ಬಹುಕಾಲ ನೆನಪಿನಲ್ಲುಳಿಯುವ ಮಧ್ಯ ಪ್ರದೇಶ ಜಿದ್ದಾಜಿದ್ದಿ ಫೈಟ್!
ಭೋಪಾಲ್, ಡಿಸೆಂಬರ್ 11 : ಇನ್ನೇನು ಕಾಂಗ್ರೆಸ್ ಸರಳ ಬಹುಮತ ಪಡೆದು ಕಮಲ್ ನಾಥ್ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಿಬಿಡಬೇಕು ಎನ್ನುವಷ್ಟರಲ್ಲಿ ಮಧ್ಯ ಪ್ರದೇಶದಲ್ಲಿ ಚಿತ್ರಣ ಸ್ವಲ್ಪ ತಿರುವುಮುರುವಾಗಿದ್ದು, ಭಾರತೀಯ ಜನತಾ ಪಕ್ಷ ಇದ್ದಕ್ಕಿದ್ದಂತೆ ಮುನ್ನಡೆ ಪಡೆದುಕೊಂಡಿದೆ.
ಇದೇ ಟ್ರೆಂಡ್ ಅಂತಿಮ ಫಲಿತಾಂಶ ಬರುವವರೆಗೆ ಮುಂದುವರೆದರೆ, ಮಧ್ಯ ಪ್ರದೇಶದಲ್ಲಿ ವಿಧಾನಸಭೆ ಅತಂತ್ರವಾಗಲಿರುವುದು ನಿಶ್ಚಿತ. ಒಂದು ಕ್ಷಣ ಅದೃಷ್ಟ ಲಕ್ಷ್ಮಿ ಕಾಂಗ್ರೆಸ್ ಪರವಾಗಿದ್ದರೆ, ಮತ್ತೊಂದು ಘಳಿಗೆಯಲ್ಲಿ ಬಿಜೆಪಿ ಕಡೆ ಒಲಿಯುತ್ತಿದೆ. ಯಾವುದೇ ಪಕ್ಷಕ್ಕೆ ಬಹುಮತ ಸಾಬೀತುಪಡಿಸಲು ಬೇಕಿರುವ ಮ್ಯಾಜಿಕ್ ನಂಬರ್ 116.
ಬಹುಶಃ ಭಾರತದ ಚುನಾವಣಾ ಇತಿಹಾಸದಲ್ಲಿ ಇಷ್ಟು ತುರುಸಿನಿಂದ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಸ್ಪರ್ಧೆ ನಡೆದಿದ್ದೇ ಇಲ್ಲ. ಇದೀಗ ಫಲಿತಾಂಶ ರೋಚಕ ಹಂತಕ್ಕೆ ತಲುಪಿದ್ದು, ಯಾರು ಗೆಲ್ಲುತ್ತಾರೋ ಅವರೇ ಸಿಕಂದರ್ ಆಗಲಿದ್ದಾರೆ, ಇತಿಹಾಸವನ್ನೂ ನಿರ್ಮಿಸಲಿದ್ದಾರೆ.

ಈ ಮ್ಯಾಜಿಕ್ ನಂಬರ್ ಕಾಂಗ್ರೆಸ್ ಅಥವಾ ಬಿಜೆಪಿಗೆ ಸಿಗುವುದು ಅನುಮಾನವಾಗಿ ಕಾಣಿಸುತ್ತಿದೆ. ಏಕೆಂದರೆ, ಎರಡೂ ಬದ್ಧ ವೈರಿಗಳ ನಡುವಿನ ಚುನಾವಣಾ ಕಾದಾಟ ಅಷ್ಟು ತುರುಸಿನಿಂದ ಕೂಡಿದೆ. ಒಂದು ಕ್ಷಣ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೆ, ಮತ್ತೊಂದು ಕ್ಷಣ ಬಿಜೆಪಿ ಮುಂದೆ ಸಾಗುತ್ತಿದೆ.
ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷಕ್ಕೂ ಇದೇ ರೀತಿಯಾಗಿತ್ತು. ಒಂದು ಹಂತದಲ್ಲಿ 118ಕ್ಕೂ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ, ನೋಡ ನೋಡುತ್ತಿದ್ದಂತೆ ಇಳಿಕೆ ಕಂಡು, ಅಂತಿಮ ಫಲಿತಾಂಶ ಪ್ರಕಟವಾದಾಗ 104 ಸ್ಥಾನ ಪಡೆದು ಕರ್ನಾಟಕ ವಿಧಾನಸಭೆ ಅತಂತ್ರವಾಯಿತು. ಮುಂದೆ ನಡೆದಿದ್ದು ಇತಿಹಾಸ. ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಬೇಕೆಂದು ಕಾಂಗ್ರೆಸ್ ಪಕ್ಷ ಜೆಡಿಎಸ್ ಗೆ ಬೆಂಬಲ ಸೂಚಿಸಿ, ಅತೀ ಕಡಿಮೆ ಸ್ಥಾನ ಗೆದ್ದ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತಾಯಿತು.
ಆದರೆ, ಮಧ್ಯ ಪ್ರದೇಶದಲ್ಲಿ ಪರಿಸ್ಥಿತಿ ತುಸು ವಿಭಿನ್ನವಾಗಿದೆ. ಕರ್ನಾಟಕದಲ್ಲಿ ಮೂರನೇ ಪಕ್ಷವಾಗಿ ಜಾಜ್ಯತೀತ ಜನತಾದಳವಾದರೂ ಇತ್ತು, ಮಧ್ಯ ಪ್ರದೇಶದಲ್ಲಿ ಮೂರನೇ ಪಕ್ಷವೇ ಇಲ್ಲ, ಇದ್ದರೂ ಅಪ್ರಸ್ತುತ. ಆದರೆ, ಕೇವಲ 4 ಸ್ಥಾನಗಳನ್ನು ಗೆಲ್ಲಲಿರುವ ಬಹುಜನ ಸಮಾಜ ಪಕ್ಷವನ್ನು ಕಡೆಗಣಿಸುವಂತೆಯೇ ಇಲ್ಲ. ಭಾರೀ ಮಹತ್ವಾಕಾಂಕ್ಷೆಯ ರಾಜಕಾರಣಿ ಮಾಯಾವತಿ ಏನೇನು ರಾಜಕೀಯ ಆಟವಾಡುತ್ತಾರೋ, ಅದರ ಮೇಲೆ ಮುಂದಿನ ಸರಕಾರ ಯಾವುದಿರುತ್ತದೆ ಎಂಬುದು ನಿರ್ಧಾರವಾಗುತ್ತದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications