just in: ಬೈಕ್ನಲ್ಲಿ 50 ಕಿ.ಮೀ ತಾಯಿಯ ಶವ ಸಾಗಿಸಿದ ಮಗ
ಭೂಪಾಲ್, ಆ.01: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯೊಂದು ಶವ ವಾಹನವನ್ನು ನಿರಾಕರಿಸಿದ ನಂತರ ವ್ಯಕ್ತಿಯೊಬ್ಬರು ತನ್ನ ತಾಯಿಯ ಶವವನ್ನು ತನ್ನ ತಮ್ಮ ಬೈಕ್ನಲ್ಲಿ 50 ಕಿ.ಮೀ.ಗೂ ಹೆಚ್ಚು ದೂರ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತರನ್ನು ಜೈಮಂತ್ರಿ ಯಾದವ್ ಎಂದು ಗುರುತಿಸಲಾಗಿದ್ದು, ಇವರು ಮಧ್ಯಪ್ರದೇಶ-ಛತ್ತೀಸ್ಗಢ ಗಡಿಯ ಅನುಪ್ಪುರ್ ಜಿಲ್ಲೆಯ ನಿವಾಸಿ.
ಕೆಲ ದಿನಗಳ ಹಿಂದೆ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದರಿಂದ, ಅನುಪ್ಪುರ್ ಜಿಲ್ಲಾ ಆಸ್ಪತ್ರೆಯ ಅಧಿಕಾರಿಗಳು ಆಕೆಯನ್ನು ಪಕ್ಕದ ಜಿಲ್ಲೆಯ ವೈದ್ಯಕೀಯ ಕಾಲೇಜು ಮತ್ತು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ.

ಮಹಿಳೆ ಸಾವನ್ನಪ್ಪಿದ ನಂತರ, ಆಕೆಯ ಮಗ ಶವಸಂಸ್ಕಾರಕ್ಕೆ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಶವವಾಹನ ವ್ಯವಸ್ಥೆ ಮಾಡಲು ಪ್ರಯತ್ನಿಸಿದನು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಆಸ್ಪತ್ರೆಯಲ್ಲಿ ಯಾವುದೇ ಶವ ವಾಹನ ಲಭ್ಯವಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿಯೊಬ್ಬರು ಗುಟ್ಟಾಗಿ ಆತನಿಗೆ ತಿಳಿಸಿದ್ದಾರೆ.
ಬಳಿಕ ಖಾಸಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಅತಿಯಾದ ಶುಲ್ಕದ ಕಾರಣ ಅವರು ಮೃತದೇಹವನ್ನು ದ್ವಿಚಕ್ರ ವಾಹನದಲ್ಲಿ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದಾರೆ. ಮೃತದೇಹವನ್ನು ಬೆಡ್ಶೀಟ್ನಲ್ಲಿ ಸುತ್ತಿ ಬೈಕ್ಗೆ ಕಟ್ಟಿ ಸುಮಾರು 50 ಕಿ.ಮೀ. ಸಾಗಿದ್ದಾರೆ.
ಆಂಬ್ಯುಲೆನ್ಸ್ ಅಲಭ್ಯತೆಯಿಂದಾಗಿ ಶವಗಳನ್ನು ಕುಟುಂಬದವರೇ ತೆಗೆದುಕೊಂಡು ಹೋಗುವ ಇಂತಹ ಘಟನೆಗಳು ಮಧ್ಯಪ್ರದೇಶದಲ್ಲಿ ಇದೇ ಮೊದಲಲ್ಲ.
ಜುಲೈ 11 ರಂದು ಕೂಡ, ಗುನಾ ಜಿಲ್ಲೆಯಲ್ಲಿ 8 ವರ್ಷದ ಮಗು ತನ್ನ ಎರಡು ವರ್ಷದ ಸಹೋದರನ ಶವವನ್ನು ಮನೆಗೆ ತೆಗೆದುಕೊಂಡು ಹೋಗಲು ವಾಹನಕ್ಕಾಗಿ ಕಾಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications