ಮ.ಪ್ರ ಉಪ ಚುನಾವಣೆ ಫಲಿತಾಂಶ 2020: ಭಗವಂತ ಹನುಮಾನ್ ನಿಂದ ಕಮಲ್ ನಾಥ್ಗೆ ನ್ಯಾಯ: ದಿಗ್ವಿಜಯ ಸಿಂಗ್
ಭೋಪಾಲ್, ನವೆಂಬರ್ 10: ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ.
ಮಂಗಳವಾರ ದಿನವನ್ನು ಹನುಮಂತ ದೇವರ ದಿನವೆಂದು ಪರಿಗಣಿಸಲ್ಪಟ್ಟಿದ್ದರಿಂದ, ಉಪ ಚುನಾವಣೆ ಫಲಿತಾಂಶಗಳು ಹೊರಬರುವ ಮೊದಲು ಆತಂಕದಲ್ಲಿರು ರಾಜಕಾರಣಿಗಳು ತೀವ್ರ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವುದನ್ನು ಕಾಣಬಹುದಾಗಿದೆ.
ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ ನಾಥ್ಗೆ ಭಗವಾನ್ ಹನುಮಂತ ನ್ಯಾಯ ಒದಗಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.

"ಮಧ್ಯಪ್ರದೇಶದಲ್ಲಿ ಮಂಗಳವಾರದಂದು ಉಪ ಚುನಾವಣೆ ಮತದಾನ ನಡೆದಿದ್ದು, ಮಂಗಳವಾರವೇ ಮತ ಎಣಿಕೆ ನಡೆಯುತ್ತಿದೆ. ಹನುಮಂತನ ಭಕ್ತ ಕಮಲ್ ನಾಥ್ ಜಿ ಅವರನ್ನು ನಿರಾಶೆಗೊಳಿಸುವುದಿಲ್ಲ ಎಂದು ನಾನು ನಂಬುತ್ತೇನೆ. ಮಾಜಿ ಸಿಎಂ ಕಮಲ್ ನಾಥ್ ಅವರಿಗೆ ನ್ಯಾಯ ಒದಗಿಸಲಾಗುತ್ತದೆ' ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಒಟ್ಟು 355 ಅಭ್ಯರ್ಥಿಗಳಿದ್ದು, ಅದರಲ್ಲಿ 12 ಮಂತ್ರಿಗಳು ಕಣದಲ್ಲಿದ್ದಾರೆ. 230 ಸದಸ್ಯರ ಅಸೆಂಬ್ಲಿಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಮತ್ತು ಸರಳ ಬಹುಮತವನ್ನು ಪಡೆಯಲು ಬಿಜೆಪಿ ಈ 28 ಸ್ಥಾನಗಳಲ್ಲಿ ಕನಿಷ್ಠ 8 ಸ್ಥಾನಗಳನ್ನು ಗೆಲ್ಲಬೇಕಾಗಿದೆ.
ಇಂದಿನ ಉಪ ಚುನಾವಣೆ ಫಲಿತಾಂಶ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವಾಣ್, ಅವರ ನಿಕಟಪೂರ್ವ ಸಿಎಂ ಕಮಲ್ ನಾಥ್ ಮತ್ತು ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications