ಜಮೀನು ಉಳುಮೆ ಮಾಡಿದ ಬುಡಕಟ್ಟು ಮಹಿಳೆಗೆ ಬೆಂಕಿ ಹಚ್ಚಿದ ದುರುಳರು
ಭೋಪಾಲ್, ಜು.4: ತನ್ನ ಕುಟುಂಬಕ್ಕೆ ಸರ್ಕಾರಿ ಕಲ್ಯಾಣ ಯೋಜನೆಯಲ್ಲಿ ಸಿಕ್ಕಿದ್ದ ಭೂಮಿಯನ್ನು ಪಡೆದುಕೊಂಡ 38 ವರ್ಷದ ಬುಡಕಟ್ಟು ಮಹಿಳೆಗೆ ಪುರುಷರ ಗುಂಪೊಂದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಗುನಾ ಜಿಲ್ಲೆಯ ಬುಡಕಟ್ಟು ಮಹಿಳೆ ರಾಂಪ್ಯಾರಿ ಸಹರಿಯಾ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೂವರು ಪುರುಷರು ಆಕೆಗೆ ಮೈದಾನದಲ್ಲಿ ಬೆಂಕಿ ಹಚ್ಚಿದ್ದು, ನಂತರ ವಿಡಿಯೋ ಮಾಡಿದ್ದಾರೆ. ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಈಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಿಳೆಯ ಪತಿ ಅರ್ಜುನ್ ಸಹಾರಿಯಾ ತಮ್ಮ ಪತ್ನಿ ಸುಟ್ಟ ಗಾಯಗಳೊಂದಿಗೆ ನೋವಿನಿಂದ ನರಳುತ್ತಿರುವುದನ್ನು ಮೈದಾನದಲ್ಲಿ ಕಂಡು ಆತಂಕಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಪಂಕಜ್ ಶ್ರೀವಾಸ್ತವ ತಿಳಿಸಿದ್ದಾರೆ.
A party that puts up Draupadi Murmu for the Presidential election allows such a terrible atrocity on a tribal woman. SHAMEFUL! https://t.co/2Us49Fa4BU
— Jairam Ramesh (@Jairam_Ramesh) July 3, 2022
ಅನೇಕ ವರ್ಷಗಳ ಹಿಂದೆ ಮಧ್ಯಪ್ರದೇಶ ಸರ್ಕಾರದ ಕಲ್ಯಾಣ ಯೋಜನೆಯಡಿ ಸಹಾರಿಯಾ ಅವರ ಕುಟುಂಬಕ್ಕೆ ಮಂಜೂರಾದ 6 ಬಿಘಾ ಭೂಮಿಯನ್ನು ಈಗ ಉಳುಮೆ ಮಾಡಿದ್ದಕ್ಕಾಗಿ ಒಬಿಸಿ ಸಮುದಾಯಕ್ಕೆ ಸೇರಿದ ಮೂವರು ಪುರುಷರು ತನಗೆ ಬೆಂಕಿ ಹಚ್ಚಿದ್ದಾರೆ ಎಂದು ಶ್ರೀಮತಿ ಸಹಾರಿಯಾ ತನ್ನ ಪತಿಗೆ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಜೂರಾದಾಗ ಭೂಮಿಯನ್ನು ಒಬಿಸಿ ಪುರುಷರು ಸ್ವಾಧೀನಪಡಿಸಿಕೊಂಡರು. ಇತ್ತೀಚಿಗೆ ಅದನ್ನು ಸ್ಥಳೀಯ ಕಂದಾಯ ಇಲಾಖೆಯು ಒತ್ತುವರಿದಾರರಿಂದ ಮುಕ್ತಗೊಳಿಸಿತು ಮತ್ತು ಸಹಾರಿಯಾ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು. ಸಹಾರಿಯಾ ಪತಿ ಅವರು ತಮ್ಮ ಜಮೀನಿಗೆ ಹೋಗುತ್ತಿದ್ದಾಗ, ಪ್ರತಾಪ್, ಹನುಮತ್ ಮತ್ತು ಶ್ಯಾಮ್ ಕಿರಾರ್ ಮತ್ತು ಅವರ ಕುಟುಂಬ ಸದಸ್ಯರು ಟ್ರ್ಯಾಕ್ಟರ್ನಲ್ಲಿ ಹೋಗುವುದನ್ನು ನೋಡಿದರು. ಆಗ ಆ ಕಡೆಯಿಂದ ಹೊಗೆ ಬರುತ್ತಿರುವುದನ್ನು ಕಂಡು ಅರ್ಜುನ್ ಸಹಾರಿಯಾ ಮೈದಾನದತ್ತ ಓಡಿದರು. ಅಲ್ಲಿಗೆ ತಲುಪಿದಾಗ ಗಾಯಗೊಂಡಿದ್ದ ಪತ್ನಿಯನ್ನು ಕಂಡರು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
ಅರ್ಜುನ್ ಸಹಾರಿಯಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಮತ್ತು ಎಫ್ಐಆರ್ ಹೆಸರಿಸಲಾದ ಮೂವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಪಂಕಜ್ ಶ್ರೀವಾಸ್ತವ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮುರನ್ನು ಮುಂದಿಟ್ಟುಕೊಂಡ ಪಕ್ಷವೊಂದು ಈಗ ಬುಡಕಟ್ಟು ಮಹಿಳೆಯ ಮೇಲೆ ಇಂತಹ ಭೀಕರ ದೌರ್ಜನ್ಯಕ್ಕೆ ಅವಕಾಶ ನೀಡಿದೆ. ಇದು ನಾಚಿಕೆಗೇಡು ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.
ಮೂವರು ವ್ಯಕ್ತಿಗಳ ಕುಟುಂಬದಿಂದ ತನಗೆ ಜೀವ ಬೆದರಿಕೆ ಇದೆ ಎಂದು ಅರ್ಜುನ್ ಸಹಾರಿಯಾ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಬಗ್ಗೆ ಪೊಲೀಸರು ಇನ್ನೂ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications