ಮತ ಚಲಾಯಿಸದೆ ಮಂಗಳಾರತಿ ಮಾಡಿಸಿಕೊಂಡ ದಿಗ್ವಿಜಯ್ ಸಿಂಗ್ !
ಇಂದೋರ್, ಮೇ 13: ಭಾನುವಾರ ನಡೆದ ಆರನೇ ಹಂತದ ಚುನಾವಣೆಯಲ್ಲಿ ಮತ ಚಲಾಯಿಸದ ದಿಗ್ವಿಜಯ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಗೇಲಿ ಮಾಡಿದ್ದಾರೆ. 'ಮತದಾನ ಅತ್ಯಮೂಲ್ಯ ಕರ್ತವ್ಯ ಎನ್ನುವ ನೀವೇ ಮತಚಲಾಯಿಸದೆ ಮತದಾರರಿಗೆ ಋಣಾತ್ಮಕ ಸಂದೇಶ ನೀಡಿದ್ದೀರಾ' ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ದಿಗ್ವಿಜಯ್ ಸಿಂಗ್ ಅವರನ್ನು ಟೀಕಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಭಾನುವಾರ ನಡೆದ ಆರನೇ ಹಂತದ ಮತದಾನದಲ್ಲಿ ಮಧ್ಯಪ್ರದೇಶದ ರಾಜಘರ್ ನಿಂದ ಮತಚಲಾಯಿಸಬೇಕಿದ್ದ ಭೋಪಾಲ್ ಕ್ಷೇತ್ರದ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ಮತ ಚಲಾಯಿಸಿರಲಿಲ್ಲ.
ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ಅವರು, "ನನಗೆ ಮತ ಚಲಾಯಿಸದೆ ಇರುವುದಕ್ಕೆ ತೀವ್ರ ಬೇಸರವಿದೆ. ಆದರೆ ರಾಜ್ಘರ್ ಮತಗಟ್ಟೆಗೆ ತೆರಳಲು ನನಗೆ ಸಾಧ್ಯವಾಗಿರಲಿಲ್ಲ. ಆದ್ದರಿಂದ ಮತಚಲಾಯಿಸಲು ಆಗಲಿಲ್ಲ. ಮುಂದಿನ ಬಾರಿ ನಾನು ಭೋಪಾಲ್ ಗೇ ನನ್ನ ಮತದಾನದ ಹಕ್ಕನ್ನು ವರ್ಗಾಯಿಸಿಕೊಳ್ಳುತ್ತೇನೆ" ಎಂದು ಸಿಂಗ್ ಹೇಳಿದ್ದರು.

"ಡಿಗ್ಗಿ ದಾದಾ ಬಹಳ ವಿಚಿತ್ರವಾಗಿ ವರ್ತಿಸಿದ್ದಾರೆ. ತಮ್ಮ ಮತವನ್ನು ಚಲಾಯಿಸಲಾಗದಿರುವುದಕ್ಕೆ ಅವರು ಬಹಳ ಬೇಸರಗೊಂಡಿದ್ದಾರೆ. ಮತದಾನ ನಮ್ಮ ಅತ್ಯುನ್ನತ ಕರ್ತವ್ಯ. ಹತ್ತು ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ಒಬ್ಬರಿಗೆ ಮತಚಲಾಯಿಸಬೇಕು ಎಂಬುದು ಗೊತ್ತಾಗುವುದಿಲ್ಲ ಎಂದರೆ ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಎಷ್ಟು ಗೌರವವಿದೆ ಎಂಬುದನ್ನು ನೀವೇ ಅರಿತುಕೊಳ್ಳಿ" ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
"ಇವರೆಲ್ಲ ಸಂವಿಧಾನದ ಬಗ್ಗೆ ದೊಡ್ಡ ಭಾಷಣ ಬಿಗಿತಾರೆ. ಏನೇ ಆಗಲಿ ಸೋಲೋದು ಗ್ಯಾರಂಟಿ, ದಿಗ್ವಿಜಯ ಹೆಸರಿಗಷ್ಟೇ ಸೀಮಿತ" ಎಂದು ಕರ್ನಾಟಕ ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಸಹ ಟ್ವೀಟ್ ಮಾಡಿದ್ದಾರೆ.
ಇವರೆಲ್ಲ ಸಂವಿಧಾನದ ಬಗ್ಗೆ ದೊಡ್ಡ ಭಾಷಣ ಬಿಗಿತಾರೆ. ಏನೇ ಆಗಲಿ ಸೋಲೋದು ಗ್ಯಾರಂಟಿ, ದಿಗ್ವಿಜಯ ಹೆಸರಿಗಷ್ಟೇ ಸೀಮಿತ. https://t.co/n5l5G1pW5A
— Chowkidar K S Eshwarappa (@ikseshwarappa) May 12, 2019
ದಿಗ್ವಿಜಯ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷವು ಬಿಜೆಪಿಯ ಸಾಧ್ವಿ ಪ್ರಜ್ಞಾ ಠಾಕುರ್ ಅವರ ವಿರುದ್ಧ ಭೋಪಾಲ್ ನಿಂದ ಲೋಕಸಭೆ ಗೆ ಕಣಕ್ಕಿಳಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications