ಶಾಕಿಂಗ್ ಸುದ್ದಿ: ಒಂದೇ ಒಂದು ಲೀಟರ್ ಹಾಲಿನ ಬೆಲೆ 43 ರೂ. ಅಲ್ಲ 55 ರೂಪಾಯಿ!
ಭೋಪಾಲ್, ಫೆಬ್ರವರಿ.26: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್ ಎದುರಾಗಿದೆ. ಮಾರ್ಚ್.01ರಿಂದ ಹಾಲಿನ ದರದಲ್ಲೂ ಭಾರಿ ಏರಿಕೆಯಾಗುವ ಸುಳಿವು ಸಿಕ್ಕಿದೆೆ.
ಮಧ್ಯಪ್ರದೇಶದಲ್ಲಿ ರತ್ಲಮ್ ನಗರದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಮುಂಬರುವ ಮಾರ್ಚ್.01ರಿಂದ ಒಂದು ಲೀಟರ್ ಹಾಲಿನ ಮೇಲೆ 12 ರೂಪಾಯಿ ಹೆಚ್ಚಿಸುವುದಕ್ಕೆ ತೀರ್ಮಾನಿಸಲಾಗಿದೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡಿಎನ್ಎ ವರದಿ ಮಾಡಿದೆ.
ಮಧ್ಯಪ್ರದೇಶ ರತ್ಲಮ್ ನಗರದಲ್ಲಿರುವ ಕಾಳಿಕಾ ಮಠದ ಆವರಣದಲ್ಲಿರುವ ರಾಮ ಮಂದಿರದಲ್ಲಿ ಈ ಸಂಬಂಧ ಸಭೆ ನಡೆಸಲಾಗಿತ್ತು. 25 ಗ್ರಾಮಗಳ ಸದಸ್ಯರು ಸೇರಿದ ಸಭೆಯಲ್ಲಿ ಪ್ರತಿ ಲೀಟರ್ ಹಾಲಿನ ದರವನ್ನು 12 ರೂಪಾಯಿ ಹೆಚ್ಚಳ ಮಾಡುವುದಕ್ಕೆ ನಿರ್ಧರಿಸಲಾಯಿತು.

ಪ್ರತಿ ಲೀಟರ್ ಹಾಲಿನ ಮೇಲೆ 12 ರೂಪಾಯಿ ಹೆಚ್ಚಳ
ಮಧ್ಯಪ್ರದೇಶದಲ್ಲಿ ಪ್ರಸ್ತುತ ಒಂದು ಲೀಟರ್ ಹಾಲಿಗೆ 43 ರೂಪಾಯಿ ನೀಡಲಾಗುತ್ತಿದೆ. ಆದರೆ ಮುಂಬರುವ ಮಾರ್ಚ್.01ರಿಂದ ಅದೇ ಒಂದು ಲೀಟರ್ ಹಾಲಿನ ಬೆಲೆಯನ್ನು 55 ರೂಪಾಯಿಗೆ ನಿಗದಿಗೊಳಿಸಲು ನಿರ್ಧರಿಸಲಾಗಿದೆ ಎಂದು ಡಿಎನ್ಎ ವರದಿ ಮಾಡಿದೆ.

ಹಾಲು ಸಾಗಾಟವೇ ಬಲುದುಬಾರಿ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಹಾಲಿನ ಸಾಗಾಟ ವೆಚ್ಚವೇ ಹೆಚ್ಚಳವಾಗಿದೆ. ಇದರ ಜೊತೆಗೆ ಹೈನುಗಾರಿಕೆ ವೇಳೆ ಪ್ರಾಣಿಗಳ ಆಹಾರದ ಬೆಲೆಯೂ ದುಬಾರಿಯಾಗಿದೆ. ಒಂದು ವೇಳೆ ಹಾಲಿನ ಬೆಲೆ ಏರಿಕೆಗೆ ಒಪ್ಪಿಗೆ ನೀಡದಿದ್ದಲ್ಲಿ ನಾವು ಹಾಲು ಪೂರೈಕೆಯನ್ನೇ ನಿಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಲಾಗಿದೆ.

ಕೊವಿಡ್-19 ಬಿಕ್ಕಟ್ಟಿನಿಂದ ಹಾಲಿನ ಬೆಲೆ ಏರಿಕೆಗೆ ಕಡಿವಾಣ
ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚುವುದಕ್ಕೂ ಮೊದಲೇ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ವ್ಯಾಪಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿತ್ತು. ಪ್ರತಿ ಲೀಟರ್ ಮೇಲೆ 2 ರೂಪಾಯಿ ಹೆಚ್ಚಿಸುವ ಕುರಿತು ಒಪ್ಪಂದವನ್ನು ಮಾಡಿಕೊಳ್ಳುವುದಷ್ಟೇ ಬಾಕಿ ಉಳಿದಿತ್ತು. ಆದರೆ ಕೊವಿಡ್-19 ಬಿಕ್ಕಟ್ಟಿನ ಹಿನ್ನೆಲೆ ಬೆಲೆ ಏರಿಕೆ ನಿರ್ಧಾರವನ್ನು ಕೈ ಬಿಡಲಾಗಿತ್ತು.

ಹಸು ಸಾಕಾಣಿಕೆ ವೆಚ್ಚದ ಬಗ್ಗೆ ಉಲ್ಲೇಖಿಸಿದ ರೈತರು
ಮಧ್ಯಪ್ರದೇಶ ರತ್ಲಮ್ ಸುತ್ತಮುತ್ತಲಿನ 25 ಗ್ರಾಮಗಳಿಂದ ಆಗಮಿಸಿದ ರೈತರು ಸಭೆಯಲ್ಲಿ ಭಾಗವಹಿಸಿದ್ದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಹಾಲು ಸಾಗಾಣಿಕೆ ವೆಚ್ಚ ಹೆಚ್ಚಾಗುತ್ತಿದೆ. ಒಂದು ಹಸುವಿಗೆ ಒಂದರಿಂದ ಒಂದೂವರೆ ಲಕ್ಷ ರೂಪಾಯಿ ನೀಡಿ ಖರೀದಿಸಲಾಗುತ್ತಿದ್ದು, ಅದರ ಮೇವು ಮತ್ತು ಆಹಾರದ ಬೆಲೆಯೂ ಹೆಚ್ಚಳವಾಗಿದೆ. ಕಳೆದ ವರ್ಷವೇ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿತ್ತಾದರೂ, ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಆದ್ದರಿಂದ ಈ ಬಾರಿ ನಡೆಸಿದ ಸಭೆಯಲ್ಲಿ ಪ್ರತಿ ಲೀಟರ್ ಹಾಲಿನ ಬೆಲೆಯನ್ನು 43 ರೂಪಾಯಿಯಿಂದ 55 ರೂಪಾಯಿಗೆ ಏರಿಕೆ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಈ ಸಂಬಂಧ ನಗರದ ವ್ಯಾಪಾರಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದು ರತ್ಲಮ್ ಹಾಲು ಉತ್ಪಾದಕರ ಸಮಿತಿ ಅಧ್ಯಕ್ಷ ಹೀರಾಲಾಲ್ ಚೌಧರಿ ತಿಳಿಸಿದ್ದಾರೆ.
-
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications