ ಕೂಲಿಗಾಗಿ ತೆರಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.