ಮಧ್ಯಪ್ರದೇಶದಲ್ಲಿ 'ಗೋವು ಸಚಿವಾಲಯ' ಅಸ್ತಿತ್ವಕ್ಕೆ: ಮುಖ್ಯಮಂತ್ರಿ ಘೋಷಣೆ
ಭೋಪಾಲ್, ನವೆಂಬರ್ 18: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ 'ಗೋವು ಸಚಿವಾಲಯ' ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಪ್ರಕಟಿಸಿದ್ದಾರೆ.
ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ, ಗ್ರಾಮೀಣ ಅಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಈ ಗೋವು ಸಚಿವಾಲಯದ ಭಾಗವಾಗಿರಲಿವೆ ಎಂದು ಚೌಹಾಣ್ ತಿಳಿಸಿದ್ದಾರೆ.
'ರಾಜ್ಯದಲ್ಲಿ ಗೋವುಗಳ ಸಂರಕ್ಷಣೆ ಮತ್ತು ಉತ್ತೇಜನಕ್ಕಾಗಿ ನಾವು ಗೋವು ಸಚಿವಾಲಯ ಸ್ಥಾಪನೆಗೆ ನಿರ್ಧರಿಸಿದ್ದೇವೆ. ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ ಮತ್ತು ಗ್ರಾಮೀಣ ಅಭಿವೃದ್ಧಿ, ಕಂದಾಯ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಈ ಗೋವು ಸಚಿವಾಲಯದ ಭಾಗವಾಗಿರಲಿವೆ' ಎಂದು ಚೌಹಾಣ್ ವಿವರಿಸಿದ್ದಾರೆ.

'ಈ ಸಚಿವಾಲಯದ ಮೊದಲ ಸಭೆಯು ನವೆಂಬರ್ 22ರಂದು ಅಗರ್ ಮಾಲ್ವಾದ ಗೋ ಸಂರಕ್ಷಣಾಲಯದ ಗೋಪಾಷ್ಟಮಿಯಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ' ಎಂದು ತಿಳಿಸಿದ್ದಾರೆ. ಗೋವು ಸಚಿವಾಲಯದ ಅಧಿಕಾರಗಳು ಮತ್ತು ಜವಾಬ್ದಾರಿಗಳ ಬಗ್ಗೆ ಮಧ್ಯಪ್ರದೇಶ ಸರ್ಕಾರ ಇನ್ನೂ ಹೆಚ್ಚಿನ ವಿವರಣೆ ನೀಡಿಲ್ಲ.
ರಾಜ್ಯ ಸರ್ಕಾರವು ಲವ್ ಜಿಹಾದ್ ವಿರುದ್ಧ ಸೂಕ್ತ ಕಾನೂನು ರೂಪಿಸಲಿದೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಹೇಳಿಕೆ ನೀಡಿದ್ದ ಮರು ದಿನವೇ ಗೋವ ಸಚಿವಾಲಯದ ಘೋಷಣೆ ಮಾಡಲಾಗಿದೆ. ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳಲ್ಲಿ ಜಾಮೀನು ರಹಿತ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಕಂಡುಬಂದರೆ ಐದು ವರ್ಷಗಳವರೆಗೆ ಜೈಲಿಗೆ ಹಾಕಬಹುದು ಎಂದು ತಿಳಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications