ರಾಹುಲ್ ಗಾಂಧಿ ಹತಾಶ ರಾಜಕಾರಣಿ: ಶಿವರಾಜ್ ಸಿಂಗ್ ಚೌವ್ಹಾಣ್
ಭೋಪಾಲ್, ಮೇ 22: ಲಂಡನ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ನೀಡಿದ್ದ ಹೇಳಿಕೆ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಆಕ್ಷೇಪ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭೋಪಾಲ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಾಹುಲ್ ಗಾಂಧಿ ದೇಶದ ವಿಫಲ, ನಿರಾಶೆಗೊಂಡ ಮತ್ತು ಹತಾಶ ರಾಜಕಾರಣಿ. ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿ ದೇಶದ ವಿರುದ್ಧ ಮಾತನಾಡಿದ್ದಾರೆ, ಇನ್ಯಾವುದೇ ರಾಜಕಾರಣಿಗಳು ಈ ಕೆಲಸ ಮಾಡುವುದಿಲ್ಲ" ಎಂದರು.
"ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ನಾನು ಅಮೆರಿಕಾ ಪ್ರವಾಸದಲ್ಲಿದ್ದೆ. ಅಲ್ಲಿನ ಪತ್ರಕರ್ತರು ನನ್ನನ್ನು ಭಾರತದ ಪ್ರಧಾನಿ ಕಡಿಮೆ ಸಾಧಕರೇ ಎಂದು ಪ್ರಶ್ನೆ ಮಾಡಿದರು, ಅವರು ಕಾಂಗ್ರೆಸ್ನ ಪ್ರಧಾನಿ ಅಲ್ಲ ಭಾರತದ ಪ್ರಧಾನಿ ಎಂದು ಹೇಳಿದ್ದೆ, ಭಾರತದ ಪ್ರಧಾನಿ ಆಗುವುದು ಕಡಿಮೆ ಸಾಧನೆಯಲ್ಲ ಎಂದಿದ್ದೆ" ಎಂದು ಹೇಳಿದರು.

"ವಿದೇಶದಲ್ಲಿದ್ದಾಗ ನಾವು ಭಾರತವನ್ನು ಟೀಕಿಸಲೇ ಇಲ್ಲ" ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಹೇಳಿಕೆ ಏನು?; ಲಂಡನ್ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ನಡೆದ 'ಐಡಿಯಾಸ್ ಫಾರ್ ಇಂಡಿಯಾ' ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಮಾತನಾಡಿದ್ದರು. ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, "ದೇಶವು ಪರಿಸ್ಥಿತಿ ಉತ್ತಮವಾಗಿಲ್ಲ, ಬಿಜೆಪಿ ದ್ವೇಷವನ್ನು ಹರಡುತ್ತಿದೆ, ಬಿಜೆಪಿ ದೇಶದಾದ್ಯಂತ ದ್ವೇಷವೆಂಬ ಸೀಮೆ ಎಣ್ಣೆ ಎರಚಿದೆ, ಒಂದೇ ಒಂದು ಕಿಡಿ ಹಚ್ಚಿದರೆ ಸಾಕು, ದೇಶವೇ ಹೊತ್ತಿ ಉರಿಯುತ್ತದೆ" ಎಂದು ಹೇಳಿದ್ದರು.
"ಜನರು, ಸಮುದಾಯಗಳು, ರಾಜ್ಯಗಳು ಮತ್ತು ಧರ್ಮಗಳನ್ನು ಒಗ್ಗೂಡಿಸುವುದು ವಿರೋಧ ಪಕ್ಷ ಕಾಂಗ್ರೆಸ್ನ ಜವಾಬ್ದಾರಿಯಾಗಿದೆ ಎಂದು ಭಾವಿಸುತ್ತೇನೆ. ಭಾರತದ ವಿದೇಶಾಂಗ ನೀತಿಯೂ ಸಂಪೂರ್ಣವಾಗಿ ಬದಲಾಗಿದೆ. ಅಲ್ಲಿನ ಅಧಿಕಾರಿಗಳು ಯಾರ ಮಾತನ್ನು ಕೇಳುವುದಿಲ್ಲ, ಅಹಂಕಾರದಿಂದ ನಡೆದುಕೊಳ್ಳುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಯಾರ ಮಾತನ್ನೂ ಕೇಳಿಸಿಕೊಳ್ಳುವುದಿಲ್ಲ, ಅವರು ಮೊದಲು ಎಲ್ಲರ ಮಾತು ಕೇಳುವ ಮನೋಭಾವ ಬೆಳೆಸಿಕೊಳ್ಳಬೇಕು" ಎಂದು ತಿಳಿಸಿದ್ದರು.
"ಭಾರತೀಯ ವಿದೇಶಾಂಗ ಸೇವೆ ಸಂಪೂರ್ಣ ಬದಲಾಗಿದೆ. ಅವರು ದುರಹಂಕಾರಿಗಳು ಎಂದಿದ್ದ ರಾಹುಲ್ ಗಾಂಧಿ ಹೇಳಿಕೆಗೆ ವಿದೇಶಾಂಗ ಸಚಿವ ಜೈ ಶಂಕರ್ ಸಹ ತಿರುಗೇಟು ನೀಡಿದ್ದರು. "ಹೌದು ಭಾರತೀಯ ವಿದೇಶಾಂಗ ಸೇವೆ ಬದಲಾಗಿದೆ. ಅವರು ಸರ್ಕಾರದ ಆದೇಶಗಳನ್ನು ಮಾತ್ರ ಅನುಸರಿಸುತ್ತಾರೆ. ಹೌದು, ಅವರು ಇತರರ ವಾದಗಳನ್ನು ವಿರೋಧಿಸುತ್ತಾರೆ. ಅದನ್ನು ದುರಹಂಕಾರ ಎಂದು ಕರೆಯಲಾಗದು. ಅದನ್ನು ವಿಶ್ವಾಸ ಎಂದು ಕರೆಯಲಾಗುತ್ತದೆ ಮತ್ತು ಅದನ್ನು ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವುದು ಎನ್ನಲಾಗುತ್ತದೆ " ಎಂದು ತಿರುಗೇಟು ನೀಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications