ತೈಲ ಬೆಲೆ ಏರಿಕೆ: ಪೆಟ್ರೋಲ್ ಬಂಕ್ ನಲ್ಲಿ ವಿಶಿಷ್ಟ ಫೋಸ್ ಕೊಟ್ಟು ವ್ಯಕ್ತಿಯ ಪ್ರತಿಭಟನೆ
ಭೋಪಾಲ್, ಫೆ 19: ತೈಲ ಬೆಲೆ ಏರಿಕೆ ಜನಸಾಮಾನ್ಯರ ಜೀವನವನ್ನು ಹೈರಾಣ ಮಾಡುತ್ತಿದೆ. ಸಾರ್ವಜನಿಕರ ಯಾವ ಪ್ರತಿಭಟನೆ/ಆಕ್ರೋಶಕ್ಕೂ ಸರಕಾರ ಜಗ್ಗುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರ ಜಡಾಯಿಸುವ ತೆರಿಗೆಯನ್ನು ಕಮ್ಮಿ ಮಾಡಬೇಕು ಎನ್ನುವ ಯಾವ ಒತ್ತಡಕ್ಕೂ ಸರಕಾರ ಮಣಿಯುತ್ತಿಲ್ಲ.
ದೇಶದ ಕೆಲವು ಭಾಗಗಳಲ್ಲಿ (ಪ್ರಮುಖವಾಗಿ ತೈಲ ಸಾಗಣಿ ದೂರವಿರುವ ಪ್ರದೇಶಗಳಲ್ಲಿ) ಲೀಟರ್ ಒಂದರ ಬೆಲೆ ಶತಕ ದಾಟಿದೆ. ಬೆಂಗಳೂರಿನಲ್ಲಿ ಫೆಬ್ರವರಿ 18ರ ದರ 92.89. ಕಳೆದ ಹತ್ತು ದಿನದಿಂದ ಬೆಲೆ 2.67 ರೂಪಾಯಿ ಜಾಸ್ತಿಯಾಗಿದೆ.
ಇನ್ನು ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪೆಟ್ರೋಲ್ ಬೆಲೆ ನೂರು ರೂಪಾಯಿ ಗಡಿ ದಾಟಿದೆ. ಅಲ್ಲಿ ಪವರ್ ಪೆಟ್ರೋಲ್ ದರ ಲೀಟರ್ ಗೆ 100.04. ಬೆಲೆ ಏರಿಕೆಯನ್ನು ವಿರೋಧಿಸಿ ವ್ಯಕ್ತಿಯೊಬ್ಬ ಪೆಟ್ರೋಲ್ ಬಂಕ್ ಮುಂದೆ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾನೆ.

ಒಂದು ಕೈಯಲ್ಲಿ ಕ್ರಿಕೆಟ್ ಬ್ಯಾಟ್, ಇನ್ನೊಂದು ಕೈಯಲ್ಲಿ ಹೆಲ್ಮೆಟ್ ಇಟ್ಟುಕೊಂಡು, ಎರಡು ಕೈಯನ್ನು ಮೇಲೆಕೆತ್ತಿ ಪೆಟ್ರೋಲ್ ದರ ನೂರರ ಗಡಿ ದಾಡಿದ್ದನ್ನು ಅಣಕವಾಡಿದ್ದಾನೆ. ಸಾಮಾಜಿಕ ತಾಣದಲ್ಲಿ ಈ ಫೋಟೋ ವೈರಲ್ ಆಗಿದೆ.
ಈ ಫೋಟೋಗೆ ಹಲವರು ಒಕ್ಕಣೆ ಬರೆದು ಸರಕಾರದ ವಿರುದ್ದ ವ್ಯಂಗ್ಯವಾಡಿದ್ದಾರೆ. "ತುಂಬಾ ಪರಿಶ್ರಮದ ನಂತರ ಪೆಟ್ರೋಲ್ ಬೆಲೆ ನೂರು ರೂಪಾಯಿ ದಾಟಿದೆ"ಎಂದು ಒಬ್ಬರು ಬರೆದು ತಮಾಷೆ ಮಾಡಿದ್ದಾರೆ.
ಇನ್ನೊಬ್ಬರು, "ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯ ಶತಕವನ್ನು ನೋಡಲು ಅವರ ಅಭಿಮಾನಿಗಳು ಒಂದು ವರ್ಷದಿಂದ ಕಾಯುತ್ತಿದ್ದಾರೆ. ಈಗ ನೋಡಿ, ಯಾರು ಮೊದಲು ಶತಕ ಹೊಡೆದದ್ದು"ಎಂದು ಅಣಕವಾಡಲಾಗಿದೆ. (ಚಿತ್ರಕೃಪೆ: ಟ್ವಿಟ್ಟರ್)
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications