ಮತ ಚಲಾಯಿಸದೆ ಮಂಗಳಾರತಿ ಮಾಡಿಸಿಕೊಂಡ ದಿಗ್ವಿಜಯ್ ಸಿಂಗ್ !
ಇಂದೋರ್, ಮೇ 13: ಭಾನುವಾರ ನಡೆದ ಆರನೇ ಹಂತದ ಚುನಾವಣೆಯಲ್ಲಿ ಮತ ಚಲಾಯಿಸದ ದಿಗ್ವಿಜಯ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಗೇಲಿ ಮಾಡಿದ್ದಾರೆ. 'ಮತದಾನ ಅತ್ಯಮೂಲ್ಯ ಕರ್ತವ್ಯ ಎನ್ನುವ ನೀವೇ ಮತಚಲಾಯಿಸದೆ ಮತದಾರರಿಗೆ ಋಣಾತ್ಮಕ ಸಂದೇಶ ನೀಡಿದ್ದೀರಾ' ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ದಿಗ್ವಿಜಯ್ ಸಿಂಗ್ ಅವರನ್ನು ಟೀಕಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಭಾನುವಾರ ನಡೆದ ಆರನೇ ಹಂತದ ಮತದಾನದಲ್ಲಿ ಮಧ್ಯಪ್ರದೇಶದ ರಾಜಘರ್ ನಿಂದ ಮತಚಲಾಯಿಸಬೇಕಿದ್ದ ಭೋಪಾಲ್ ಕ್ಷೇತ್ರದ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ಮತ ಚಲಾಯಿಸಿರಲಿಲ್ಲ.
ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಅವರು, "ನನಗೆ ಮತ ಚಲಾಯಿಸದೆ ಇರುವುದಕ್ಕೆ ತೀವ್ರ ಬೇಸರವಿದೆ. ಆದರೆ ರಾಜ್ಘರ್ ಮತಗಟ್ಟೆಗೆ ತೆರಳಲು ನನಗೆ ಸಾಧ್ಯವಾಗಿರಲಿಲ್ಲ. ಆದ್ದರಿಂದ ಮತಚಲಾಯಿಸಲು ಆಗಲಿಲ್ಲ. ಮುಂದಿನ ಬಾರಿ ನಾನು ಭೋಪಾಲ್ ಗೇ ನನ್ನ ಮತದಾನದ ಹಕ್ಕನ್ನು ವರ್ಗಾಯಿಸಿಕೊಳ್ಳುತ್ತೇನೆ" ಎಂದು ಸಿಂಗ್ ಹೇಳಿದ್ದರು.

"ಡಿಗ್ಗಿ ದಾದಾ ಬಹಳ ವಿಚಿತ್ರವಾಗಿ ವರ್ತಿಸಿದ್ದಾರೆ. ತಮ್ಮ ಮತವನ್ನು ಚಲಾಯಿಸಲಾಗದಿರುವುದಕ್ಕೆ ಅವರು ಬಹಳ ಬೇಸರಗೊಂಡಿದ್ದಾರೆ. ಮತದಾನ ನಮ್ಮ ಅತ್ಯುನ್ನತ ಕರ್ತವ್ಯ. ಹತ್ತು ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ಒಬ್ಬರಿಗೆ ಮತಚಲಾಯಿಸಬೇಕು ಎಂಬುದು ಗೊತ್ತಾಗುವುದಿಲ್ಲ ಎಂದರೆ ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಎಷ್ಟು ಗೌರವವಿದೆ ಎಂಬುದನ್ನು ನೀವೇ ಅರಿತುಕೊಳ್ಳಿ" ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
"ಇವರೆಲ್ಲ ಸಂವಿಧಾನದ ಬಗ್ಗೆ ದೊಡ್ಡ ಭಾಷಣ ಬಿಗಿತಾರೆ. ಏನೇ ಆಗಲಿ ಸೋಲೋದು ಗ್ಯಾರಂಟಿ, ದಿಗ್ವಿಜಯ ಹೆಸರಿಗಷ್ಟೇ ಸೀಮಿತ" ಎಂದು ಕರ್ನಾಟಕ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಸಹ ಟ್ವೀಟ್ ಮಾಡಿದ್ದಾರೆ.
ಇವರೆಲ್ಲ ಸಂವಿಧಾನದ ಬಗ್ಗೆ ದೊಡ್ಡ ಭಾಷಣ ಬಿಗಿತಾರೆ. ಏನೇ ಆಗಲಿ ಸೋಲೋದು ಗ್ಯಾರಂಟಿ, ದಿಗ್ವಿಜಯ ಹೆಸರಿಗಷ್ಟೇ ಸೀಮಿತ. https://t.co/n5l5G1pW5A
— Chowkidar K S Eshwarappa (@ikseshwarappa) May 12, 2019
ದಿಗ್ವಿಜಯ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷವು ಬಿಜೆಪಿಯ ಸಾಧ್ವಿ ಪ್ರಜ್ಞಾ ಠಾಕುರ್ ಅವರ ವಿರುದ್ಧ ಭೋಪಾಲ್ ನಿಂದ ಲೋಕಸಭೆ ಗೆ ಕಣಕ್ಕಿಳಿಸಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications