ಮಧ್ಯಪ್ರದೇಶದಲ್ಲಿ ಕಮಲ ಮುದುಡಿದರೇನಂತೆ, ಇನ್ನೊಂದು ಕಮಲ ಅರಳಿತಲ್ಲವೇ!
ಬಹುಷ: ಮಧ್ಯಪ್ರದೇಶದ ಚುನಾವಣೆಯನ್ನು ಗೆಲ್ಲಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಷ್ಟು ಕಷ್ಟ ಪಟ್ಟಿದ್ದರೋ, ಅಷ್ಟೇ ಕಷ್ಟವನ್ನು ಮುಖ್ಯಮಂತ್ರಿಯನ್ನಾಗಿ ಯಾರನ್ನು ಫೈನಲ್ ಮಾಡಬೇಕು ಎನ್ನುವುದಕ್ಕೆ ಪಟ್ಟಿರಬಹುದೋ ಏನೋ?
ಮಧ್ಯಪ್ರದೇಶವಾಗಲಿ, ರಾಜಸ್ಥಾನವಾಗಲಿ ಮುಖ್ಯಮಂತ್ರಿ ರೇಸ್ ನಲ್ಲಿದ್ದ ಎಲ್ಲಾ ನಾಲ್ವರು ಗಾಂಧಿ ಕುಟುಂಬದ ನಿಷ್ಟರು ಮತ್ತು ಆಪ್ತರು. ಆದರೆ, ರಾಹುಲ್ ಗಾಂಧಿ ಆಯ್ಕೆ ಒಂದು ಸೋನಿಯಾ ಗಾಂಧಿ ಆಯ್ಕೆ ಇನ್ನೊಂದು ಆಗಿರುವದರಿಂದಲೇ, ಕಮಲ್ ನಾಥ್ ಸಿಎಂ ಘೋಷಣೆ ತಡವಾಗಿದ್ದು ಎನ್ನುವ ಮಾಹಿತಿಯಿದೆ.
ಒಲಿದು ಬಂದ ಉಪಮುಖ್ಯಮಂತ್ರಿ ಹುದ್ದೆಗೆ ಒಲ್ಲೆ ಎಂದ ಮಾಧವರಾವ್ ಸಿಂದಿಯಾ ಪುತ್ರ ಜ್ಯೋತಿರಾದಿತ್ಯ, 'ಇದು ರೇಸ್ ಅಲ್ಲ, ಇದು ಕುರ್ಚಿಗಾಗಿ ನಡೆಯುವ ಕುಸ್ತಿಯೂ ಅಲ್ಲ, ನಾವಿಲ್ಲಿ ಇರುವುದು ಮಧ್ಯಪ್ರದೇಶದ ಜನರ ಸೇವೆಗಾಗಿ' ಎಂದು ರಾಹುಲ್ ಭೇಟಿಯ ನಂತರ, ಮಾಧ್ಯಮದವರ ಮುಂದೆ ಹೇಳಿಕೆಯನ್ನು ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಅವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ, ಒಂದು ಕಮಲ (ಬಿಜೆಪಿ ಚಿಹ್ನೆ) ಹೋದರೇನಂತೆ, ಇನ್ನೊಂದು ಕಮಲ (ಕಮಲ್ ನಾಥ್) ಬಂತಲ್ಲವೇ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಚಾಲ್ತಿಯಲ್ಲಿದೆ.
ಮಧ್ಯಪ್ರದೇಶದಲ್ಲಿ ಮೂರು ಅವಧಿಯಲ್ಲಿದ್ದ ಬಿಜೆಪಿ ಆಡಳಿತ, ಕಾಂಗ್ರೆಸ್ ಪ್ರಯಾಸದ ಗೆಲುವು ಕಾಣುವ ಮೂಲಕ ಮುಕ್ತಾಯಗೊಂಡಿತ್ತು. ಈ ಚುನಾವಣೆಯ ಫಲಿತಾಂಶವನ್ನು ಅಲ್ಲಿನ ಮತದಾರರು, ' ಏಕ್ ಕಮಲ್ ಗಯಾ, ದೂಸ್ರಾ ಕಮಲ್ ಆಗಯಾ' ಎಂದು ವಿಶ್ಲೇಷಿಸುತ್ತಿದ್ದಾರೆ.
ಒಂಬತ್ತು ಬಾರಿ ಸಂಸದರಾಗಿರುವ ಕಮಲ್ ನಾಥ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಿದಾಗ, ಇಂದಿರಾ ಗಾಂಧಿಯ ಮೂರನೇ ಮಗ ಕಮಲ್ ನಾಥ್ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಿಂದಿನ ನೆನಪನ್ನು ಮೆಲುಕು ಹಾಕಿಕೊಂಡಿದ್ದಾರೆ. ಖುದ್ದು, ಇಂದಿರಾ ಗಾಂಧಿಯೇ, ಕಮಲ್ ನಾಥ್ ನನ್ನ ಮೂರನೇ ಮಗ ಎಂದು ಹೇಳಿದ್ದರಂತೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications