ದಿಗ್ವಿಜಯ್ ವಿರುದ್ಧ ಪ್ರಜ್ಞಾ ಸಿಂಗ್ ಕಣಕ್ಕೆ, ಭೋಪಾಲ್ ನಲ್ಲಿ ಕದನ ಕುತೂಹಲ
ನವದೆಹಲಿ, ಏಪ್ರಿಲ್ 17: ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಬಿಜೆಪಿ ಅಧಿಕೃತವಾಗಿ ಘೋಷಿಸಿದೆ.
2008 ರ ಮಾಲೇಗಾಂವ್ ಸ್ಫೋಟದ ಆರೋಪಿಯಾಗಿ ಬಂಧನಕ್ಕೊಳಗಾಗಿದ್ದ ಸಾಧ್ವಿ ಅವರನ್ನು ಇತ್ತೀಚೆಗಷ್ಟೇ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ ಆರೋಪ ಮುಕ್ತಗೊಳಿಸಿತ್ತು. ಬುಧವಾರ ಬೆಳಗ್ಗೆಯಷ್ಟೇ ಅಧಿಕೃತವಾಗಿ ಬಿಜೆಪಿ ಸೇರಿದ ಪ್ರಜ್ಞಾ ಸಿಂಗ್ ಅವರು, ದಿಗ್ವಿಜಯ್ ಸಿಂಗ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಎದುರಿಸಲಿದ್ದಾರೆ.
ಮಂಗಳವಾರವಷ್ಟೇ, ತಾನು ದಿಗ್ವಿಜಯ್ ಸಿಂಗ್ ಅವರನ್ನು ಎದುರಿಸಲು ಸಿದ್ಧ ಎಂದು ಸಾಧ್ವಿ ಹೇಳಿದ್ದರು. ನಂತರ ಬಿಜೆಪಿ ಸೇರಿ ಅಭ್ಯರ್ಥಿಯಾದರು. "ನಾನು 16 ವರ್ಷ ವಯಸ್ಸಿನವಳಾದಾಗಿನಿಂದಲೂ ಭೋಪಾಲಿನಲ್ಲೇ ವಾಸವಿದ್ದೇನೆ. ಭೋಪಾಲ್ ಎಂದರೆ ನನಗೆ ಇಷ್ಟ. ಈ ಭಾಗದ ಜನರ ಸೇವೆ ಮಾಡುವ ಆಸೆ ನನಗೆ. ಅದಕ್ಕೆಂದೇ ಚುನಾವಣೆಗೆ ನಿಲ್ಲಲು ನಿರ್ಧರಿಸಿದ್ದೇನೆ" ಎಂದು ಸಾಧ್ವಿ ಹೇಳಿದ್ದಾರೆ. ಈ ಕ್ಷೇತ್ರದಲ್ಲಿ 1989 ರಿಂದಲೂ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ! 2014 ರಲ್ಲೂ ಬಿಜೆಪಿಯ ಅಲೋಕ್ ಸಂಜರ್ ಎಂಬುವವರು ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಈ ಕ್ಷೇತ್ರದಿಂದ ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ರಂಥ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದರಿಂದ ಬಿಜೆಪಿ ಸಾಧ್ವಿ ಅವರನ್ನು ಕಣಕ್ಕಿಳಿಸಿದೆ. ಅವರಿಗೆ ಎಬಿವಿಪಿ ಮೂಲಕ ಸಮಾಜದ ಎಲ್ಲಾ ಸ್ತರದ ಜನರ ಪರಿಚಯ, ಸಂಪರ್ಕವೂ ಇರುವುದರಿಂದ ಆಕೆ ಗೆಲ್ಲಬಹುದು ಎಂಬುದು ಲೆಕ್ಕಾಚಾರ. ಅದೂ ಆಲ್ಲದೆ ಅವರಿಗೆ ಎನ್ ಐಎ ಕ್ಲೀನ್ ಚಿಟ್ ನೀಡಿರುವುದರಿಂದ ಮತ್ತುಜೈಲಿನಿಂದ ಹೊರಬಂದಿರುವುದರಿಂದ ಅನುಕಂಪದ ಅಲೆಯೂ ಕೆಲಸ ಮಾಡಬಹುದು ಎಂದು ಬಿಜೆಪಿ ಅವರನ್ನು ಕಣಕ್ಕಿಳಿಸಿದೆ.

ಮಧ್ಯಪ್ರದೇಶದಲ್ಲಿ ಒಟ್ಟು ಏಪ್ರಿಲ್ 29 ರಿಂದ ಮೇ 19 ರವರೆಗೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಹೂರಬೀಳಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications