ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಮಾ.16 ವಿಶ್ವಾಸಮತಯಾಚನೆಗೆ ಒತ್ತಾಯ
ಭೂಪಾಲ್, ಮಾರ್ಚ್.12: ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದಿನಗಣನೆ ಶುರುವಾದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಮಾರ್ಚ್.16ರಂದು ವಿಶ್ವಾಸ ಮತಯಾಚನೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.
ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷವನ್ನು ತೊರೆಯುತ್ತಿದ್ದಂತೆ ಮಧ್ಯಪ್ರದೇಶ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಸಿಂಧಿಯಾ ರಾಜೀನಾಮೆ ಬೆನ್ನಲ್ಲೇ 22 ಶಾಸಕರು ರಾಜೀನಾಮೆ ಸಲ್ಲಿಸಿ, ಸರ್ಕಾರದಿಂದ ಹೊರ ಬಂದಿದ್ದಾರೆ.
ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರವು ಬಹುಮತವನ್ನು ಕಳೆದುಕೊಂಡಿದೆ ಎಂದು ಬಿಜೆಪಿ ವಾದಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಸಿಎಂ ಕಮಲನಾಥ್ ವಿಶ್ವಾಸಮತಯಾಚನೆ ಮಾಡಬೇಕು ಎಂದು ಒತ್ತಾಯಿಸುತ್ತಿದೆ.

ರಾಜ್ಯಪಾಲರು ಮತ್ತು ಸ್ಪೀಕರ್ ಗೆ ಬಿಜೆಪಿ ಮೊರೆ:
ಸಿಎಂ ಕಮಲನಾಥ್ ನೇತೃತ್ವದಲ್ಲಿ 15 ತಿಂಗಳು ಅಧಿಕಾರ ನಡೆಸಿದ ಸರ್ಕಾರಕ್ಕೆ ಇದೀಗ ಆಪತ್ತು ಎದುರಾಗಿದೆ. 22 ಶಾಸಕರು ಸಲ್ಲಿಸಿದ ರಾಜೀನಾಮೆ ಪತ್ರವು ರಾಜ್ಯಪಾಲರು ಮತ್ತು ಸ್ಪೀಕರ್ ಬಳಿಯಿದೆ. ಈ ನಿಟ್ಟಿನಲ್ಲಿ ಬಜೆಟ್ ಅಧಿವೇಶನ ಆರಂಭಕ್ಕೂ ಮೊದಲೇ ಸ್ಪೀಕರ್ ಮತ್ತು ರಾಜ್ಯಪಾಲರು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಮಾರ್ಚ್.16ರಂದು ವಿಶ್ವಾಸ ಮತಯಾಚನೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಬಿಜೆಪಿ ಮುಖಂಡ ನಾರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
22 ಶಾಸಕರ ರಾಜೀನಾಮೆ ಅಂಗೀಕಾರವಾದರೇನು ಗತಿ?:
ಮಧ್ಯಪ್ರದೇಶದಲ್ಲಿ 228 ಶಾಸಕರ ಸಂಖ್ಯಾಬಲವಿದ್ದು ವಿಧಾನಸಭೆಯಲ್ಲಿ ಅಧಿಕಾರ ಗದ್ದುಗೆ ಏರಲು ಕನಿಷ್ಠ 114 ಶಾಸರ ಬೆಂಬಲ ಬೇಕಾಗುತ್ತದೆ. ಒಂದು ವೇಳೆ 22 ಶಾಸಕರ ರಾಜೀನಾಮೆಯು ಅಂಗೀಕಾರವಾದಲ್ಲಿ ಈ ಸಂಖ್ಯಾಬಲವು 206ಕ್ಕೆ ಇಳಿಕೆಯಾಗಲಿದೆ. ಆಗ ಸರ್ಕಾರ ರಚನೆಗೆ ಕನಿಷ್ಠ 104 ಸ್ಥಾನಗಳು ಬೇಕಾಗುತ್ತದೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ 107 ಶಾಸಕರನ್ನು ಹೊಂದಿದ್ದು, ಬಿಜೆಪಿ ಅಧಿಕಾರಕ್ಕೆ ಬರುವ ಲಕ್ಷಣಗಳು ಎದ್ದು ಕಾಣುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications