Get Updates
Get notified of breaking news, exclusive insights, and must-see stories!

ಮ.ಪ್ರ ಉಪ ಚುನಾವಣೆ ಫಲಿತಾಂಶ 2020: ಭಗವಂತ ಹನುಮಾನ್ ನಿಂದ ಕಮಲ್ ನಾಥ್‌ಗೆ ನ್ಯಾಯ: ದಿಗ್ವಿಜಯ ಸಿಂಗ್

ಭೋಪಾಲ್, ನವೆಂಬರ್ 10: ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ.

ಮಂಗಳವಾರ ದಿನವನ್ನು ಹನುಮಂತ ದೇವರ ದಿನವೆಂದು ಪರಿಗಣಿಸಲ್ಪಟ್ಟಿದ್ದರಿಂದ, ಉಪ ಚುನಾವಣೆ ಫಲಿತಾಂಶಗಳು ಹೊರಬರುವ ಮೊದಲು ಆತಂಕದಲ್ಲಿರು ರಾಜಕಾರಣಿಗಳು ತೀವ್ರ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವುದನ್ನು ಕಾಣಬಹುದಾಗಿದೆ.

ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ ನಾಥ್‌ಗೆ ಭಗವಾನ್ ಹನುಮಂತ ನ್ಯಾಯ ಒದಗಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

MP By-Election Results 2020: Will Justice To Kamalnath From Lord Hanuman: Digvijaya Singh

"ಮಧ್ಯಪ್ರದೇಶದಲ್ಲಿ ಮಂಗಳವಾರದಂದು ಉಪ ಚುನಾವಣೆ ಮತದಾನ ನಡೆದಿದ್ದು, ಮಂಗಳವಾರವೇ ಮತ ಎಣಿಕೆ ನಡೆಯುತ್ತಿದೆ. ಹನುಮಂತನ ಭಕ್ತ ಕಮಲ್ ನಾಥ್ ಜಿ ಅವರನ್ನು ನಿರಾಶೆಗೊಳಿಸುವುದಿಲ್ಲ ಎಂದು ನಾನು ನಂಬುತ್ತೇನೆ. ಮಾಜಿ ಸಿಎಂ ಕಮಲ್ ನಾಥ್ ಅವರಿಗೆ ನ್ಯಾಯ ಒದಗಿಸಲಾಗುತ್ತದೆ' ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಒಟ್ಟು 355 ಅಭ್ಯರ್ಥಿಗಳಿದ್ದು, ಅದರಲ್ಲಿ 12 ಮಂತ್ರಿಗಳು ಕಣದಲ್ಲಿದ್ದಾರೆ. 230 ಸದಸ್ಯರ ಅಸೆಂಬ್ಲಿಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಮತ್ತು ಸರಳ ಬಹುಮತವನ್ನು ಪಡೆಯಲು ಬಿಜೆಪಿ ಈ 28 ಸ್ಥಾನಗಳಲ್ಲಿ ಕನಿಷ್ಠ 8 ಸ್ಥಾನಗಳನ್ನು ಗೆಲ್ಲಬೇಕಾಗಿದೆ.

ಇಂದಿನ ಉಪ ಚುನಾವಣೆ ಫಲಿತಾಂಶ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್, ಅವರ ನಿಕಟಪೂರ್ವ ಸಿಎಂ ಕಮಲ್ ನಾಥ್ ಮತ್ತು ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+