ಶ್ರೀಲಂಕಾದಲ್ಲಿ ಸೀತಾ ಮಂದಿರ ನಿರ್ಮಿಸುತ್ತೆ ಮಧ್ಯಪ್ರದೇಶ ಸರ್ಕಾರ!
ಭೂಪಾಲ್, ಜನವರಿ.27: ಶ್ರೀಲಂಕಾದಲ್ಲಿ ಸೀತೆಯ ಭವ್ಯ ಮಂದಿರ ನಿರ್ಮಾಣ ಮಾಡುವುದಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಘೋಷಿಸಿದೆ. ಸೀತೆ ಬೆಂಕಿಗೆ ಹಾರಿದಳು ಎಂದೇ ನಂಬಲಾದ ಪ್ರದೇಶದಲ್ಲೇ ದೇವಸ್ಥಾನ ನಿರ್ಮಾಣಕ್ಕೆ ಸೋಮವಾರ ಮುಖ್ಯಮಂತ್ರಿ ಕಮಲ್ ನಾಥ್ ಸರ್ಕಾರ ತೀರ್ಮಾನಿಸಿದೆ.
ದಶಕಗಳ ಹಿಂದೆಯೇ ಶ್ರೀಲಂಕಾದಲ್ಲಿ ಸೀತಾ ದೇವಸ್ಥಾನ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಈ ಯೋಜನೆಯನ್ನು ಸರ್ಕಾರವು ಕೈಗೆತ್ತಿಕೊಂಡಿರಲಿಲ್ಲ.
ಇತ್ತೀಚಿಗಷ್ಟೇ ಕಾನೂನು ಮತ್ತು ಧಾರ್ಮಿಕ ವ್ಯವಹಾರಗಳ ಸಚಿವ ಪಿ ಸಿ ಶರ್ಮಾ ಶ್ರೀಲಂಕಾಗೆ ಭೇಟಿ ನೀಡಿ, ಶ್ರೀಲಂಕಾ ಅಧ್ಯಕ್ಷ ಗೋತಬಯಾ ರಾಜಪಕ್ಸೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಸೋಮವಾರ ಸಿಎಂ ಕಮಲ್ ನಾಥ್ ದೇವಸ್ಥಾನ ನಿರ್ಮಾಣದ ಪ್ರಸ್ತಾವನೆಯನ್ನು ಅಂಗೀಕರಿಸಿದ್ದಾರೆ.

ಸೀತಾ ದೇವಸ್ಥಾನ ನಿರ್ಮಾಣಕ್ಕೆ ಸಮಿತಿ ರಚನೆ:
ಇನ್ನು, ಶ್ರೀಲಂಕಾದ ಬುದ್ಧ ವಿಹಾರ ದಿವುಕುಂಪೋಲಾ ಪ್ರದೇಶದಲ್ಲಿ ಸೀತಾ ದೇವಸ್ಥಾನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಅದಕ್ಕಾಗಿ ಶ್ರೀಲಂಕಾ ಮತ್ತು ಮಧ್ಯಪ್ರದೇಶದ ಸದಸ್ಯರನ್ನೊಳಗೊಂಡ ಸಮಿತಿ ರಚನೆ ಮಾಡಲಾಗುತ್ತದೆ. ನಿಗದಿತ ಅವಧಿಯಲ್ಲೇ ದೇವಸ್ಥಾನ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸರ್ಕಾರವು ಈ ದೇವಸ್ಥಾನ ನಿರ್ಮಾಣಕ್ಕಾಗಿ ಹಣವನ್ನು ನೀಡುತ್ತದೆ ಎಂದು ಮುಖ್ಯಮಂತ್ರಿ ಕಮಲ್ ನಾಥ್ ತಿಳಿಸಿದ್ದಾರೆ.
ಸೀತೆಯ ಬಂಗಾರವನ್ನು ಹೂತಿಟ್ಟ ಜಾಗದಲ್ಲೇ ದೇವಸ್ಥಾನ:
ಈ ಹಿಂದೆ ಸೀತೆಯು ದಿವುಕುಂಪೋಲಾ ಪ್ರದೇಶದ ಬುದ್ಧ ವಿಹಾರದ ಬಳಿಯೇ ತನ್ನ ಒಡವೆಗಳನ್ನೆಲ್ಲ ಹೂತಿಟ್ಟಿದ್ದಳು ಎಂದು ಸ್ಥಳೀಯರ ನಂಬಿಕೆಯಾಗಿದೆ. ಅದೇ ಪ್ರದೇಶದಲ್ಲಿ ಇದೀಗ ದೇವಸ್ಥಾನ ನಿರ್ಮಾಣ ಮಾಡಲು ಮಧ್ಯಪ್ರದೇಶ ಸರ್ಕಾರವು ಮುಂದಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications