ಕೊವಿಡ್ 19 ನಿಯಮ ಉಲ್ಲಂಘನೆ: ಮಾಜಿ ಸಿಎಂ ವಿರುದ್ಧವೇ ಎಫ್ಐಆರ್
ಭೋಪಾಲ್, ಅ.7: ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ 8 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ಹಾಕಿದ್ದಾರೆ. ಕೊರೊನಾವೈರಸ್ ನಿಯಮ ಉಲ್ಲಂಘಿಸಿ ಸಾರ್ವಜನಿಕ ಸಭೆ ನಡೆಸಿದ ಆರೋಪದ ಮೇಲೆ ಕ್ರಮ ಜರುಗಿಸಲಾಗಿದೆ.
ಕೊವಿಡ್ 19 ನಿಯಮ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆ ಹಾಗೂ ಸಾಂಕ್ರಾಮಿಕ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಎಫ್ಐಆರ್ ಹಾಕಲಾಗಿದೆ. ದಾಟಿಯಾಜಿಲ್ಲೆಯ ಭಂಡಾರ್ ಪೊಲೀಸ್ ಠಾಣೆಯಲ್ಲಿ ಮಂಗಳವಾರದಂದು ಎಫ್ಐಆರ್ ಹಾಕಲಾಗಿದೆ.
ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅರವಿಂದ್ ಮಹೋರ್ ಅವರು ನೀಡಿದ ಲಿಖಿತ ದೂರಿನ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಕ್ಟೋಬರ್ 5ರಂದು ಭಂಡಾರ್ ಪ್ರದೇಶದ ಮಂಡಿ ಎಂಬಲ್ಲಿ ಸಾರ್ವಜನಿಕ ಸಭೆ ನಡೆಸಲು ಅನುಮತಿ ಕೋರಲಾಗಿತ್ತು. 100 ಜನಕ್ಕೂ ಅಧಿಕ ಮಂದಿ ಸೇರದಂತೆ ನೋಡಿಕೊಳ್ಳಲು ಜಿಲ್ಲಾ ಕಾಂಗ್ರೆಸ್ ಮುಖ್ಯಸ್ಥ ನಹರ್ ಸಿಂಗ್ ಅವರಿಗೆ ಸೂಚಿಸಲಾಗಿತ್ತು. ಆದರೆ, ನಿಯಮ ಉಲ್ಲಂಘಿಸಲಾಗಿದೆ, ಉಪ ಚುನಾವಣೆ ಕುರಿತಂತೆ ನಡೆದ ಸಭೆಯ ವಿಡಿಯೋ ದೃಶ್ಯಗಳನ್ನು ಆಧಾರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
100 ಜನಕ್ಕೆ ಅನುಮತಿ ನೀಡಿದರೆ 2,000 ರಿಂದ 2,500 ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದು ದೃಢಪಟ್ಟಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಸಿ ಆರ್ ಪಿಸಿ ಸೆಕ್ಷನ್ 144, ಕೊವಿಡ್ 19 ನಿಯಮ ಉಲ್ಲಂಘನೆ ಆರೋಪ ಹೊರೆಸಲಾಗಿದೆ.
ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳೀಗೆ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 03ರಂದು ಮತದಾನ ಹಾಗೂ ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ. 24 ಕಾಂಗ್ರೆಸ್ ಶಾಸಕರ ರಾಜೀನಾಮೆ, ಇಬ್ಬರು ಶಾಸಕರ ನಿಧನದಿಂದ ತೆರವಾದ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications