ಕಾಂಗ್ರೆಸ್ ಮತ ನೀಡಲು ಜ್ಯೋತಿರಾಧಿತ್ಯ ಸಿಂಧಿಯಾ ಕರೆ!
ಭೋಪಾಲ್, ನವೆಂಬರ್ 01 : ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ಗೆ ಮತ ನೀಡುವಂತೆ ಕರೆ ಕೊಟ್ಟಿದ್ದಾರೆ. ಉಪ ಚುನಾವಣೆ ಪ್ರಚಾರದ ವೇಳೆ ಅವರ ಮಾಡಿದ ಯಡವಟ್ಟಿನ ವಿಡಿಯೋ ವೈರಲ್ ಆಗಿದೆ.
ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ರಾಜ್ಯಸಭಾ ಸದಸ್ಯರಾಗಿರುವ ಜ್ಯೋತಿರಾಧಿತ್ಯ ಸಿಂಧಿಯಾ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.
ಚುನಾವಣಾ ಪ್ರಚಾರ ನಡೆಸುವಾಗ ಜ್ಯೋತಿರಾಧಿತ್ಯ ಸಿಂಧಿಯಾ "ಪ್ರಮಾಣ ಮಾಡಿ ನವೆಂಬರ್ 3ರಂದು ಕಾಂಗ್ರೆಸ್ ಚಿನ್ಹೆ ಇರುವ ಬಟನ್ ಒತ್ತುತ್ತೇವೆ" ಎಂದು ಕರೆ ನೀಡಿದರು. ತಕ್ಷಣ ತಮ್ಮ ತಪ್ಪು ತಿಳಿದು, 'ಕಮಲದ ಚಿನ್ಹೆ" ಎಂದರು.

ಕಾಂಗ್ರೆಸ್ನಲ್ಲಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಮಧ್ಯಪ್ರದೇಶದ ಕಲಮನಾಥ್ ಸರ್ಕಾರದಲ್ಲಿ ಸಚಿವರಾಗಿದ್ದ ಶಾಸಕರ ಜೊತೆ ಪಕ್ಷವನ್ನು ತೊರೆದಿದ್ದರು. ಇದರಿಂದಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಖ್ಯಾಬಲ ಕಳೆದುಕೊಂಡು ಪತನಗೊಂಡಿತ್ತು.
ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿ ಸೇರಿದ್ದರು ಅವರಿಗೆ ರಾಜ್ಯಸಭಾ ಟಿಕೆಟ್ ನೀಡಲಾಗಿತ್ತು. ಮಧ್ಯಪ್ರದೇಶ ವಿಧಾನಸಭೆಯಿಂದ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆಪ್ತರಲ್ಲಿ ಸಿಂಧಿಯಾ ಸಹ ಒಬ್ಬರಾಗಿದ್ದರು.
ಜ್ಯೋತಿರಾಧಿತ್ಯ ಸಿಂಧಿಯಾ ಅವರ ಜೊತೆ ಕಾಂಗ್ರೆಸ್ ಪಕ್ಷ ತೊರೆದ ಶಾಸಕರ ಕ್ಷೇತ್ರಕ್ಕೆ ಈಗ ಉಪ ಚುನಾವಣೆ ನಡೆಯುತ್ತಿದೆ. ನವೆಂಬರ್ 3ರಂದು 28 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದ್ದು, ಜ್ಯೋತಿರಾಧಿತ್ಯ ಸಿಂಧಿಯಾ ಅವರ ಪ್ರಭಾವ ಇರುವ ಕ್ಷೇತ್ರಗಳು ಇವುಗಳಲ್ಲಿ ಸೇರಿವೆ.
This guy is hilariouspic.twitter.com/QQTe7QEL1i
— Parth MN (@parthpunter) October 31, 2020
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications