ಶ್ರೀಲಂಕಾದಲ್ಲಿ ಸೀತಾ ಮಂದಿರ ನಿರ್ಮಿಸುತ್ತೆ ಮಧ್ಯಪ್ರದೇಶ ಸರ್ಕಾರ!
ಭೂಪಾಲ್, ಜನವರಿ.27: ಶ್ರೀಲಂಕಾದಲ್ಲಿ ಸೀತೆಯ ಭವ್ಯ ಮಂದಿರ ನಿರ್ಮಾಣ ಮಾಡುವುದಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಘೋಷಿಸಿದೆ. ಸೀತೆ ಬೆಂಕಿಗೆ ಹಾರಿದಳು ಎಂದೇ ನಂಬಲಾದ ಪ್ರದೇಶದಲ್ಲೇ ದೇವಸ್ಥಾನ ನಿರ್ಮಾಣಕ್ಕೆ ಸೋಮವಾರ ಮುಖ್ಯಮಂತ್ರಿ ಕಮಲ್ ನಾಥ್ ಸರ್ಕಾರ ತೀರ್ಮಾನಿಸಿದೆ.
ದಶಕಗಳ ಹಿಂದೆಯೇ ಶ್ರೀಲಂಕಾದಲ್ಲಿ ಸೀತಾ ದೇವಸ್ಥಾನ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಈ ಯೋಜನೆಯನ್ನು ಸರ್ಕಾರವು ಕೈಗೆತ್ತಿಕೊಂಡಿರಲಿಲ್ಲ.
ಇತ್ತೀಚಿಗಷ್ಟೇ ಕಾನೂನು ಮತ್ತು ಧಾರ್ಮಿಕ ವ್ಯವಹಾರಗಳ ಸಚಿವ ಪಿ ಸಿ ಶರ್ಮಾ ಶ್ರೀಲಂಕಾಗೆ ಭೇಟಿ ನೀಡಿ, ಶ್ರೀಲಂಕಾ ಅಧ್ಯಕ್ಷ ಗೋತಬಯಾ ರಾಜಪಕ್ಸೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಸೋಮವಾರ ಸಿಎಂ ಕಮಲ್ ನಾಥ್ ದೇವಸ್ಥಾನ ನಿರ್ಮಾಣದ ಪ್ರಸ್ತಾವನೆಯನ್ನು ಅಂಗೀಕರಿಸಿದ್ದಾರೆ.

ಸೀತಾ ದೇವಸ್ಥಾನ ನಿರ್ಮಾಣಕ್ಕೆ ಸಮಿತಿ ರಚನೆ:
ಇನ್ನು, ಶ್ರೀಲಂಕಾದ ಬುದ್ಧ ವಿಹಾರ ದಿವುಕುಂಪೋಲಾ ಪ್ರದೇಶದಲ್ಲಿ ಸೀತಾ ದೇವಸ್ಥಾನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಅದಕ್ಕಾಗಿ ಶ್ರೀಲಂಕಾ ಮತ್ತು ಮಧ್ಯಪ್ರದೇಶದ ಸದಸ್ಯರನ್ನೊಳಗೊಂಡ ಸಮಿತಿ ರಚನೆ ಮಾಡಲಾಗುತ್ತದೆ. ನಿಗದಿತ ಅವಧಿಯಲ್ಲೇ ದೇವಸ್ಥಾನ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸರ್ಕಾರವು ಈ ದೇವಸ್ಥಾನ ನಿರ್ಮಾಣಕ್ಕಾಗಿ ಹಣವನ್ನು ನೀಡುತ್ತದೆ ಎಂದು ಮುಖ್ಯಮಂತ್ರಿ ಕಮಲ್ ನಾಥ್ ತಿಳಿಸಿದ್ದಾರೆ.
ಸೀತೆಯ ಬಂಗಾರವನ್ನು ಹೂತಿಟ್ಟ ಜಾಗದಲ್ಲೇ ದೇವಸ್ಥಾನ:
ಈ ಹಿಂದೆ ಸೀತೆಯು ದಿವುಕುಂಪೋಲಾ ಪ್ರದೇಶದ ಬುದ್ಧ ವಿಹಾರದ ಬಳಿಯೇ ತನ್ನ ಒಡವೆಗಳನ್ನೆಲ್ಲ ಹೂತಿಟ್ಟಿದ್ದಳು ಎಂದು ಸ್ಥಳೀಯರ ನಂಬಿಕೆಯಾಗಿದೆ. ಅದೇ ಪ್ರದೇಶದಲ್ಲಿ ಇದೀಗ ದೇವಸ್ಥಾನ ನಿರ್ಮಾಣ ಮಾಡಲು ಮಧ್ಯಪ್ರದೇಶ ಸರ್ಕಾರವು ಮುಂದಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications