ರೆಬೆಲ್ಸ್ ಓಲೈಕೆಯಲ್ಲಿ ಕಾಂಗ್ರೆಸ್, ಬಿಜೆಪಿ: ಒಂದು ದಿನದ ನಂತರ ಏನಾದೀತು!
ಭೋಪಾಲ್, ಡಿಸೆಂಬರ್ 10: ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ ಇದೆ. ಚುನಾವಣೋತ್ತರ ಸಮೀಕ್ಷೆಗಳು ಮಧ್ಯಪ್ರದೇಶದಲ್ಲಿ 'ಅತಂತ್ರ ವಿಧಾನಸಭೆ'ಯ ಸೂಚನೆ ನೀಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು 'ಪ್ಲಾನ್-ಬಿ' ಸಿದ್ಧಪಡಿಸಿವೆ!
ಅಕಸ್ಮಾತ್ ಅತಂತ್ರ ವಿಧಾನಸಭೆಯಾದರೆ ಮುಂದೇನು? ಉಭಯ ಪಕ್ಷಗಳಲ್ಲೂ ಇರುವ ರೆಬೆಲ್ ನಾಯಕರನ್ನು ಸೆಳೆಯುವುದು ಸದ್ಯಕ್ಕೆ ಎರಡೂ ಪಕ್ಷಗಳ ಬತ್ತಳಿಕೆಯಲ್ಲಿಯೂ ಇರುವ ಪರಿಣಾಮಕಾರೀ ಬಾಣ!
ಟಿಕೆಟ್ ವಂಚಿತರಾಗಿ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿರುವ ಹಲವರು ಉಭಯ ಪಕ್ಷಗಳಲ್ಲೂ ಕಾಣಸಿಗುತ್ತಾರೆ. ಅವರೆಲ್ಲರ ಸಂಪರ್ಕ ಪಡೆಯುವ ಕೆಲಸವನ್ನು ಇದೀಗ ಉಭಯ ಪಕ್ಷಗಳ ಮುಖಂಡರೂ ಮಾಡುತ್ತಿದ್ದಾರೆ.
ಪಕ್ಷದಿಂದ ಬಂಡಾಯ ಎದ್ದಿದ್ದ ನಾಯಕರು ಮತದಾನಕ್ಕೂ ಮುನ್ನ ಪಕ್ಷದ ವಿರುದ್ಧವೇ ಪ್ರಚಾರ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಹೀಗಿರುವಾಗ ಅವರು ಮತ್ತೆ ಪಕ್ಷಕ್ಕೆ ವಾಪಸ್ಸಾಗುತ್ತಾರಾ? ಎಂಬುದು ಪ್ರಶ್ನೆ.

ಪ್ಲಾನ್ ಬಿ ರೆಡಿಯಾಗಿದೆ!
ಅತಂತ್ರ ವಿಧಾನಸಭೆ ತಲೆದೂರಿದರೆ ಮುಂದೇನು ಎಂಬ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಈಗಾಗಲೇ ಯೋಜನೆ ರೂಪಿಸಿವೆ. ಟಿಕೆಟ್ ಹಂಚಿಕೆಯ ಸಮಯದಲ್ಲಿ ಬಂಡಾಯ ಎದ್ದು ಸ್ವತಂತ್ರವಾಗಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಗಳನ್ನು ಕಾಂಗ್ರೆಸ್, ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬಿಜೆಪಿ ಸಂಪರ್ಕದಲ್ಲಿರಿಸಿಕೊಂಡಿವೆ. ಗೆಲ್ಲಬಲ್ಲ ಅಭ್ಯರ್ಥಿಗಳೊಂದಿಗೇ ಈಗಾಗಲೇ 'ಲೆಕ್ಕಾಚಾರ'ದ ಮಾತುಕತೆಗಳೂ ಆಗುತ್ತಿವೆ!

ಹೊರಹೋದವರನ್ನು ಮತ್ತೆ ಕರೆತರುವ ಯತ್ನ!
ಟಿಕೆಟ್ ಸಿಗದೆ ಬಿಜೆಪಿಯನ್ನು ತೊರೆದು ಹೊರಹೋದವರನ್ನು ಓಲೈಸಿ, ಮತ್ತೆ ಪಕ್ಷಕ್ಕೆ ವಾಪಸ್ ಕರೆತರುವ ಯತ್ನವನ್ನೂ ಬಿಜೆಪಿ ಮಾಡುತ್ತಿದೆ. ಬಿಜೆಪಿಗೆ ತಾನು 130-135(200) ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಆದರೆ ಚುನಾವಣೋತ್ತರ ಸಮೀಕ್ಷೆ ಬಿಜೆಪಿಯ ನಿದ್ದೆ ಕೆಡಿಸಿರುವುದರಿಂದ ಯಾವುದಕ್ಕೂ ಇರಲಿ ಎಂದು ಈಗಾಗಲೇ ಬದಲಿ ಯೋಜನೆಯನ್ನು ರೂಪಿಸಲಾಗಿದೆ.

116 ಬ್ಯಾಜಿಕ್ ನಂಬರ್!
230 ಕ್ಷೇತ್ರಗಳ ಮಧ್ಯಪ್ರದೇಶ ಚುನಾವಣೆಯಲ್ಲಿ ಬಹುಮತ ಗಳಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ 116. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಮಬಲದ ಹೋರಾಟ ನಡೆಸಲಿದ್ದು, ಬಹುಮತಕ್ಕೆ ಕೆಲವೇ ಸಂಖ್ಯೆಯ ಅಗತ್ಯವಿರಲಿದೆ. ಆದ್ದರಿಂದ ಬಂಡಾಯ ಅಭ್ಯರ್ಥಿಗಳು ಮತ್ತು ಪಕ್ಷೇತರರು ಈ ವೇಳೆಗೆ ದುಬಾರಿಯಾಗಲಿದ್ದಾರೆ!

ಬಿಜೆಪಿಗೆ ಅಸ್ತಿತ್ವದ ಪ್ರಶ್ನೆ!
ಕಳೆದ ಮೂರು ಅವಧಿಗೆ ಈ ರಾಜ್ಯದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ ಇದೀಗ ಆಡಳಿತ ವಿರೋಧಿ ಅಲೆಯಿದಾಗಿ ಬಿಜೆಪಿ ಸೋಲಬಹುದು ಎನ್ನಲಾಗುತ್ತಿದೆ. ಹಾಗೊಮ್ಮೆ ಆದರೆ ಇದು ಬಿಜೆಪಿಗೆ ಅಸ್ತಿತ್ವದ ಪ್ರಶ್ನೆಯಾಗಲಿದೆ. ಲೋಕಸಭಾ ಚುನಾವಣೆಯ ಮೇಲೂ ಇದು ಪರಿಣಾಮ ಬೀರಬಹುದು. ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ಮತದಾನ ನಡೆದಿದ್ದು, ಡಿ.11 ರಂದು ಫಲಿತಾಂಶ ಹೊರಬೀಳಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications